ಕೋಲಾರ: ನಗರದ ಕೀಲುಕೋಟೆಯ ಬೀರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ತಾಲ್ಲೂಕಿನ ಹುತ್ತೂರು ಹೋಬಳಿಯ ಅಜ್ಜಪನಹಳ್ಳಿ ಗ್ರಾಮದಲ್ಲಿ ಭಾನುವಾರ ಬೀರೇಶ್ವರ ಸ್ವಾಮಿಯ ಮೆರವಣಿಗೆ ಪರ್ವ ನಡೆಯಿತು.
ಈ ಸಂದರ್ಭದಲ್ಲಿ ಸ್ವಾಮಿಯ ಕುಲಸ್ಥರಾದ ಗ್ರಾಮ್ ಶಂಕರಪ್ಪ, ಚಿಕ್ಕಣ್ಣ, ನವೀನ್, ನಾಗರಾಜ್ (ಎಸ್ಎಂಟಿ) ಅವರು ಪರ್ವಕ್ಕೆ ಸ್ವಾಗತ ಕೋರಿದರು ಗ್ರಾಮದ ಚನ್ನರಾಯಸ್ವಾಮಿ ದೇವಾಲಯದ ಬಳಿ ಮೆರವಣಿಗೆ ಪರ್ವ ಬಂದಾಗ ತಲೆಯ ಮೇಲೆ ತೆಂಗಿನ ಕಾಯಿ ಇಟ್ಟು ಒಡೆಯುವ ಪವಾಡ ಗಮನ ಸೆಳೆಯಿತು. ಗ್ರಾಮದಲ್ಲಿರುವ ಕುರುಬ ಸಮುದಾಯದ ಹಾಲುಮತಸ್ಥ ಕುಟುಂಬದವರು ಸೇರಿ ಭಕ್ತಭಾವದಿಂದ ಕಾರ್ಯಕ್ರಮ ನಡೆಸಿಕೊಟ್ಟರು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ನೂರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.
ಇದೇ ತಿಂಗಳು 21, 22 ಹಾಗೂ 23ರಂದು ಮೂರು ದಿನಗಳ ಕಾಲ ಬೀರೇಶ್ವರ ಜಾತ್ರಾ ಮಹೋತ್ಸವ ನಡೆಯಲಿದೆ. ಸುಮಾರು 9 ವರ್ಷಗಳಲ್ಲಿ ನಡೆಯುತ್ತಿರುವ ಜಾತ್ರೆ ಇದಾಗಿದೆ. 3 ವರ್ಷಗಳ ಹಿಂದೆ ಜಾತ್ರೆಗೆ ಸಿದ್ಧತೆ ಮಾಡಿಕೊಂಡಿದ್ದಾಗ ಕೋವಿಡ್ ಬಂದ ಕಾರಣ ನಿಲ್ಲಿಸಿದೆ. ಈಗ ಮತ್ತೆ ಸಿದ್ಧತೆ ನಡೆಯುತ್ತಿದ್ದು, ಪರ್ವವು ಎಲ್ಲಾ ಕುಲಸ್ಥರ ಮನೆಗೆ ತೆರಳಲಿದೆ ಎಂದು ಗ್ರಾಮದ ಮುಖಂಡರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…