ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಸೇರಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗಲೇ ಸ್ಥಳೀಯ ಜೆಡಿಎಸ್-ಬಿಜೆಪಿ ಪಕ್ಷದ ಮೈತ್ರಿಯಲ್ಲಿ ಒಡಕು ಕಾಣಿಸಿಕೊಂಡಿದೆ.
ಚುನಾವಣಾ ಪ್ರಚಾರ ಸಭೆ, ಮನೆ ಮನೆ ಪ್ರಚಾರ, ಕಾರ್ಯಕ್ರಮ ಸಂಘಟನೆ ಸೇರಿದಂತೆ ಹಲವು ವಿಚಾರಗಳಲ್ಲಿ ಜೆಡಿಎಸ್ ನಿಷ್ಠಾವಂತ ಕಾರ್ಯಕರ್ತರು ಹಾಗೂ ಬೂತ್ ಮಟ್ಟದ ಮುಖಂಡರನ್ನು ಬಿಜೆಪಿ ನಾಯಕರು ಕಡೆಗಣಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಮೈತ್ರಿಗೆ ವಿಘ್ನ ಎದುರಾಗಿದೆ ಎನ್ನಲಾಗಿದೆ.
ನಗರದ ಬಹುತೇಕ ವಾರ್ಡ್ ಗಳಲ್ಲಿ ಬಿಜೆಪಿ ಮುಖಂಡರು ಹಾಗೂ ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳು ಏಕಪಕ್ಷೀಯ ತೀರ್ಮಾನ ಕೈಗೊಂಡು ಜೆಡಿಎಸ್ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ ಎನ್ನಲಾಗಿದೆ. ಬಿಜೆಪಿ ಪಕ್ಷದ ಮುಖಂಡರ ಈ ಧೋರಣೆ ಕುರಿತು ಬಿಜೆಪಿ ಶಾಸಕರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಮತದಾನಕ್ಕೆ ಕೆಲ ಗಂಟೆಗಳು ಬಾಕಿ ಇರುವಾಗಲೇ ಬಿಕ್ಕಟ್ಟು ತಲೆದೋರಿರುವುದು ಮೈತ್ರಿ ಧರ್ಮಕ್ಕೆ ಧಕ್ಕೆ ಉಂಟು ಮಾಡುವಂತಿದೆ ಎಂಬ ಅಭಿಪ್ರಾಯವೂ ಕೇಳಿಬಂದಿದೆ.
ನಗರದ 31 ವಾರ್ಡ್ ಗಳ ಪೈಕಿ ಬಹುತೇಕ ಕಡೆ ಜೆಡಿಎಸ್-ಬಿಜೆಪಿ ಮುಖಂಡರ ಮಧ್ಯೆ ಪರಸ್ಪರ ಅಸಮಾಧಾನ ತಲೆದೋರಿದೆ. ಬಿಜೆಪಿಯ ಕೆಲ ಕಾರ್ಯಕರ್ತರು ಹಾಗೂ ಮುಖಂಡರು ವಾಟ್ಸ್ ಆ್ಯಪ್ ಗ್ರೂಪ್ ಗಳಲ್ಲಿ ಬಹಿರಂಗ ಟೀಕೆಗೆ ಇಳಿದಿದ್ದಾರೆ.
ಚುನಾವಣಾ ಪ್ರಚಾರ ಸಭೆಗಳಲ್ಲಿ ಜೆಡಿಎಸ್ ಕಾರ್ಯಕರ್ತರೇ ಇರುವುದಿಲ್ಲ. ಭಾಗವಹಿಸಿದ ಕೆಲವು ಜೆಡಿಎಸ್ ಕಾರ್ಯಕರ್ತರು ನಕಲಿಗಳು ಎಂಬ ಬರಹ ಈಗ ಎಲ್ಲೆಡೆ ಹರಿದಾಡುತ್ತಿದ್ದು, ಎರಡೂ ಪಕ್ಷಗಳ ಮುಖಂಡರು, ಕಾರ್ಯಕರ್ತರ ಮಧ್ಯೆ ವಾಕ್ಸಮರ, ಪರಸ್ಪರ ಅಸಮಾಧಾನಕ್ಕೆ ಕಾರಣವಾಗಿದೆ.
ಬಿಜೆಪಿಗರ ವರ್ತನೆ ಕುರಿತು ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಅವರ ಗಮನಕ್ಕೆ ತಂದರೂ, ಸರಿ ಮಾಡೋಣ ಎಂಬ ಉತ್ತರವಷ್ಟೇ ಬರುತ್ತಿದೆ. ಆದರೆ, ಒಡಕು ಸರಿಪಡಿಸುವ ಕೆಲಸ ಮಾಡಿಲ್ಲ ಎಂದು ಜೆಡಿಎಸ್ ಪಕ್ಷ ಕೆಲ ಅಸಮಾಧಾನಿತ ಮುಖಂಡರು ಆರೋಪಿಸಿದ್ದಾರೆ.
ಒಟ್ಟಾರೆ ಕಾಂಗ್ರೆಸ್ ವಿರುದ್ಧ ತೊಡೆತಟ್ಟಿದ ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಮತದಾನಕ್ಕೂ ಮುಂಚೆಯೇ ಒಡಕು ಮೂಡಿದ್ದು, ಮತದಾನದ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…