Categories: ಕೊಡಗು

ಬುರ್ಖಾ ಧರಿಸಿ ಮಾರುವೇಶದಲ್ಲಿ ಬಂದು ಸ್ವಂತ ಚಿಕ್ಕಮ್ಮಳ ಚಿನ್ನಾಭರಣವನ್ನು ಕಳುವು: ಕದ್ದ ಚಿನ್ನಾಭರಣ ಮಾರಾಟ ಮಾಡಿ ಮೊಮ್ಮಗಳಿಗೆ ಎರಡು ಚಿನ್ನದ ಓಲೆ ಖರೀದಿ

ಬುರ್ಖಾ ಹಾಕಿಕೊಂಡು ಮಾರುವೇಶದಲ್ಲಿ ಬಂದು ಒಂಟಿಯಾಗಿ ವೃದ್ಧೆ ಮನೆಯಲ್ಲಿದ್ದಾಗ, ಆಕೆಯ ಕುತ್ತಿಗೆಯಿಂದ ಚಿನ್ನಾಭರಣವನ್ನು ಕದ್ದು ಪರಾರಿಯಾಗಿದ್ದ ಖದೀಮ. ಸಿಸಿಟಿವಿ ಮೂಲಕ ಆರೋಪಿಯನ್ನು ಪತ್ತೆ ಹಚ್ಚಿ ಜೈಲಿಗೆ ಕಳಿಸಿದ ಘಟನೆ ವಿರಾಜಪೇಟೆಯಲ್ಲಿ ಮೇ 21ರಂದು ನಡೆದಿದ್ದು, ಇದೀಗ ತಡವಾಗಿ ಇದೀಗ ಬೆಳಕಿಗೆ ಬಂದಿದೆ.

ವಿರಾಜಪೇಟೆ -ಅಮ್ಮತ್ತಿ ರಸ್ತೆಯ ಕೊಮ್ಮೆತೋಡು (ಐಮಂಗಲ ಗ್ರಾಮ) ಎಂಬಲ್ಲಿ ಟೀ ಅಂಗಡಿ ಮಾಲೀಕ, ಅಲ್ಲಿಯ ಮಸೀದಿಯ ಆಡಳಿತ ಮಂಡಳಿಯ  ಸದಸ್ಯನಾಗಿದ್ದ ಕೋಳುಮಂಡ ಹ್ಯಾರಿಸ್ ಎಂಬ ವ್ಯಕ್ತಿ ಮೇ.21ರ ಸಂಜೆ ವಿರಾಜಪೇಟೆಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ತನ್ನ ಸಹೋದರ ಇಬ್ರಾಹಿಂ ರವರ ಮನೆಯಲ್ಲಿರುವ 80 ವರ್ಷದ ವೃದ್ದೆ, ತನ್ನ ತಂದೆಯ ತಂಗಿಯ (ಸೋದರತ್ತೆ) ಮನೆಗೆ ಬುರ್ಖ ಹಾಕಿಕೊಂಡು ಕೊಡೆ ಹಿಡಿದುಕೊಂಡು ಹೆಂಗಿಸಿನ ಚಪ್ಪಲಿ ಧರಿಸಿ ಮಾರುವೇಷದಲ್ಲಿ ಬಂದು ಒಬ್ಬಂಟಿಯಾಗಿದ್ದಾಗ, ಮನೆಗೆ ನುಗ್ಗಿ ಮೂರು ಪವನಿನ ಚಿನ್ನವನ್ನು ಕಸಿದುಕೊಂಡು ಪರಾರಿಯಾಗಿ ನಂತರ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮೂಲಕ ನಡೆದುಕೊಂಡು ಬಂದು ಟೆಂಡರ್ ಚಿಕ್ಕನ್ ಮುಂಭಾಗ ತನ್ನ ಕಾರಿನಲ್ಲಿ ಪರಾರಿಯಾಗಿದ್ದ ಹ್ಯಾರಿಸ್ ನನ್ನು ಕೃತ್ಯ ನಡೆದ ಒಂದೆರಡು ದಿನಗಳ ಬಳಿಕ ಪೊಲೀಸರು ಸಿಸಿಟಿವಿ ಮೂಲಕ ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿರುವ ಘಟನೆ ನಡೆದಿದೆ.

ಆರೋಪಿ ಹ್ಯಾರಿಸ್ ಚಿನ್ನವನ್ನು ಇರಿಟಿಯ ಚಿನ್ನಾಭರಣ ಮಳಿಗೆಗೆ ಮಾರಿದ ಹಣದಲ್ಲಿ ತನ್ನ ಮೊಮ್ಮಗಳಿಗೆ ಎರಡು ಚಿನ್ನದ ಓಲೆಯನ್ನು ಖರೀದಿಸಿದ್ದನ್ನು ತನಿಖೆ ವೇಳೆ ಬಹಿರಂಗಗೊಳಿಸಿದ್ದಾನೆ. ಆರೋಪಿಯು ಕೃತ್ಯವೆಸಗಿ ಸೋದರತ್ತೆಯ ಚಿನ್ನಾಭರಣವನ್ನು ತನ್ನ ಕೈವಶಗೊಳಿಸಿದ ನಂತರ ಅದೇ ದಿನ ಸಂಜೆ ಬಿಟ್ಟಂಗಾಲ- ಹಾತೂರು- ಬೈಗೋಡು ರಸ್ತೆ  ಮೂಲಕವಾಗಿ ತನ್ನ ಕಾರಿನಲ್ಲಿ  ಕೊಮ್ಮೆತೋಡುವಿನ ತನ್ನ ಮನೆಗೆ ಸೇರಿಕೊಂಡಿದ್ದನ್ನು, ಈ ದಾರಿ ಮಧ್ಯೆ ಬುರ್ಖವನ್ನು ಮತ್ತು ಚಪ್ಪಲಿಯನ್ನು ಕೂಡ ಎಸೆದಿದ್ದಾನೆ ಎಂಬುದನ್ನು ತನಿಖೆಯ ವೇಳೆ  ಬಾಯಿಬಿಟ್ಟಿದ್ದಾನೆ.

ಹಣಕ್ಕಾಗಿ ಇದೀಗ ಸ್ವಂತ ಸಂಬಂಧಿಕರು ಕೂಡ ಕಳ್ಳತನದ ದಾರಿ ಹಿಡಿಯುತ್ತಿದ್ದಾರೆ. ವಿರಾಜಪೇಟೆ  ಭಾಗದಲ್ಲಿ ಗಂಡಸು ಬುರ್ಖಾ ಧರಿಸಿ ಸಿನಿಮಯ ರೀತಿಯಾಗಿ  ಕಳವು ನಡಿಸಿರುವುದು ಇದು ಪ್ರಥಮ ಎನ್ನಲಾಗಿದೆ.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

7 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago