ಬುರ್ಖಾ ಹಾಕಿಕೊಂಡು ಮಾರುವೇಶದಲ್ಲಿ ಬಂದು ಒಂಟಿಯಾಗಿ ವೃದ್ಧೆ ಮನೆಯಲ್ಲಿದ್ದಾಗ, ಆಕೆಯ ಕುತ್ತಿಗೆಯಿಂದ ಚಿನ್ನಾಭರಣವನ್ನು ಕದ್ದು ಪರಾರಿಯಾಗಿದ್ದ ಖದೀಮ. ಸಿಸಿಟಿವಿ ಮೂಲಕ ಆರೋಪಿಯನ್ನು ಪತ್ತೆ ಹಚ್ಚಿ ಜೈಲಿಗೆ ಕಳಿಸಿದ ಘಟನೆ ವಿರಾಜಪೇಟೆಯಲ್ಲಿ ಮೇ 21ರಂದು ನಡೆದಿದ್ದು, ಇದೀಗ ತಡವಾಗಿ ಇದೀಗ ಬೆಳಕಿಗೆ ಬಂದಿದೆ.
ವಿರಾಜಪೇಟೆ -ಅಮ್ಮತ್ತಿ ರಸ್ತೆಯ ಕೊಮ್ಮೆತೋಡು (ಐಮಂಗಲ ಗ್ರಾಮ) ಎಂಬಲ್ಲಿ ಟೀ ಅಂಗಡಿ ಮಾಲೀಕ, ಅಲ್ಲಿಯ ಮಸೀದಿಯ ಆಡಳಿತ ಮಂಡಳಿಯ ಸದಸ್ಯನಾಗಿದ್ದ ಕೋಳುಮಂಡ ಹ್ಯಾರಿಸ್ ಎಂಬ ವ್ಯಕ್ತಿ ಮೇ.21ರ ಸಂಜೆ ವಿರಾಜಪೇಟೆಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ತನ್ನ ಸಹೋದರ ಇಬ್ರಾಹಿಂ ರವರ ಮನೆಯಲ್ಲಿರುವ 80 ವರ್ಷದ ವೃದ್ದೆ, ತನ್ನ ತಂದೆಯ ತಂಗಿಯ (ಸೋದರತ್ತೆ) ಮನೆಗೆ ಬುರ್ಖ ಹಾಕಿಕೊಂಡು ಕೊಡೆ ಹಿಡಿದುಕೊಂಡು ಹೆಂಗಿಸಿನ ಚಪ್ಪಲಿ ಧರಿಸಿ ಮಾರುವೇಷದಲ್ಲಿ ಬಂದು ಒಬ್ಬಂಟಿಯಾಗಿದ್ದಾಗ, ಮನೆಗೆ ನುಗ್ಗಿ ಮೂರು ಪವನಿನ ಚಿನ್ನವನ್ನು ಕಸಿದುಕೊಂಡು ಪರಾರಿಯಾಗಿ ನಂತರ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮೂಲಕ ನಡೆದುಕೊಂಡು ಬಂದು ಟೆಂಡರ್ ಚಿಕ್ಕನ್ ಮುಂಭಾಗ ತನ್ನ ಕಾರಿನಲ್ಲಿ ಪರಾರಿಯಾಗಿದ್ದ ಹ್ಯಾರಿಸ್ ನನ್ನು ಕೃತ್ಯ ನಡೆದ ಒಂದೆರಡು ದಿನಗಳ ಬಳಿಕ ಪೊಲೀಸರು ಸಿಸಿಟಿವಿ ಮೂಲಕ ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿರುವ ಘಟನೆ ನಡೆದಿದೆ.
ಆರೋಪಿ ಹ್ಯಾರಿಸ್ ಚಿನ್ನವನ್ನು ಇರಿಟಿಯ ಚಿನ್ನಾಭರಣ ಮಳಿಗೆಗೆ ಮಾರಿದ ಹಣದಲ್ಲಿ ತನ್ನ ಮೊಮ್ಮಗಳಿಗೆ ಎರಡು ಚಿನ್ನದ ಓಲೆಯನ್ನು ಖರೀದಿಸಿದ್ದನ್ನು ತನಿಖೆ ವೇಳೆ ಬಹಿರಂಗಗೊಳಿಸಿದ್ದಾನೆ. ಆರೋಪಿಯು ಕೃತ್ಯವೆಸಗಿ ಸೋದರತ್ತೆಯ ಚಿನ್ನಾಭರಣವನ್ನು ತನ್ನ ಕೈವಶಗೊಳಿಸಿದ ನಂತರ ಅದೇ ದಿನ ಸಂಜೆ ಬಿಟ್ಟಂಗಾಲ- ಹಾತೂರು- ಬೈಗೋಡು ರಸ್ತೆ ಮೂಲಕವಾಗಿ ತನ್ನ ಕಾರಿನಲ್ಲಿ ಕೊಮ್ಮೆತೋಡುವಿನ ತನ್ನ ಮನೆಗೆ ಸೇರಿಕೊಂಡಿದ್ದನ್ನು, ಈ ದಾರಿ ಮಧ್ಯೆ ಬುರ್ಖವನ್ನು ಮತ್ತು ಚಪ್ಪಲಿಯನ್ನು ಕೂಡ ಎಸೆದಿದ್ದಾನೆ ಎಂಬುದನ್ನು ತನಿಖೆಯ ವೇಳೆ ಬಾಯಿಬಿಟ್ಟಿದ್ದಾನೆ.
ಹಣಕ್ಕಾಗಿ ಇದೀಗ ಸ್ವಂತ ಸಂಬಂಧಿಕರು ಕೂಡ ಕಳ್ಳತನದ ದಾರಿ ಹಿಡಿಯುತ್ತಿದ್ದಾರೆ. ವಿರಾಜಪೇಟೆ ಭಾಗದಲ್ಲಿ ಗಂಡಸು ಬುರ್ಖಾ ಧರಿಸಿ ಸಿನಿಮಯ ರೀತಿಯಾಗಿ ಕಳವು ನಡಿಸಿರುವುದು ಇದು ಪ್ರಥಮ ಎನ್ನಲಾಗಿದೆ.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…