Categories: ಕೊಡಗು

ಬುರ್ಖಾ ಧರಿಸಿ ಮಾರುವೇಶದಲ್ಲಿ ಬಂದು ಸ್ವಂತ ಚಿಕ್ಕಮ್ಮಳ ಚಿನ್ನಾಭರಣವನ್ನು ಕಳುವು: ಕದ್ದ ಚಿನ್ನಾಭರಣ ಮಾರಾಟ ಮಾಡಿ ಮೊಮ್ಮಗಳಿಗೆ ಎರಡು ಚಿನ್ನದ ಓಲೆ ಖರೀದಿ

ಬುರ್ಖಾ ಹಾಕಿಕೊಂಡು ಮಾರುವೇಶದಲ್ಲಿ ಬಂದು ಒಂಟಿಯಾಗಿ ವೃದ್ಧೆ ಮನೆಯಲ್ಲಿದ್ದಾಗ, ಆಕೆಯ ಕುತ್ತಿಗೆಯಿಂದ ಚಿನ್ನಾಭರಣವನ್ನು ಕದ್ದು ಪರಾರಿಯಾಗಿದ್ದ ಖದೀಮ. ಸಿಸಿಟಿವಿ ಮೂಲಕ ಆರೋಪಿಯನ್ನು ಪತ್ತೆ ಹಚ್ಚಿ ಜೈಲಿಗೆ ಕಳಿಸಿದ ಘಟನೆ ವಿರಾಜಪೇಟೆಯಲ್ಲಿ ಮೇ 21ರಂದು ನಡೆದಿದ್ದು, ಇದೀಗ ತಡವಾಗಿ ಇದೀಗ ಬೆಳಕಿಗೆ ಬಂದಿದೆ.

ವಿರಾಜಪೇಟೆ -ಅಮ್ಮತ್ತಿ ರಸ್ತೆಯ ಕೊಮ್ಮೆತೋಡು (ಐಮಂಗಲ ಗ್ರಾಮ) ಎಂಬಲ್ಲಿ ಟೀ ಅಂಗಡಿ ಮಾಲೀಕ, ಅಲ್ಲಿಯ ಮಸೀದಿಯ ಆಡಳಿತ ಮಂಡಳಿಯ  ಸದಸ್ಯನಾಗಿದ್ದ ಕೋಳುಮಂಡ ಹ್ಯಾರಿಸ್ ಎಂಬ ವ್ಯಕ್ತಿ ಮೇ.21ರ ಸಂಜೆ ವಿರಾಜಪೇಟೆಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ತನ್ನ ಸಹೋದರ ಇಬ್ರಾಹಿಂ ರವರ ಮನೆಯಲ್ಲಿರುವ 80 ವರ್ಷದ ವೃದ್ದೆ, ತನ್ನ ತಂದೆಯ ತಂಗಿಯ (ಸೋದರತ್ತೆ) ಮನೆಗೆ ಬುರ್ಖ ಹಾಕಿಕೊಂಡು ಕೊಡೆ ಹಿಡಿದುಕೊಂಡು ಹೆಂಗಿಸಿನ ಚಪ್ಪಲಿ ಧರಿಸಿ ಮಾರುವೇಷದಲ್ಲಿ ಬಂದು ಒಬ್ಬಂಟಿಯಾಗಿದ್ದಾಗ, ಮನೆಗೆ ನುಗ್ಗಿ ಮೂರು ಪವನಿನ ಚಿನ್ನವನ್ನು ಕಸಿದುಕೊಂಡು ಪರಾರಿಯಾಗಿ ನಂತರ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮೂಲಕ ನಡೆದುಕೊಂಡು ಬಂದು ಟೆಂಡರ್ ಚಿಕ್ಕನ್ ಮುಂಭಾಗ ತನ್ನ ಕಾರಿನಲ್ಲಿ ಪರಾರಿಯಾಗಿದ್ದ ಹ್ಯಾರಿಸ್ ನನ್ನು ಕೃತ್ಯ ನಡೆದ ಒಂದೆರಡು ದಿನಗಳ ಬಳಿಕ ಪೊಲೀಸರು ಸಿಸಿಟಿವಿ ಮೂಲಕ ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿರುವ ಘಟನೆ ನಡೆದಿದೆ.

ಆರೋಪಿ ಹ್ಯಾರಿಸ್ ಚಿನ್ನವನ್ನು ಇರಿಟಿಯ ಚಿನ್ನಾಭರಣ ಮಳಿಗೆಗೆ ಮಾರಿದ ಹಣದಲ್ಲಿ ತನ್ನ ಮೊಮ್ಮಗಳಿಗೆ ಎರಡು ಚಿನ್ನದ ಓಲೆಯನ್ನು ಖರೀದಿಸಿದ್ದನ್ನು ತನಿಖೆ ವೇಳೆ ಬಹಿರಂಗಗೊಳಿಸಿದ್ದಾನೆ. ಆರೋಪಿಯು ಕೃತ್ಯವೆಸಗಿ ಸೋದರತ್ತೆಯ ಚಿನ್ನಾಭರಣವನ್ನು ತನ್ನ ಕೈವಶಗೊಳಿಸಿದ ನಂತರ ಅದೇ ದಿನ ಸಂಜೆ ಬಿಟ್ಟಂಗಾಲ- ಹಾತೂರು- ಬೈಗೋಡು ರಸ್ತೆ  ಮೂಲಕವಾಗಿ ತನ್ನ ಕಾರಿನಲ್ಲಿ  ಕೊಮ್ಮೆತೋಡುವಿನ ತನ್ನ ಮನೆಗೆ ಸೇರಿಕೊಂಡಿದ್ದನ್ನು, ಈ ದಾರಿ ಮಧ್ಯೆ ಬುರ್ಖವನ್ನು ಮತ್ತು ಚಪ್ಪಲಿಯನ್ನು ಕೂಡ ಎಸೆದಿದ್ದಾನೆ ಎಂಬುದನ್ನು ತನಿಖೆಯ ವೇಳೆ  ಬಾಯಿಬಿಟ್ಟಿದ್ದಾನೆ.

ಹಣಕ್ಕಾಗಿ ಇದೀಗ ಸ್ವಂತ ಸಂಬಂಧಿಕರು ಕೂಡ ಕಳ್ಳತನದ ದಾರಿ ಹಿಡಿಯುತ್ತಿದ್ದಾರೆ. ವಿರಾಜಪೇಟೆ  ಭಾಗದಲ್ಲಿ ಗಂಡಸು ಬುರ್ಖಾ ಧರಿಸಿ ಸಿನಿಮಯ ರೀತಿಯಾಗಿ  ಕಳವು ನಡಿಸಿರುವುದು ಇದು ಪ್ರಥಮ ಎನ್ನಲಾಗಿದೆ.

Ramesh Babu

Journalist

Recent Posts

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

4 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

4 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

12 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

23 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago