ಕೋಲಾರ: ನಗರದ ಕೀಲುಕೋಟೆಯ ಬೀರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ತಾಲ್ಲೂಕಿನ ಹುತ್ತೂರು ಹೋಬಳಿಯ ಅಜ್ಜಪನಹಳ್ಳಿ ಗ್ರಾಮದಲ್ಲಿ ಭಾನುವಾರ ಬೀರೇಶ್ವರ ಸ್ವಾಮಿಯ ಮೆರವಣಿಗೆ ಪರ್ವ ನಡೆಯಿತು.
ಈ ಸಂದರ್ಭದಲ್ಲಿ ಸ್ವಾಮಿಯ ಕುಲಸ್ಥರಾದ ಗ್ರಾಮ್ ಶಂಕರಪ್ಪ, ಚಿಕ್ಕಣ್ಣ, ನವೀನ್, ನಾಗರಾಜ್ (ಎಸ್ಎಂಟಿ) ಅವರು ಪರ್ವಕ್ಕೆ ಸ್ವಾಗತ ಕೋರಿದರು ಗ್ರಾಮದ ಚನ್ನರಾಯಸ್ವಾಮಿ ದೇವಾಲಯದ ಬಳಿ ಮೆರವಣಿಗೆ ಪರ್ವ ಬಂದಾಗ ತಲೆಯ ಮೇಲೆ ತೆಂಗಿನ ಕಾಯಿ ಇಟ್ಟು ಒಡೆಯುವ ಪವಾಡ ಗಮನ ಸೆಳೆಯಿತು. ಗ್ರಾಮದಲ್ಲಿರುವ ಕುರುಬ ಸಮುದಾಯದ ಹಾಲುಮತಸ್ಥ ಕುಟುಂಬದವರು ಸೇರಿ ಭಕ್ತಭಾವದಿಂದ ಕಾರ್ಯಕ್ರಮ ನಡೆಸಿಕೊಟ್ಟರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ನೂರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.
ಇದೇ ತಿಂಗಳು 21, 22 ಹಾಗೂ 23ರಂದು ಮೂರು ದಿನಗಳ ಕಾಲ ಬೀರೇಶ್ವರ ಜಾತ್ರಾ ಮಹೋತ್ಸವ ನಡೆಯಲಿದೆ. ಸುಮಾರು 9 ವರ್ಷಗಳಲ್ಲಿ ನಡೆಯುತ್ತಿರುವ ಜಾತ್ರೆ ಇದಾಗಿದೆ. 3 ವರ್ಷಗಳ ಹಿಂದೆ ಜಾತ್ರೆಗೆ ಸಿದ್ಧತೆ ಮಾಡಿಕೊಂಡಿದ್ದಾಗ ಕೋವಿಡ್ ಬಂದ ಕಾರಣ ನಿಲ್ಲಿಸಿದೆ. ಈಗ ಮತ್ತೆ ಸಿದ್ಧತೆ ನಡೆಯುತ್ತಿದ್ದು, ಪರ್ವವು ಎಲ್ಲಾ ಕುಲಸ್ಥರ ಮನೆಗೆ ತೆರಳಲಿದೆ ಎಂದು ಗ್ರಾಮದ ಮುಖಂಡರು ತಿಳಿಸಿದರು.
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…