ತಂದೆ ಮಗನ ನಡುವೆ ಜಗಳ ಬೀದಿಗೆ ಬಿದ್ದಿದ್ದು, ಬೀದಿಯಲ್ಲಿ ಅಪ್ಪ ಮಗನ ಜಗಳ ಅತಿರೇಕಕ್ಕೆ ಹೋಗಿದೆ. ಸಿಟ್ಟಿಗೆದ್ದ ಮಗನು ತನ್ನ ಕಾರಿಂದ ಅಪ್ಪನ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ತಂದೆ-ಮಗನ ಬೀದಿ ಜಗಳಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಪ್ಪನ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಆ ಇಬ್ಬರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.
ತಂದೆ ಸತೀಶ್ ಶರ್ಮಾ ನಿವೃತ್ತ ಹಿರಿಯ ರಕ್ಷಣಾ ಅಧಿಕಾರಿ. ಇವರು ಮುಂಬೈನಲ್ಲಿ ನೆಲೆಸಿದ್ದಾರೆ. ಮಗ ಮತ್ತು ಸೊಸೆಯ ನಡುವಿನ ಜಗಳ ಬಗೆಹರಿಸಲು ಪತ್ನಿ ಹಾಗೂ ಕಿರಿಯ ಪುತ್ರನೊಂದಿಗೆ ಅಂಬರನಾಥಕ್ಕೆ ಬಂದಿದ್ದರು. ಮಗ ಬಿಂದೇಶ್ವರ್ ಶರ್ಮಾ ಅವರ ಮನೆಗೆ ಬಂದಾಗ ಅವರು ಇರಲಿಲ್ಲ. ಸೊಸೆಯನ್ನು ಸಮಾಧಾನಪಡಿಸಿ ಮುಂಬೈಗೆ ವಾಪಸಾಗುತ್ತಿದ್ದಾಗ ಈ ಘಟನೆ ನಡೆದಿದೆ.
ಮನೆಯಲ್ಲಿ ಕೌಟುಂಬಿಕ ಕಲಹ ಬಗೆಹರಿಯದೆ ಸಾರ್ವಜನಿಕ ಪ್ರದೇಶದಲ್ಲಿ ತೊಂದರೆ ಕೊಟ್ಟಿದ್ದಕ್ಕೆ ಕೆಲ ಸಾರ್ವಜನಿಕರು ಸಫಾರಿ ಕಾರನ್ನು ಧ್ವಂಸಗೊಳಿಸಿ ಆಕ್ರೋಶ ಹೊರಹಾಕಿದರು.
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…
ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…
ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…
ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…
ಬೆಂಗಳೂರು ಗ್ರಾಮಾಂತರ: ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿ ಕೆಐಎಡಿಬಿ ಹಾಗೂ…