Categories: ಲೇಖನ

ಬುದ್ದ ಪ್ರಜ್ಞೆಯ ಬೆಳಕಿನಲ್ಲಿ ಪಾಕಿಸ್ತಾನದ ದುಸ್ಥಿತಿ ಕಂಡಾಗ…..

ಸರ್ವೇ ಜನೋ ಸುಖಿನೋ ಭವಂತು……..

ನಮ್ಮ ನೆರೆಯ ದೇಶ ಮತ್ತು ಒಂದು ಕಾಲದ ನಮ್ಮದೇ ದೇಶದ ಭಾಗವಾಗಿದ್ದ ಪಾಕಿಸ್ತಾನ ಇತ್ತೀಚಿನ ಸುದ್ದಿಗಳ ಪ್ರಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಮತ್ತು ದಿವಾಳಿತನದ ಅಂಚಿನಲ್ಲಿದೆ……..

ದೇಶವೇ ಇರಲಿ, ವೈಯಕ್ತಿಕ ಬದುಕೇ ಇರಲಿ, ನಮ್ಮ ಕ್ರಿಯೆ ಪ್ರತಿಕ್ರಿಯೆಗಳು ನಮ್ಮ ಜೀವನಮಟ್ಟವನ್ನು ನಿರ್ಧರಿಸುತ್ತದೆ. ಅಪರೂಪದ ಕೆಲವು ಆಕಸ್ಮಿಕ ಸಂದರ್ಭಗಳಲ್ಲಿ ಮಾತ್ರ ಇದಕ್ಕೆ ಅಪವಾದ ಇರಬಹುದು……

ಧರ್ಮದ ಆಧಾರದ ಮೇಲೆ ದೇಶದ ನಿರ್ಮಾಣ, ಭಯೋತ್ಪಾದನೆಗೆ ಸಹಕಾರ, ಕೋವಿಡ್ ವೈರಸ್ ದಾಳಿ, ಅಮೆರಿಕ ದೇಶದ ವಿರೋಧದ ಕಾರಣದಿಂದ ಅವರ ನೆರವಿನ ಖೋತಾ, ದೇಶದ ರಾಜಕಾರಣಿಗಳ ಭ್ರಷ್ಟಾಚಾರ, ರಾಜಕೀಯ ಅಸ್ಥಿರತೆ ಮುಂತಾದ ಅನೇಕ ಕಾರಣಗಳಿಗಾಗಿ ಅದು ಈ ಪರಿಸ್ಥಿತಿ ತಲುಪಿರಬಹುದು….

ಇದು ಸಹ ಶಾಶ್ವತವೇನು ಅಲ್ಲ. ದೇಶ ತಪ್ಪುಗಳನ್ನು ತಿದ್ದಿಕೊಂಡು ಮುನ್ನಡೆದರೆ ಮತ್ತೆ ಕೆಲವೇ ವರ್ಷಗಳಲ್ಲಿ ಸುಸ್ಥಿತಿಗೆ ಮರಳಬಹುದು. ಹಾಗಾಗಲಿ ಎಂದು ಶುಭ ಹಾರೈಸುತ್ತಾ…….

ಮುಖ್ಯವಾಗಿ ಭಾರತದ ಕೆಲವು ಎಲೆಕ್ಟ್ರಾನಿಕ್ ಸುದ್ದಿ ಮಾಧ್ಯಮಗಳು ಪಾಕಿಸ್ತಾನದ ಆ ದುಸ್ಥಿತಿಯನ್ನು ಸಂಭ್ರಮಿಸುವ ರೀತಿಯ ಸುದ್ದಿ ಪ್ರಸಾರ ಮಾಡುವುದು ಪತ್ರಿಕಾ ಧರ್ಮಕ್ಕೆ ವಿರುದ್ಧವಾಗಿದೆ. ಒಬ್ಬ ವ್ಯಕ್ತಿ ಅಥವಾ ಒಂದು ದೇಶ ಅವರು ನಮ್ಮ ‌ವಿರೋಧಿಗಳೇ ಆಗಿರಲಿ ಅವರಿಗೆ ಕಷ್ಟ ಬಂದಾಗ ಸಹಾಯ ಮಾಡುವುದು – ಬಿಡುವುದು ಅವರವರ ಇಚ್ಚೆ. ಆದರೆ ಕಷ್ಟದಲ್ಲಿರುವವರನ್ನು ಅವರ ಪರಿಸ್ಥಿತಿ ಕಂಡು ಹಿಯಾಳಿಸುವುದು ತಪ್ಪಾಗುತ್ತದೆ. ಮಾನವೀಯ ಧರ್ಮದ ವಿರೋಧವಾಗುತ್ತದೆ….

ಅದಕ್ಕೆ ಬದಲಾಗಿ ಭಾರತ ಪಾಕಿಸ್ತಾನಕ್ಕೆ ಮುಖ್ಯವಾಗಿ ಅದರ ಪುನಃಶ್ಚೇತನಕ್ಕೆ ಸ್ವಲ್ಪ ಸಹಾಯ ಮಾಡಿದರೆ ಖಂಡಿತ ಬಹಳಷ್ಟು ಪಾಕಿಸ್ತಾನಿಯರಲ್ಲಿ ಭಾರತದ ಬಗ್ಗೆ ಇರುವ ದ್ವೇಷ ಕಡಿಮೆಯಾಗಿ ಒಂದಷ್ಟು ಪ್ರೀತಿ ಅಭಿಮಾನ ಬೆಳೆಯಬಹುದು…..

