Categories: ಕೊಡಗು

ಬುರ್ಖಾ ಧರಿಸಿ ಮಾರುವೇಶದಲ್ಲಿ ಬಂದು ಸ್ವಂತ ಚಿಕ್ಕಮ್ಮಳ ಚಿನ್ನಾಭರಣವನ್ನು ಕಳುವು: ಕದ್ದ ಚಿನ್ನಾಭರಣ ಮಾರಾಟ ಮಾಡಿ ಮೊಮ್ಮಗಳಿಗೆ ಎರಡು ಚಿನ್ನದ ಓಲೆ ಖರೀದಿ

ಬುರ್ಖಾ ಹಾಕಿಕೊಂಡು ಮಾರುವೇಶದಲ್ಲಿ ಬಂದು ಒಂಟಿಯಾಗಿ ವೃದ್ಧೆ ಮನೆಯಲ್ಲಿದ್ದಾಗ, ಆಕೆಯ ಕುತ್ತಿಗೆಯಿಂದ ಚಿನ್ನಾಭರಣವನ್ನು ಕದ್ದು ಪರಾರಿಯಾಗಿದ್ದ ಖದೀಮ. ಸಿಸಿಟಿವಿ ಮೂಲಕ ಆರೋಪಿಯನ್ನು ಪತ್ತೆ ಹಚ್ಚಿ ಜೈಲಿಗೆ ಕಳಿಸಿದ ಘಟನೆ ವಿರಾಜಪೇಟೆಯಲ್ಲಿ ಮೇ 21ರಂದು ನಡೆದಿದ್ದು, ಇದೀಗ ತಡವಾಗಿ ಇದೀಗ ಬೆಳಕಿಗೆ ಬಂದಿದೆ.

ವಿರಾಜಪೇಟೆ -ಅಮ್ಮತ್ತಿ ರಸ್ತೆಯ ಕೊಮ್ಮೆತೋಡು (ಐಮಂಗಲ ಗ್ರಾಮ) ಎಂಬಲ್ಲಿ ಟೀ ಅಂಗಡಿ ಮಾಲೀಕ, ಅಲ್ಲಿಯ ಮಸೀದಿಯ ಆಡಳಿತ ಮಂಡಳಿಯ  ಸದಸ್ಯನಾಗಿದ್ದ ಕೋಳುಮಂಡ ಹ್ಯಾರಿಸ್ ಎಂಬ ವ್ಯಕ್ತಿ ಮೇ.21ರ ಸಂಜೆ ವಿರಾಜಪೇಟೆಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ತನ್ನ ಸಹೋದರ ಇಬ್ರಾಹಿಂ ರವರ ಮನೆಯಲ್ಲಿರುವ 80 ವರ್ಷದ ವೃದ್ದೆ, ತನ್ನ ತಂದೆಯ ತಂಗಿಯ (ಸೋದರತ್ತೆ) ಮನೆಗೆ ಬುರ್ಖ ಹಾಕಿಕೊಂಡು ಕೊಡೆ ಹಿಡಿದುಕೊಂಡು ಹೆಂಗಿಸಿನ ಚಪ್ಪಲಿ ಧರಿಸಿ ಮಾರುವೇಷದಲ್ಲಿ ಬಂದು ಒಬ್ಬಂಟಿಯಾಗಿದ್ದಾಗ, ಮನೆಗೆ ನುಗ್ಗಿ ಮೂರು ಪವನಿನ ಚಿನ್ನವನ್ನು ಕಸಿದುಕೊಂಡು ಪರಾರಿಯಾಗಿ ನಂತರ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮೂಲಕ ನಡೆದುಕೊಂಡು ಬಂದು ಟೆಂಡರ್ ಚಿಕ್ಕನ್ ಮುಂಭಾಗ ತನ್ನ ಕಾರಿನಲ್ಲಿ ಪರಾರಿಯಾಗಿದ್ದ ಹ್ಯಾರಿಸ್ ನನ್ನು ಕೃತ್ಯ ನಡೆದ ಒಂದೆರಡು ದಿನಗಳ ಬಳಿಕ ಪೊಲೀಸರು ಸಿಸಿಟಿವಿ ಮೂಲಕ ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿರುವ ಘಟನೆ ನಡೆದಿದೆ.

ಆರೋಪಿ ಹ್ಯಾರಿಸ್ ಚಿನ್ನವನ್ನು ಇರಿಟಿಯ ಚಿನ್ನಾಭರಣ ಮಳಿಗೆಗೆ ಮಾರಿದ ಹಣದಲ್ಲಿ ತನ್ನ ಮೊಮ್ಮಗಳಿಗೆ ಎರಡು ಚಿನ್ನದ ಓಲೆಯನ್ನು ಖರೀದಿಸಿದ್ದನ್ನು ತನಿಖೆ ವೇಳೆ ಬಹಿರಂಗಗೊಳಿಸಿದ್ದಾನೆ. ಆರೋಪಿಯು ಕೃತ್ಯವೆಸಗಿ ಸೋದರತ್ತೆಯ ಚಿನ್ನಾಭರಣವನ್ನು ತನ್ನ ಕೈವಶಗೊಳಿಸಿದ ನಂತರ ಅದೇ ದಿನ ಸಂಜೆ ಬಿಟ್ಟಂಗಾಲ- ಹಾತೂರು- ಬೈಗೋಡು ರಸ್ತೆ  ಮೂಲಕವಾಗಿ ತನ್ನ ಕಾರಿನಲ್ಲಿ  ಕೊಮ್ಮೆತೋಡುವಿನ ತನ್ನ ಮನೆಗೆ ಸೇರಿಕೊಂಡಿದ್ದನ್ನು, ಈ ದಾರಿ ಮಧ್ಯೆ ಬುರ್ಖವನ್ನು ಮತ್ತು ಚಪ್ಪಲಿಯನ್ನು ಕೂಡ ಎಸೆದಿದ್ದಾನೆ ಎಂಬುದನ್ನು ತನಿಖೆಯ ವೇಳೆ  ಬಾಯಿಬಿಟ್ಟಿದ್ದಾನೆ.

ಹಣಕ್ಕಾಗಿ ಇದೀಗ ಸ್ವಂತ ಸಂಬಂಧಿಕರು ಕೂಡ ಕಳ್ಳತನದ ದಾರಿ ಹಿಡಿಯುತ್ತಿದ್ದಾರೆ. ವಿರಾಜಪೇಟೆ  ಭಾಗದಲ್ಲಿ ಗಂಡಸು ಬುರ್ಖಾ ಧರಿಸಿ ಸಿನಿಮಯ ರೀತಿಯಾಗಿ  ಕಳವು ನಡಿಸಿರುವುದು ಇದು ಪ್ರಥಮ ಎನ್ನಲಾಗಿದೆ.

Ramesh Babu

Journalist

Recent Posts

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

6 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

7 hours ago

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

20 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

20 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

23 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

23 hours ago