ತಂದೆ ಮಗನ ನಡುವೆ ಜಗಳ ಬೀದಿಗೆ ಬಿದ್ದಿದ್ದು, ಬೀದಿಯಲ್ಲಿ ಅಪ್ಪ ಮಗನ ಜಗಳ ಅತಿರೇಕಕ್ಕೆ ಹೋಗಿದೆ. ಸಿಟ್ಟಿಗೆದ್ದ ಮಗನು ತನ್ನ ಕಾರಿಂದ ಅಪ್ಪನ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ತಂದೆ-ಮಗನ ಬೀದಿ ಜಗಳಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಪ್ಪನ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಆ ಇಬ್ಬರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.
ತಂದೆ ಸತೀಶ್ ಶರ್ಮಾ ನಿವೃತ್ತ ಹಿರಿಯ ರಕ್ಷಣಾ ಅಧಿಕಾರಿ. ಇವರು ಮುಂಬೈನಲ್ಲಿ ನೆಲೆಸಿದ್ದಾರೆ. ಮಗ ಮತ್ತು ಸೊಸೆಯ ನಡುವಿನ ಜಗಳ ಬಗೆಹರಿಸಲು ಪತ್ನಿ ಹಾಗೂ ಕಿರಿಯ ಪುತ್ರನೊಂದಿಗೆ ಅಂಬರನಾಥಕ್ಕೆ ಬಂದಿದ್ದರು. ಮಗ ಬಿಂದೇಶ್ವರ್ ಶರ್ಮಾ ಅವರ ಮನೆಗೆ ಬಂದಾಗ ಅವರು ಇರಲಿಲ್ಲ. ಸೊಸೆಯನ್ನು ಸಮಾಧಾನಪಡಿಸಿ ಮುಂಬೈಗೆ ವಾಪಸಾಗುತ್ತಿದ್ದಾಗ ಈ ಘಟನೆ ನಡೆದಿದೆ.
ಮನೆಯಲ್ಲಿ ಕೌಟುಂಬಿಕ ಕಲಹ ಬಗೆಹರಿಯದೆ ಸಾರ್ವಜನಿಕ ಪ್ರದೇಶದಲ್ಲಿ ತೊಂದರೆ ಕೊಟ್ಟಿದ್ದಕ್ಕೆ ಕೆಲ ಸಾರ್ವಜನಿಕರು ಸಫಾರಿ ಕಾರನ್ನು ಧ್ವಂಸಗೊಳಿಸಿ ಆಕ್ರೋಶ ಹೊರಹಾಕಿದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…