Categories: ಲೇಖನ

ಬುದ್ದ ಪ್ರಜ್ಞೆಯ ಬೆಳಕಿನಲ್ಲಿ ಪಾಕಿಸ್ತಾನದ ದುಸ್ಥಿತಿ ಕಂಡಾಗ…..

ಸರ್ವೇ ಜನೋ ಸುಖಿನೋ ಭವಂತು……..

ನಮ್ಮ ನೆರೆಯ ದೇಶ ಮತ್ತು ಒಂದು ಕಾಲದ ನಮ್ಮದೇ ದೇಶದ ಭಾಗವಾಗಿದ್ದ ಪಾಕಿಸ್ತಾನ ಇತ್ತೀಚಿನ ಸುದ್ದಿಗಳ ಪ್ರಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಮತ್ತು ದಿವಾಳಿತನದ ಅಂಚಿನಲ್ಲಿದೆ……..

ದೇಶವೇ ಇರಲಿ, ವೈಯಕ್ತಿಕ ಬದುಕೇ ಇರಲಿ, ನಮ್ಮ ಕ್ರಿಯೆ ಪ್ರತಿಕ್ರಿಯೆಗಳು ನಮ್ಮ ಜೀವನಮಟ್ಟವನ್ನು ನಿರ್ಧರಿಸುತ್ತದೆ. ಅಪರೂಪದ ಕೆಲವು ಆಕಸ್ಮಿಕ ಸಂದರ್ಭಗಳಲ್ಲಿ ಮಾತ್ರ ಇದಕ್ಕೆ ಅಪವಾದ ಇರಬಹುದು……

ಧರ್ಮದ ಆಧಾರದ ಮೇಲೆ ದೇಶದ ನಿರ್ಮಾಣ, ಭಯೋತ್ಪಾದನೆಗೆ ಸಹಕಾರ, ಕೋವಿಡ್ ವೈರಸ್ ದಾಳಿ, ಅಮೆರಿಕ ದೇಶದ ವಿರೋಧದ ಕಾರಣದಿಂದ ಅವರ ನೆರವಿನ ಖೋತಾ, ದೇಶದ ರಾಜಕಾರಣಿಗಳ ಭ್ರಷ್ಟಾಚಾರ, ರಾಜಕೀಯ ಅಸ್ಥಿರತೆ ಮುಂತಾದ ಅನೇಕ ಕಾರಣಗಳಿಗಾಗಿ ಅದು ಈ ಪರಿಸ್ಥಿತಿ ತಲುಪಿರಬಹುದು….

ಇದು ಸಹ ಶಾಶ್ವತವೇನು ಅಲ್ಲ. ದೇಶ ತಪ್ಪುಗಳನ್ನು ತಿದ್ದಿಕೊಂಡು ಮುನ್ನಡೆದರೆ ಮತ್ತೆ ಕೆಲವೇ ವರ್ಷಗಳಲ್ಲಿ ಸುಸ್ಥಿತಿಗೆ ಮರಳಬಹುದು. ಹಾಗಾಗಲಿ ಎಂದು ಶುಭ ಹಾರೈಸುತ್ತಾ…….

ಮುಖ್ಯವಾಗಿ ಭಾರತದ ಕೆಲವು ಎಲೆಕ್ಟ್ರಾನಿಕ್ ಸುದ್ದಿ ಮಾಧ್ಯಮಗಳು ಪಾಕಿಸ್ತಾನದ ಆ ದುಸ್ಥಿತಿಯನ್ನು ಸಂಭ್ರಮಿಸುವ ರೀತಿಯ ಸುದ್ದಿ ಪ್ರಸಾರ ಮಾಡುವುದು ಪತ್ರಿಕಾ ಧರ್ಮಕ್ಕೆ ವಿರುದ್ಧವಾಗಿದೆ. ಒಬ್ಬ ವ್ಯಕ್ತಿ ಅಥವಾ ಒಂದು ದೇಶ ಅವರು ನಮ್ಮ ‌ವಿರೋಧಿಗಳೇ ಆಗಿರಲಿ ಅವರಿಗೆ ಕಷ್ಟ ಬಂದಾಗ ಸಹಾಯ ಮಾಡುವುದು – ಬಿಡುವುದು ಅವರವರ ಇಚ್ಚೆ. ಆದರೆ ಕಷ್ಟದಲ್ಲಿರುವವರನ್ನು ಅವರ ಪರಿಸ್ಥಿತಿ ಕಂಡು ಹಿಯಾಳಿಸುವುದು ತಪ್ಪಾಗುತ್ತದೆ. ಮಾನವೀಯ ಧರ್ಮದ ವಿರೋಧವಾಗುತ್ತದೆ….

ಅದಕ್ಕೆ ಬದಲಾಗಿ ಭಾರತ ಪಾಕಿಸ್ತಾನಕ್ಕೆ ಮುಖ್ಯವಾಗಿ ಅದರ ಪುನಃಶ್ಚೇತನಕ್ಕೆ ಸ್ವಲ್ಪ ಸಹಾಯ ಮಾಡಿದರೆ ಖಂಡಿತ ಬಹಳಷ್ಟು ಪಾಕಿಸ್ತಾನಿಯರಲ್ಲಿ ಭಾರತದ ಬಗ್ಗೆ ಇರುವ ದ್ವೇಷ ಕಡಿಮೆಯಾಗಿ ಒಂದಷ್ಟು ಪ್ರೀತಿ ಅಭಿಮಾನ ಬೆಳೆಯಬಹುದು…..

ಇಡೀ ಪಾಕಿಸ್ತಾನದ ಜನರೆಲ್ಲಾ ಭಯೋತ್ಪಾದಕರಲ್ಲ. ಎಲ್ಲೋ ಕೆಲವು ಧರ್ಮಾಂಧರು ಮಾತ್ರ ದಾರಿ ತಪ್ಪಿದ್ದಾರೆ ಮತ್ತು ಭಾರತಕ್ಕೆ ಅಪಾಯಕಾರಿಯಾಗಿದ್ದಾರೆ. ಪಾಕಿಸ್ತಾನ ಸಹ ಭಯೋತ್ಪಾದನೆಯಿಂದ ಸಾಕಷ್ಟು ನಲುಗಿದೆ…..

ಪಾಕಿಸ್ತಾನದಲ್ಲಿಯೂ ಕುಟುಂಬ, ಪ್ರೀತಿ, ಸಂಬಂಧಗಳು, ಸಂಸ್ಕಾರಗಳು, ಭಾವನೆಗಳು ಎಲ್ಲವೂ ನಮ್ಮಂತೆಯೇ ಇರುತ್ತದೆ. ಎಲ್ಲಾ ನಾಗರಿಕತೆಗಳಲ್ಲೂ ಮನುಷ್ಯ ಭಾವನೆಗಳು ಬಹುತೇಕ ಒಂದೇ ರೀತಿಯಲ್ಲಿ ಇರುತ್ತದೆ. ಸ್ವಲ್ಪ ರೂಪ ಮತ್ತು ಭಾವ ತೀವ್ರತೆಯಲ್ಲಿ ವ್ಯತ್ಯಾಸ ಇರಬಹುದು…..

ಕಷ್ಟದ ಸಮಯದ ಸಹಾಯ ಎಂತಹ ಕಲ್ಲು ಹೃದಯವನ್ನು ಕರಗಿಸಬಲ್ಲದು. ಆದರೆ ಮಾಧ್ಯಮಗಳು ಸಾಮಾನ್ಯ ಹೃದಯವನ್ನು ಕಲ್ಲು ಹೃದಯವಾಗಿ ಮಾರ್ಪಡಿಸುವ ದ್ವೇಷ ಅಸೂಯೆ ರೀತಿಯ ವಿಷಯಗಳನ್ನು ಪ್ರಸ್ತಾಪ ಮಾಡಿ ಸಾಮಾನ್ಯ ಜನರ ಉರಿಯುವ ಮನಸ್ಸುಗಳ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿರುವುದು ಅವರು ಬಹುತೇಕ ನಾಗರಿಕ ಸಮಾಜದಿಂದ ದೂರ ಸರಿಯುತ್ತಿರುವ ಲಕ್ಷಣಗಳು ಕಾಣಿಸುತ್ತಿವೆ……

ಯಾವುದೇ ಪರಿಸ್ಥಿತಿಯಲ್ಲಿ ಕ್ರಿಯೆ ಪ್ರತಿಕ್ರಿಯೆಗಳು ನಮ್ಮ ಯೋಗ್ಯತೆಯನ್ನು ಸಹ ಅನಾವರಣ ಮಾಡುತ್ತವೆ. ಅದರ ಅರಿವು ಸದಾ ಜಾಗೃತಾವಸ್ಥೆಯಲ್ಲಿ ಇರಲಿ. ನಮ್ಮ ನೆರೆಹೊರೆಯವರು ಸಂಪೂರ್ಣ ದಿವಾಳಿಯಾದರೆ ಅದರ ದುಷ್ಪರಿಣಾಮ ನಮಗೂ ತಟ್ಟುತ್ತದೆ ಬೇರೆ ರೀತಿಯಲ್ಲಿ….

ಮಾಧ್ಯಮಗಳ ಪ್ರೇರಿತ ಅಭಿಪ್ರಾಯಗಳು ಅತ್ಯಂತ ಅಪಾಯಕಾರಿಯಾಗುತ್ತಿರುವ ಸನ್ನಿವೇಶದಲ್ಲಿ ಬುದ್ದನ ಸಂದೇಶಗಳು ನಮ್ಮ ಎದೆಯೊಳಗೆ ಬೆಳಗುತ್ತಿರಲಿ……

ಬುದ್ದ ಪೂರ್ಣಿಮೆಯ ಮುನ್ನ ಬುದ್ದ ಪ್ರಜ್ಞೆ ಜಾಗೃತವಾಗಲಿ ಎಂದು ಆಶಿಸುತ್ತಾ…..

ದ್ವೇಷ ಅಸೂಯೆಯ ಬೆಂಕಿ ತನ್ನನ್ನೂ ಸುಡುತ್ತದೆ ಎಂದು ಎಚ್ಚರಿಸುತ್ತಾ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

4 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

9 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

9 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

17 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago