Categories: ಕೊಡಗು

ಬುರ್ಖಾ ಧರಿಸಿ ಮಾರುವೇಶದಲ್ಲಿ ಬಂದು ಸ್ವಂತ ಚಿಕ್ಕಮ್ಮಳ ಚಿನ್ನಾಭರಣವನ್ನು ಕಳುವು: ಕದ್ದ ಚಿನ್ನಾಭರಣ ಮಾರಾಟ ಮಾಡಿ ಮೊಮ್ಮಗಳಿಗೆ ಎರಡು ಚಿನ್ನದ ಓಲೆ ಖರೀದಿ

ಬುರ್ಖಾ ಹಾಕಿಕೊಂಡು ಮಾರುವೇಶದಲ್ಲಿ ಬಂದು ಒಂಟಿಯಾಗಿ ವೃದ್ಧೆ ಮನೆಯಲ್ಲಿದ್ದಾಗ, ಆಕೆಯ ಕುತ್ತಿಗೆಯಿಂದ ಚಿನ್ನಾಭರಣವನ್ನು ಕದ್ದು ಪರಾರಿಯಾಗಿದ್ದ ಖದೀಮ. ಸಿಸಿಟಿವಿ ಮೂಲಕ ಆರೋಪಿಯನ್ನು ಪತ್ತೆ ಹಚ್ಚಿ ಜೈಲಿಗೆ ಕಳಿಸಿದ ಘಟನೆ ವಿರಾಜಪೇಟೆಯಲ್ಲಿ ಮೇ 21ರಂದು ನಡೆದಿದ್ದು, ಇದೀಗ ತಡವಾಗಿ ಇದೀಗ ಬೆಳಕಿಗೆ ಬಂದಿದೆ.

ವಿರಾಜಪೇಟೆ -ಅಮ್ಮತ್ತಿ ರಸ್ತೆಯ ಕೊಮ್ಮೆತೋಡು (ಐಮಂಗಲ ಗ್ರಾಮ) ಎಂಬಲ್ಲಿ ಟೀ ಅಂಗಡಿ ಮಾಲೀಕ, ಅಲ್ಲಿಯ ಮಸೀದಿಯ ಆಡಳಿತ ಮಂಡಳಿಯ  ಸದಸ್ಯನಾಗಿದ್ದ ಕೋಳುಮಂಡ ಹ್ಯಾರಿಸ್ ಎಂಬ ವ್ಯಕ್ತಿ ಮೇ.21ರ ಸಂಜೆ ವಿರಾಜಪೇಟೆಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ತನ್ನ ಸಹೋದರ ಇಬ್ರಾಹಿಂ ರವರ ಮನೆಯಲ್ಲಿರುವ 80 ವರ್ಷದ ವೃದ್ದೆ, ತನ್ನ ತಂದೆಯ ತಂಗಿಯ (ಸೋದರತ್ತೆ) ಮನೆಗೆ ಬುರ್ಖ ಹಾಕಿಕೊಂಡು ಕೊಡೆ ಹಿಡಿದುಕೊಂಡು ಹೆಂಗಿಸಿನ ಚಪ್ಪಲಿ ಧರಿಸಿ ಮಾರುವೇಷದಲ್ಲಿ ಬಂದು ಒಬ್ಬಂಟಿಯಾಗಿದ್ದಾಗ, ಮನೆಗೆ ನುಗ್ಗಿ ಮೂರು ಪವನಿನ ಚಿನ್ನವನ್ನು ಕಸಿದುಕೊಂಡು ಪರಾರಿಯಾಗಿ ನಂತರ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮೂಲಕ ನಡೆದುಕೊಂಡು ಬಂದು ಟೆಂಡರ್ ಚಿಕ್ಕನ್ ಮುಂಭಾಗ ತನ್ನ ಕಾರಿನಲ್ಲಿ ಪರಾರಿಯಾಗಿದ್ದ ಹ್ಯಾರಿಸ್ ನನ್ನು ಕೃತ್ಯ ನಡೆದ ಒಂದೆರಡು ದಿನಗಳ ಬಳಿಕ ಪೊಲೀಸರು ಸಿಸಿಟಿವಿ ಮೂಲಕ ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿರುವ ಘಟನೆ ನಡೆದಿದೆ.

ಆರೋಪಿ ಹ್ಯಾರಿಸ್ ಚಿನ್ನವನ್ನು ಇರಿಟಿಯ ಚಿನ್ನಾಭರಣ ಮಳಿಗೆಗೆ ಮಾರಿದ ಹಣದಲ್ಲಿ ತನ್ನ ಮೊಮ್ಮಗಳಿಗೆ ಎರಡು ಚಿನ್ನದ ಓಲೆಯನ್ನು ಖರೀದಿಸಿದ್ದನ್ನು ತನಿಖೆ ವೇಳೆ ಬಹಿರಂಗಗೊಳಿಸಿದ್ದಾನೆ. ಆರೋಪಿಯು ಕೃತ್ಯವೆಸಗಿ ಸೋದರತ್ತೆಯ ಚಿನ್ನಾಭರಣವನ್ನು ತನ್ನ ಕೈವಶಗೊಳಿಸಿದ ನಂತರ ಅದೇ ದಿನ ಸಂಜೆ ಬಿಟ್ಟಂಗಾಲ- ಹಾತೂರು- ಬೈಗೋಡು ರಸ್ತೆ  ಮೂಲಕವಾಗಿ ತನ್ನ ಕಾರಿನಲ್ಲಿ  ಕೊಮ್ಮೆತೋಡುವಿನ ತನ್ನ ಮನೆಗೆ ಸೇರಿಕೊಂಡಿದ್ದನ್ನು, ಈ ದಾರಿ ಮಧ್ಯೆ ಬುರ್ಖವನ್ನು ಮತ್ತು ಚಪ್ಪಲಿಯನ್ನು ಕೂಡ ಎಸೆದಿದ್ದಾನೆ ಎಂಬುದನ್ನು ತನಿಖೆಯ ವೇಳೆ  ಬಾಯಿಬಿಟ್ಟಿದ್ದಾನೆ.

ಹಣಕ್ಕಾಗಿ ಇದೀಗ ಸ್ವಂತ ಸಂಬಂಧಿಕರು ಕೂಡ ಕಳ್ಳತನದ ದಾರಿ ಹಿಡಿಯುತ್ತಿದ್ದಾರೆ. ವಿರಾಜಪೇಟೆ  ಭಾಗದಲ್ಲಿ ಗಂಡಸು ಬುರ್ಖಾ ಧರಿಸಿ ಸಿನಿಮಯ ರೀತಿಯಾಗಿ  ಕಳವು ನಡಿಸಿರುವುದು ಇದು ಪ್ರಥಮ ಎನ್ನಲಾಗಿದೆ.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

1 hour ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

15 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

16 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

17 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

17 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

21 hours ago