ಇಡೀ ಪಾಕಿಸ್ತಾನದ ಜನರೆಲ್ಲಾ ಭಯೋತ್ಪಾದಕರಲ್ಲ. ಎಲ್ಲೋ ಕೆಲವು ಧರ್ಮಾಂಧರು ಮಾತ್ರ ದಾರಿ ತಪ್ಪಿದ್ದಾರೆ ಮತ್ತು ಭಾರತಕ್ಕೆ ಅಪಾಯಕಾರಿಯಾಗಿದ್ದಾರೆ. ಪಾಕಿಸ್ತಾನ ಸಹ ಭಯೋತ್ಪಾದನೆಯಿಂದ ಸಾಕಷ್ಟು ನಲುಗಿದೆ…..

ಪಾಕಿಸ್ತಾನದಲ್ಲಿಯೂ ಕುಟುಂಬ, ಪ್ರೀತಿ, ಸಂಬಂಧಗಳು, ಸಂಸ್ಕಾರಗಳು, ಭಾವನೆಗಳು ಎಲ್ಲವೂ ನಮ್ಮಂತೆಯೇ ಇರುತ್ತದೆ. ಎಲ್ಲಾ ನಾಗರಿಕತೆಗಳಲ್ಲೂ ಮನುಷ್ಯ ಭಾವನೆಗಳು ಬಹುತೇಕ ಒಂದೇ ರೀತಿಯಲ್ಲಿ ಇರುತ್ತದೆ. ಸ್ವಲ್ಪ ರೂಪ ಮತ್ತು ಭಾವ ತೀವ್ರತೆಯಲ್ಲಿ ವ್ಯತ್ಯಾಸ ಇರಬಹುದು…..

ಕಷ್ಟದ ಸಮಯದ ಸಹಾಯ ಎಂತಹ ಕಲ್ಲು ಹೃದಯವನ್ನು ಕರಗಿಸಬಲ್ಲದು. ಆದರೆ ಮಾಧ್ಯಮಗಳು ಸಾಮಾನ್ಯ ಹೃದಯವನ್ನು ಕಲ್ಲು ಹೃದಯವಾಗಿ ಮಾರ್ಪಡಿಸುವ ದ್ವೇಷ ಅಸೂಯೆ ರೀತಿಯ ವಿಷಯಗಳನ್ನು ಪ್ರಸ್ತಾಪ ಮಾಡಿ ಸಾಮಾನ್ಯ ಜನರ ಉರಿಯುವ ಮನಸ್ಸುಗಳ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿರುವುದು ಅವರು ಬಹುತೇಕ ನಾಗರಿಕ ಸಮಾಜದಿಂದ ದೂರ ಸರಿಯುತ್ತಿರುವ ಲಕ್ಷಣಗಳು ಕಾಣಿಸುತ್ತಿವೆ……

ಯಾವುದೇ ಪರಿಸ್ಥಿತಿಯಲ್ಲಿ ಕ್ರಿಯೆ ಪ್ರತಿಕ್ರಿಯೆಗಳು ನಮ್ಮ ಯೋಗ್ಯತೆಯನ್ನು ಸಹ ಅನಾವರಣ ಮಾಡುತ್ತವೆ. ಅದರ ಅರಿವು ಸದಾ ಜಾಗೃತಾವಸ್ಥೆಯಲ್ಲಿ ಇರಲಿ. ನಮ್ಮ ನೆರೆಹೊರೆಯವರು ಸಂಪೂರ್ಣ ದಿವಾಳಿಯಾದರೆ ಅದರ ದುಷ್ಪರಿಣಾಮ ನಮಗೂ ತಟ್ಟುತ್ತದೆ ಬೇರೆ ರೀತಿಯಲ್ಲಿ….

ಮಾಧ್ಯಮಗಳ ಪ್ರೇರಿತ ಅಭಿಪ್ರಾಯಗಳು ಅತ್ಯಂತ ಅಪಾಯಕಾರಿಯಾಗುತ್ತಿರುವ ಸನ್ನಿವೇಶದಲ್ಲಿ ಬುದ್ದನ ಸಂದೇಶಗಳು ನಮ್ಮ ಎದೆಯೊಳಗೆ ಬೆಳಗುತ್ತಿರಲಿ……

ಬುದ್ದ ಪೂರ್ಣಿಮೆಯ ಮುನ್ನ ಬುದ್ದ ಪ್ರಜ್ಞೆ ಜಾಗೃತವಾಗಲಿ ಎಂದು ಆಶಿಸುತ್ತಾ…..

ದ್ವೇಷ ಅಸೂಯೆಯ ಬೆಂಕಿ ತನ್ನನ್ನೂ ಸುಡುತ್ತದೆ ಎಂದು ಎಚ್ಚರಿಸುತ್ತಾ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

3 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

9 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

11 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago