ದೊಡ್ಡಬಳ್ಳಾಪುರ ನಗರದ ತ್ಯಾಗರಾಜನಗರದ ಬುಲೆಟ್ ರಘು ಕೊಲೆಯಾದ ವ್ಯಕ್ತಿ. ಈತ ಕಳೆದ ಆರೇಳು ವರ್ಷಗಳಿಂದ ಬೆಳಗಾವಿಯಲ್ಲಿ ಖಾನಾವಳಿ ಇಟ್ಟುಕೊಂಡು, ಲವ್ ಮಾಡಿ ಮದುವೆ ಮಾಡಿಕೊಂಡು ಬೆಳಗಾವಿಯಲ್ಲೇ ವಾಸವಿದ್ದ. ಬೆಳಗಾವಿಯಿಂದ ಒಂದು ವಾರದ ಹಿಂದಷ್ಟೇ ದೊಡ್ಡಬಳ್ಳಾಪುರಕ್ಕೆ ಬಂದಿದ್ದ ಎಂದು ತಿಳಿದುಬಂದಿದೆ. ಈ ಹಿಂದೆ ಇಬ್ಬರ ಜೊತೆ ಗಲಾಟೆ ಮಾಡಿಕೊಂಡಿದ್ದನು. ಆ ಗಲಾಟೆ ವಿಷಯ ರಾಜಿ ಸಂಧಾನವಾಗಿತ್ತು. ನಿನ್ನೆ ಸಂಜೆ ಸುಮಾರು 6 ಗಂಟೆ ಸಮಯದಲ್ಲಿ ನಾನು ಸ್ನೇಹಿತರ ಜೊತೆ ಹೊರಹೋಗುತ್ತೇನೆಂದು ತನ್ನ ತಾಯಿಗೆ ಹೇಳಿ ಹೋಗುತ್ತಾನೆ. ಮನೆಯಿಂದ ಹೊರ ಹೋದವನು ಕೊಲೆಯಾಗಿದ್ದಾನೆ. ಸದ್ಯ ಈತನ ಫ್ರೆಂಡ್ಸ್ ಯಾರು ಎಂಬುದು ತಿಳಿದುಬಂದಿಲ್ಲ. ಕೊಲೆಗೆ ಸಂಬಂಧಿಸಿದಂತೆ ತನಿಖೆ ಮಾಡಲಾಗುತ್ತಿದೆ ಎಂದು ಎಎಸ್ಪಿ ನಾಗರಾಜು ತಿಳಿಸಿದ್ದಾರೆ.
ಹಾಲೋ ಬ್ರಿಕ್ಸ್ ನಿಂದ ತಲೆಗೆ ಹೊಡೆದು ನಡು ರಸ್ತೆಯಲ್ಲಿಯೇ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿಯ ಹೋಟೆಲ್ ಜೆಪಿ ಪ್ಯಾಲೆಸ್ ಬಳಿ ಬುಧವಾರ ರಾತ್ರಿ ಸುಮಾರು 12ಗಂಟೆಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಬುಲೆಟ್ ರಘು (38) ಎಂದು ಗುರುತಿಸಲಾಗಿದೆ.
ಸದ್ಯ ಘಟನೆಗೆ ಕಾರಣ ತಿಳಿದು ಬಂದಿಲ್ಲ. ಕುಡಿದ ಮತ್ತಿನಲ್ಲಿ ಯುವಕರ ಗುಂಪೊಂದು ವ್ಯಕ್ತಿ ಮೇಲೆ ಅಟ್ಯಾಕ್ ಮಾಡಿ ಹತ್ಯೆ ಮಾಡಲಾಗಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ….
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…