Categories: ಲೇಖನ

ಬುದ್ದ ಪ್ರಜ್ಞೆಯ ಬೆಳಕಿನಲ್ಲಿ ಪಾಕಿಸ್ತಾನದ ದುಸ್ಥಿತಿ ಕಂಡಾಗ…..

ಸರ್ವೇ ಜನೋ ಸುಖಿನೋ ಭವಂತು……..

ನಮ್ಮ ನೆರೆಯ ದೇಶ ಮತ್ತು ಒಂದು ಕಾಲದ ನಮ್ಮದೇ ದೇಶದ ಭಾಗವಾಗಿದ್ದ ಪಾಕಿಸ್ತಾನ ಇತ್ತೀಚಿನ ಸುದ್ದಿಗಳ ಪ್ರಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಮತ್ತು ದಿವಾಳಿತನದ ಅಂಚಿನಲ್ಲಿದೆ……..

ದೇಶವೇ ಇರಲಿ, ವೈಯಕ್ತಿಕ ಬದುಕೇ ಇರಲಿ, ನಮ್ಮ ಕ್ರಿಯೆ ಪ್ರತಿಕ್ರಿಯೆಗಳು ನಮ್ಮ ಜೀವನಮಟ್ಟವನ್ನು ನಿರ್ಧರಿಸುತ್ತದೆ. ಅಪರೂಪದ ಕೆಲವು ಆಕಸ್ಮಿಕ ಸಂದರ್ಭಗಳಲ್ಲಿ ಮಾತ್ರ ಇದಕ್ಕೆ ಅಪವಾದ ಇರಬಹುದು……

ಧರ್ಮದ ಆಧಾರದ ಮೇಲೆ ದೇಶದ ನಿರ್ಮಾಣ, ಭಯೋತ್ಪಾದನೆಗೆ ಸಹಕಾರ, ಕೋವಿಡ್ ವೈರಸ್ ದಾಳಿ, ಅಮೆರಿಕ ದೇಶದ ವಿರೋಧದ ಕಾರಣದಿಂದ ಅವರ ನೆರವಿನ ಖೋತಾ, ದೇಶದ ರಾಜಕಾರಣಿಗಳ ಭ್ರಷ್ಟಾಚಾರ, ರಾಜಕೀಯ ಅಸ್ಥಿರತೆ ಮುಂತಾದ ಅನೇಕ ಕಾರಣಗಳಿಗಾಗಿ ಅದು ಈ ಪರಿಸ್ಥಿತಿ ತಲುಪಿರಬಹುದು….

ಇದು ಸಹ ಶಾಶ್ವತವೇನು ಅಲ್ಲ. ದೇಶ ತಪ್ಪುಗಳನ್ನು ತಿದ್ದಿಕೊಂಡು ಮುನ್ನಡೆದರೆ ಮತ್ತೆ ಕೆಲವೇ ವರ್ಷಗಳಲ್ಲಿ ಸುಸ್ಥಿತಿಗೆ ಮರಳಬಹುದು. ಹಾಗಾಗಲಿ ಎಂದು ಶುಭ ಹಾರೈಸುತ್ತಾ…….

ಮುಖ್ಯವಾಗಿ ಭಾರತದ ಕೆಲವು ಎಲೆಕ್ಟ್ರಾನಿಕ್ ಸುದ್ದಿ ಮಾಧ್ಯಮಗಳು ಪಾಕಿಸ್ತಾನದ ಆ ದುಸ್ಥಿತಿಯನ್ನು ಸಂಭ್ರಮಿಸುವ ರೀತಿಯ ಸುದ್ದಿ ಪ್ರಸಾರ ಮಾಡುವುದು ಪತ್ರಿಕಾ ಧರ್ಮಕ್ಕೆ ವಿರುದ್ಧವಾಗಿದೆ. ಒಬ್ಬ ವ್ಯಕ್ತಿ ಅಥವಾ ಒಂದು ದೇಶ ಅವರು ನಮ್ಮ ‌ವಿರೋಧಿಗಳೇ ಆಗಿರಲಿ ಅವರಿಗೆ ಕಷ್ಟ ಬಂದಾಗ ಸಹಾಯ ಮಾಡುವುದು – ಬಿಡುವುದು ಅವರವರ ಇಚ್ಚೆ. ಆದರೆ ಕಷ್ಟದಲ್ಲಿರುವವರನ್ನು ಅವರ ಪರಿಸ್ಥಿತಿ ಕಂಡು ಹಿಯಾಳಿಸುವುದು ತಪ್ಪಾಗುತ್ತದೆ. ಮಾನವೀಯ ಧರ್ಮದ ವಿರೋಧವಾಗುತ್ತದೆ….

ಅದಕ್ಕೆ ಬದಲಾಗಿ ಭಾರತ ಪಾಕಿಸ್ತಾನಕ್ಕೆ ಮುಖ್ಯವಾಗಿ ಅದರ ಪುನಃಶ್ಚೇತನಕ್ಕೆ ಸ್ವಲ್ಪ ಸಹಾಯ ಮಾಡಿದರೆ ಖಂಡಿತ ಬಹಳಷ್ಟು ಪಾಕಿಸ್ತಾನಿಯರಲ್ಲಿ ಭಾರತದ ಬಗ್ಗೆ ಇರುವ ದ್ವೇಷ ಕಡಿಮೆಯಾಗಿ ಒಂದಷ್ಟು ಪ್ರೀತಿ ಅಭಿಮಾನ ಬೆಳೆಯಬಹುದು…..

