ಸರ್ವೇ ಜನೋ ಸುಖಿನೋ ಭವಂತು……..
ನಮ್ಮ ನೆರೆಯ ದೇಶ ಮತ್ತು ಒಂದು ಕಾಲದ ನಮ್ಮದೇ ದೇಶದ ಭಾಗವಾಗಿದ್ದ ಪಾಕಿಸ್ತಾನ ಇತ್ತೀಚಿನ ಸುದ್ದಿಗಳ ಪ್ರಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಮತ್ತು ದಿವಾಳಿತನದ ಅಂಚಿನಲ್ಲಿದೆ……..
ದೇಶವೇ ಇರಲಿ, ವೈಯಕ್ತಿಕ ಬದುಕೇ ಇರಲಿ, ನಮ್ಮ ಕ್ರಿಯೆ ಪ್ರತಿಕ್ರಿಯೆಗಳು ನಮ್ಮ ಜೀವನಮಟ್ಟವನ್ನು ನಿರ್ಧರಿಸುತ್ತದೆ. ಅಪರೂಪದ ಕೆಲವು ಆಕಸ್ಮಿಕ ಸಂದರ್ಭಗಳಲ್ಲಿ ಮಾತ್ರ ಇದಕ್ಕೆ ಅಪವಾದ ಇರಬಹುದು……
ಧರ್ಮದ ಆಧಾರದ ಮೇಲೆ ದೇಶದ ನಿರ್ಮಾಣ, ಭಯೋತ್ಪಾದನೆಗೆ ಸಹಕಾರ, ಕೋವಿಡ್ ವೈರಸ್ ದಾಳಿ, ಅಮೆರಿಕ ದೇಶದ ವಿರೋಧದ ಕಾರಣದಿಂದ ಅವರ ನೆರವಿನ ಖೋತಾ, ದೇಶದ ರಾಜಕಾರಣಿಗಳ ಭ್ರಷ್ಟಾಚಾರ, ರಾಜಕೀಯ ಅಸ್ಥಿರತೆ ಮುಂತಾದ ಅನೇಕ ಕಾರಣಗಳಿಗಾಗಿ ಅದು ಈ ಪರಿಸ್ಥಿತಿ ತಲುಪಿರಬಹುದು….
ಇದು ಸಹ ಶಾಶ್ವತವೇನು ಅಲ್ಲ. ದೇಶ ತಪ್ಪುಗಳನ್ನು ತಿದ್ದಿಕೊಂಡು ಮುನ್ನಡೆದರೆ ಮತ್ತೆ ಕೆಲವೇ ವರ್ಷಗಳಲ್ಲಿ ಸುಸ್ಥಿತಿಗೆ ಮರಳಬಹುದು. ಹಾಗಾಗಲಿ ಎಂದು ಶುಭ ಹಾರೈಸುತ್ತಾ…….
ಮುಖ್ಯವಾಗಿ ಭಾರತದ ಕೆಲವು ಎಲೆಕ್ಟ್ರಾನಿಕ್ ಸುದ್ದಿ ಮಾಧ್ಯಮಗಳು ಪಾಕಿಸ್ತಾನದ ಆ ದುಸ್ಥಿತಿಯನ್ನು ಸಂಭ್ರಮಿಸುವ ರೀತಿಯ ಸುದ್ದಿ ಪ್ರಸಾರ ಮಾಡುವುದು ಪತ್ರಿಕಾ ಧರ್ಮಕ್ಕೆ ವಿರುದ್ಧವಾಗಿದೆ. ಒಬ್ಬ ವ್ಯಕ್ತಿ ಅಥವಾ ಒಂದು ದೇಶ ಅವರು ನಮ್ಮ ವಿರೋಧಿಗಳೇ ಆಗಿರಲಿ ಅವರಿಗೆ ಕಷ್ಟ ಬಂದಾಗ ಸಹಾಯ ಮಾಡುವುದು – ಬಿಡುವುದು ಅವರವರ ಇಚ್ಚೆ. ಆದರೆ ಕಷ್ಟದಲ್ಲಿರುವವರನ್ನು ಅವರ ಪರಿಸ್ಥಿತಿ ಕಂಡು ಹಿಯಾಳಿಸುವುದು ತಪ್ಪಾಗುತ್ತದೆ. ಮಾನವೀಯ ಧರ್ಮದ ವಿರೋಧವಾಗುತ್ತದೆ….
ಅದಕ್ಕೆ ಬದಲಾಗಿ ಭಾರತ ಪಾಕಿಸ್ತಾನಕ್ಕೆ ಮುಖ್ಯವಾಗಿ ಅದರ ಪುನಃಶ್ಚೇತನಕ್ಕೆ ಸ್ವಲ್ಪ ಸಹಾಯ ಮಾಡಿದರೆ ಖಂಡಿತ ಬಹಳಷ್ಟು ಪಾಕಿಸ್ತಾನಿಯರಲ್ಲಿ ಭಾರತದ ಬಗ್ಗೆ ಇರುವ ದ್ವೇಷ ಕಡಿಮೆಯಾಗಿ ಒಂದಷ್ಟು ಪ್ರೀತಿ ಅಭಿಮಾನ ಬೆಳೆಯಬಹುದು…..
ಇಡೀ ಪಾಕಿಸ್ತಾನದ ಜನರೆಲ್ಲಾ ಭಯೋತ್ಪಾದಕರಲ್ಲ. ಎಲ್ಲೋ ಕೆಲವು ಧರ್ಮಾಂಧರು ಮಾತ್ರ ದಾರಿ ತಪ್ಪಿದ್ದಾರೆ ಮತ್ತು ಭಾರತಕ್ಕೆ ಅಪಾಯಕಾರಿಯಾಗಿದ್ದಾರೆ. ಪಾಕಿಸ್ತಾನ ಸಹ ಭಯೋತ್ಪಾದನೆಯಿಂದ ಸಾಕಷ್ಟು ನಲುಗಿದೆ…..
ಪಾಕಿಸ್ತಾನದಲ್ಲಿಯೂ ಕುಟುಂಬ, ಪ್ರೀತಿ, ಸಂಬಂಧಗಳು, ಸಂಸ್ಕಾರಗಳು, ಭಾವನೆಗಳು ಎಲ್ಲವೂ ನಮ್ಮಂತೆಯೇ ಇರುತ್ತದೆ. ಎಲ್ಲಾ ನಾಗರಿಕತೆಗಳಲ್ಲೂ ಮನುಷ್ಯ ಭಾವನೆಗಳು ಬಹುತೇಕ ಒಂದೇ ರೀತಿಯಲ್ಲಿ ಇರುತ್ತದೆ. ಸ್ವಲ್ಪ ರೂಪ ಮತ್ತು ಭಾವ ತೀವ್ರತೆಯಲ್ಲಿ ವ್ಯತ್ಯಾಸ ಇರಬಹುದು…..
ಕಷ್ಟದ ಸಮಯದ ಸಹಾಯ ಎಂತಹ ಕಲ್ಲು ಹೃದಯವನ್ನು ಕರಗಿಸಬಲ್ಲದು. ಆದರೆ ಮಾಧ್ಯಮಗಳು ಸಾಮಾನ್ಯ ಹೃದಯವನ್ನು ಕಲ್ಲು ಹೃದಯವಾಗಿ ಮಾರ್ಪಡಿಸುವ ದ್ವೇಷ ಅಸೂಯೆ ರೀತಿಯ ವಿಷಯಗಳನ್ನು ಪ್ರಸ್ತಾಪ ಮಾಡಿ ಸಾಮಾನ್ಯ ಜನರ ಉರಿಯುವ ಮನಸ್ಸುಗಳ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿರುವುದು ಅವರು ಬಹುತೇಕ ನಾಗರಿಕ ಸಮಾಜದಿಂದ ದೂರ ಸರಿಯುತ್ತಿರುವ ಲಕ್ಷಣಗಳು ಕಾಣಿಸುತ್ತಿವೆ……
ಯಾವುದೇ ಪರಿಸ್ಥಿತಿಯಲ್ಲಿ ಕ್ರಿಯೆ ಪ್ರತಿಕ್ರಿಯೆಗಳು ನಮ್ಮ ಯೋಗ್ಯತೆಯನ್ನು ಸಹ ಅನಾವರಣ ಮಾಡುತ್ತವೆ. ಅದರ ಅರಿವು ಸದಾ ಜಾಗೃತಾವಸ್ಥೆಯಲ್ಲಿ ಇರಲಿ. ನಮ್ಮ ನೆರೆಹೊರೆಯವರು ಸಂಪೂರ್ಣ ದಿವಾಳಿಯಾದರೆ ಅದರ ದುಷ್ಪರಿಣಾಮ ನಮಗೂ ತಟ್ಟುತ್ತದೆ ಬೇರೆ ರೀತಿಯಲ್ಲಿ….
ಮಾಧ್ಯಮಗಳ ಪ್ರೇರಿತ ಅಭಿಪ್ರಾಯಗಳು ಅತ್ಯಂತ ಅಪಾಯಕಾರಿಯಾಗುತ್ತಿರುವ ಸನ್ನಿವೇಶದಲ್ಲಿ ಬುದ್ದನ ಸಂದೇಶಗಳು ನಮ್ಮ ಎದೆಯೊಳಗೆ ಬೆಳಗುತ್ತಿರಲಿ……
ಬುದ್ದ ಪೂರ್ಣಿಮೆಯ ಮುನ್ನ ಬುದ್ದ ಪ್ರಜ್ಞೆ ಜಾಗೃತವಾಗಲಿ ಎಂದು ಆಶಿಸುತ್ತಾ…..
ದ್ವೇಷ ಅಸೂಯೆಯ ಬೆಂಕಿ ತನ್ನನ್ನೂ ಸುಡುತ್ತದೆ ಎಂದು ಎಚ್ಚರಿಸುತ್ತಾ……
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ
ಲೇಖಕ-ವಿವೇಕಾನಂದ. ಎಚ್. ಕೆ
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…