Categories: ಕೋಲಾರ

ಬೀರೇಶ್ವರಸ್ವಾಮಿ ಮೆರವಣಿಗೆ ಪರ್ವ, ತೆಂಗಿನಕಾಯಿ ಪವಾಡ

ಕೋಲಾರ: ನಗರದ ಕೀಲುಕೋಟೆಯ ಬೀರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ತಾಲ್ಲೂಕಿನ ಹುತ್ತೂರು ಹೋಬಳಿಯ ಅಜ್ಜಪನಹಳ್ಳಿ ಗ್ರಾಮದಲ್ಲಿ ಭಾನುವಾರ ಬೀರೇಶ್ವರ ಸ್ವಾಮಿಯ ಮೆರವಣಿಗೆ ಪರ್ವ ನಡೆಯಿತು.

ಈ ಸಂದರ್ಭದಲ್ಲಿ ಸ್ವಾಮಿಯ ಕುಲಸ್ಥರಾದ ಗ್ರಾಮ್ ಶಂಕರಪ್ಪ‌, ಚಿಕ್ಕಣ್ಣ, ನವೀನ್, ನಾಗರಾಜ್ (ಎಸ್‌ಎಂಟಿ) ಅವರು ಪರ್ವಕ್ಕೆ ಸ್ವಾಗತ ಕೋರಿದರು ಗ್ರಾಮದ ಚನ್ನರಾಯಸ್ವಾಮಿ ದೇವಾಲಯದ ಬಳಿ ಮೆರವಣಿಗೆ ಪರ್ವ ಬಂದಾಗ ತಲೆಯ ಮೇಲೆ ತೆಂಗಿನ ಕಾಯಿ ಇಟ್ಟು ಒಡೆಯುವ ಪವಾಡ ಗಮನ ಸೆಳೆಯಿತು. ಗ್ರಾಮದಲ್ಲಿರುವ ಕುರುಬ ಸಮುದಾಯದ ಹಾಲುಮತಸ್ಥ ಕುಟುಂಬದವರು ಸೇರಿ ಭಕ್ತಭಾವದಿಂದ ಕಾರ್ಯಕ್ರಮ ನಡೆಸಿಕೊಟ್ಟರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ನೂರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.

ಇದೇ ತಿಂಗಳು 21, 22 ಹಾಗೂ 23ರಂದು ಮೂರು ದಿನಗಳ ಕಾಲ ಬೀರೇಶ್ವರ ಜಾತ್ರಾ ಮಹೋತ್ಸವ ನಡೆಯಲಿದೆ. ಸುಮಾರು 9 ವರ್ಷಗಳಲ್ಲಿ ನಡೆಯುತ್ತಿರುವ ಜಾತ್ರೆ ಇದಾಗಿದೆ. 3 ವರ್ಷಗಳ ಹಿಂದೆ ಜಾತ್ರೆಗೆ ಸಿದ್ಧತೆ ಮಾಡಿಕೊಂಡಿದ್ದಾಗ ಕೋವಿಡ್‌ ಬಂದ ಕಾರಣ ನಿಲ್ಲಿಸಿದೆ. ಈಗ ಮತ್ತೆ ಸಿದ್ಧತೆ ನಡೆಯುತ್ತಿದ್ದು, ಪರ್ವವು ಎಲ್ಲಾ ಕುಲಸ್ಥರ ಮನೆಗೆ ತೆರಳಲಿದೆ ಎಂದು ಗ್ರಾಮದ ಮುಖಂಡರು ತಿಳಿಸಿದರು.

Ramesh Babu

Journalist

Recent Posts

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

3 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

4 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

7 hours ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

9 hours ago

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

22 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

22 hours ago