ತಂದೆ ಮಗನ ನಡುವೆ ಜಗಳ ಬೀದಿಗೆ ಬಿದ್ದಿದ್ದು, ಬೀದಿಯಲ್ಲಿ ಅಪ್ಪ ಮಗನ ಜಗಳ ಅತಿರೇಕಕ್ಕೆ ಹೋಗಿದೆ. ಸಿಟ್ಟಿಗೆದ್ದ ಮಗನು ತನ್ನ ಕಾರಿಂದ ಅಪ್ಪನ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ತಂದೆ-ಮಗನ ಬೀದಿ ಜಗಳಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಪ್ಪನ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಆ ಇಬ್ಬರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.
ತಂದೆ ಸತೀಶ್ ಶರ್ಮಾ ನಿವೃತ್ತ ಹಿರಿಯ ರಕ್ಷಣಾ ಅಧಿಕಾರಿ. ಇವರು ಮುಂಬೈನಲ್ಲಿ ನೆಲೆಸಿದ್ದಾರೆ. ಮಗ ಮತ್ತು ಸೊಸೆಯ ನಡುವಿನ ಜಗಳ ಬಗೆಹರಿಸಲು ಪತ್ನಿ ಹಾಗೂ ಕಿರಿಯ ಪುತ್ರನೊಂದಿಗೆ ಅಂಬರನಾಥಕ್ಕೆ ಬಂದಿದ್ದರು. ಮಗ ಬಿಂದೇಶ್ವರ್ ಶರ್ಮಾ ಅವರ ಮನೆಗೆ ಬಂದಾಗ ಅವರು ಇರಲಿಲ್ಲ. ಸೊಸೆಯನ್ನು ಸಮಾಧಾನಪಡಿಸಿ ಮುಂಬೈಗೆ ವಾಪಸಾಗುತ್ತಿದ್ದಾಗ ಈ ಘಟನೆ ನಡೆದಿದೆ.
ಮನೆಯಲ್ಲಿ ಕೌಟುಂಬಿಕ ಕಲಹ ಬಗೆಹರಿಯದೆ ಸಾರ್ವಜನಿಕ ಪ್ರದೇಶದಲ್ಲಿ ತೊಂದರೆ ಕೊಟ್ಟಿದ್ದಕ್ಕೆ ಕೆಲ ಸಾರ್ವಜನಿಕರು ಸಫಾರಿ ಕಾರನ್ನು ಧ್ವಂಸಗೊಳಿಸಿ ಆಕ್ರೋಶ ಹೊರಹಾಕಿದರು.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…