ಇಡೀ ಪಾಕಿಸ್ತಾನದ ಜನರೆಲ್ಲಾ ಭಯೋತ್ಪಾದಕರಲ್ಲ. ಎಲ್ಲೋ ಕೆಲವು ಧರ್ಮಾಂಧರು ಮಾತ್ರ ದಾರಿ ತಪ್ಪಿದ್ದಾರೆ ಮತ್ತು ಭಾರತಕ್ಕೆ ಅಪಾಯಕಾರಿಯಾಗಿದ್ದಾರೆ. ಪಾಕಿಸ್ತಾನ ಸಹ ಭಯೋತ್ಪಾದನೆಯಿಂದ ಸಾಕಷ್ಟು ನಲುಗಿದೆ…..

ಪಾಕಿಸ್ತಾನದಲ್ಲಿಯೂ ಕುಟುಂಬ, ಪ್ರೀತಿ, ಸಂಬಂಧಗಳು, ಸಂಸ್ಕಾರಗಳು, ಭಾವನೆಗಳು ಎಲ್ಲವೂ ನಮ್ಮಂತೆಯೇ ಇರುತ್ತದೆ. ಎಲ್ಲಾ ನಾಗರಿಕತೆಗಳಲ್ಲೂ ಮನುಷ್ಯ ಭಾವನೆಗಳು ಬಹುತೇಕ ಒಂದೇ ರೀತಿಯಲ್ಲಿ ಇರುತ್ತದೆ. ಸ್ವಲ್ಪ ರೂಪ ಮತ್ತು ಭಾವ ತೀವ್ರತೆಯಲ್ಲಿ ವ್ಯತ್ಯಾಸ ಇರಬಹುದು…..

ಕಷ್ಟದ ಸಮಯದ ಸಹಾಯ ಎಂತಹ ಕಲ್ಲು ಹೃದಯವನ್ನು ಕರಗಿಸಬಲ್ಲದು. ಆದರೆ ಮಾಧ್ಯಮಗಳು ಸಾಮಾನ್ಯ ಹೃದಯವನ್ನು ಕಲ್ಲು ಹೃದಯವಾಗಿ ಮಾರ್ಪಡಿಸುವ ದ್ವೇಷ ಅಸೂಯೆ ರೀತಿಯ ವಿಷಯಗಳನ್ನು ಪ್ರಸ್ತಾಪ ಮಾಡಿ ಸಾಮಾನ್ಯ ಜನರ ಉರಿಯುವ ಮನಸ್ಸುಗಳ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿರುವುದು ಅವರು ಬಹುತೇಕ ನಾಗರಿಕ ಸಮಾಜದಿಂದ ದೂರ ಸರಿಯುತ್ತಿರುವ ಲಕ್ಷಣಗಳು ಕಾಣಿಸುತ್ತಿವೆ……

ಯಾವುದೇ ಪರಿಸ್ಥಿತಿಯಲ್ಲಿ ಕ್ರಿಯೆ ಪ್ರತಿಕ್ರಿಯೆಗಳು ನಮ್ಮ ಯೋಗ್ಯತೆಯನ್ನು ಸಹ ಅನಾವರಣ ಮಾಡುತ್ತವೆ. ಅದರ ಅರಿವು ಸದಾ ಜಾಗೃತಾವಸ್ಥೆಯಲ್ಲಿ ಇರಲಿ. ನಮ್ಮ ನೆರೆಹೊರೆಯವರು ಸಂಪೂರ್ಣ ದಿವಾಳಿಯಾದರೆ ಅದರ ದುಷ್ಪರಿಣಾಮ ನಮಗೂ ತಟ್ಟುತ್ತದೆ ಬೇರೆ ರೀತಿಯಲ್ಲಿ….

ಮಾಧ್ಯಮಗಳ ಪ್ರೇರಿತ ಅಭಿಪ್ರಾಯಗಳು ಅತ್ಯಂತ ಅಪಾಯಕಾರಿಯಾಗುತ್ತಿರುವ ಸನ್ನಿವೇಶದಲ್ಲಿ ಬುದ್ದನ ಸಂದೇಶಗಳು ನಮ್ಮ ಎದೆಯೊಳಗೆ ಬೆಳಗುತ್ತಿರಲಿ……

ಬುದ್ದ ಪೂರ್ಣಿಮೆಯ ಮುನ್ನ ಬುದ್ದ ಪ್ರಜ್ಞೆ ಜಾಗೃತವಾಗಲಿ ಎಂದು ಆಶಿಸುತ್ತಾ…..

ದ್ವೇಷ ಅಸೂಯೆಯ ಬೆಂಕಿ ತನ್ನನ್ನೂ ಸುಡುತ್ತದೆ ಎಂದು ಎಚ್ಚರಿಸುತ್ತಾ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

10 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

12 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

17 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

2 days ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

2 days ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago