ಬೂತ್ ಮಟ್ಟದ ಜೆಡಿಎಸ್ ಮುಖಂಡರನ್ನು ಬಿಜೆಪಿ‌ ನಾಯಕರು ಕಡೆಗಣನೆ ಆರೋಪ: ಮೈತ್ರಿಯಲ್ಲಿ ಒಡಕು ..?: ವಾಟ್ಸ್ ಆ್ಯಪ್ ಗ್ರೂಪ್ ಗಳಲ್ಲಿ ಬಹಿರಂಗ ಟೀಕೆ

Oplus_131072

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಸೇರಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗಲೇ ಸ್ಥಳೀಯ ಜೆಡಿಎಸ್-ಬಿಜೆಪಿ ಪಕ್ಷದ ಮೈತ್ರಿಯಲ್ಲಿ ಒಡಕು ಕಾಣಿಸಿಕೊಂಡಿದೆ.

ಚುನಾವಣಾ ಪ್ರಚಾರ‌ ಸಭೆ, ಮನೆ ಮನೆ ಪ್ರಚಾರ, ಕಾರ್ಯಕ್ರಮ ಸಂಘಟನೆ ಸೇರಿದಂತೆ ಹಲವು ವಿಚಾರಗಳಲ್ಲಿ ಜೆಡಿಎಸ್ ನಿಷ್ಠಾವಂತ ಕಾರ್ಯಕರ್ತರು ಹಾಗೂ ಬೂತ್ ಮಟ್ಟದ ಮುಖಂಡರನ್ನು ಬಿಜೆಪಿ‌ ನಾಯಕರು ಕಡೆಗಣಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಮೈತ್ರಿಗೆ ವಿಘ್ನ ಎದುರಾಗಿದೆ ಎನ್ನಲಾಗಿದೆ.

ನಗರದ ಬಹುತೇಕ ವಾರ್ಡ್ ಗಳಲ್ಲಿ ಬಿಜೆಪಿ‌ ಮುಖಂಡರು ಹಾಗೂ ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳು ಏಕಪಕ್ಷೀಯ ತೀರ್ಮಾನ ಕೈಗೊಂಡು ಜೆಡಿಎಸ್ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ ಎನ್ನಲಾಗಿದೆ. ಬಿಜೆಪಿ ಪಕ್ಷದ ಮುಖಂಡರ ಈ ಧೋರಣೆ ಕುರಿತು ಬಿಜೆಪಿ ಶಾಸಕರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಮತದಾನಕ್ಕೆ‌ ಕೆಲ ಗಂಟೆಗಳು ಬಾಕಿ ಇರುವಾಗಲೇ ಬಿಕ್ಕಟ್ಟು ತಲೆದೋರಿರುವುದು ಮೈತ್ರಿ ಧರ್ಮಕ್ಕೆ ಧಕ್ಕೆ ಉಂಟು ಮಾಡುವಂತಿದೆ ಎಂಬ ಅಭಿಪ್ರಾಯವೂ ಕೇಳಿಬಂದಿದೆ.

ನಗರದ‌ 31 ವಾರ್ಡ್ ಗಳ ಪೈಕಿ ಬಹುತೇಕ‌ ಕಡೆ ಜೆಡಿಎಸ್-ಬಿಜೆಪಿ ಮುಖಂಡರ‌ ಮಧ್ಯೆ ಪರಸ್ಪರ ಅಸಮಾಧಾನ ತಲೆದೋರಿದೆ. ಬಿಜೆಪಿಯ ಕೆಲ ಕಾರ್ಯಕರ್ತರು ಹಾಗೂ ಮುಖಂಡರು ವಾಟ್ಸ್ ಆ್ಯಪ್ ಗ್ರೂಪ್ ಗಳಲ್ಲಿ ಬಹಿರಂಗ ಟೀಕೆಗೆ ಇಳಿದಿದ್ದಾರೆ.
ಚುನಾವಣಾ ಪ್ರಚಾರ ಸಭೆಗಳಲ್ಲಿ ಜೆಡಿಎಸ್ ಕಾರ್ಯಕರ್ತರೇ ಇರುವುದಿಲ್ಲ. ಭಾಗವಹಿಸಿದ ಕೆಲವು ಜೆಡಿಎಸ್ ಕಾರ್ಯಕರ್ತರು ನಕಲಿಗಳು ಎಂಬ ಬರಹ ಈಗ ಎಲ್ಲೆಡೆ ಹರಿದಾಡುತ್ತಿದ್ದು, ಎರಡೂ ಪಕ್ಷಗಳ ಮುಖಂಡರು, ಕಾರ್ಯಕರ್ತರ ಮಧ್ಯೆ ವಾಕ್ಸಮರ, ಪರಸ್ಪರ ಅಸಮಾಧಾನಕ್ಕೆ ಕಾರಣವಾಗಿದೆ.

ಬಿಜೆಪಿಗರ ವರ್ತನೆ ಕುರಿತು ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಅವರ ಗಮನಕ್ಕೆ ತಂದರೂ, ಸರಿ ಮಾಡೋಣ ಎಂಬ ಉತ್ತರವಷ್ಟೇ ಬರುತ್ತಿದೆ. ಆದರೆ, ಒಡಕು ಸರಿಪಡಿಸುವ ಕೆಲಸ‌ ಮಾಡಿಲ್ಲ ಎಂದು ಜೆಡಿಎಸ್ ಪಕ್ಷ ಕೆಲ ಅಸಮಾಧಾನಿತ ಮುಖಂಡರು ಆರೋಪಿಸಿದ್ದಾರೆ.

ಒಟ್ಟಾರೆ ಕಾಂಗ್ರೆಸ್ ವಿರುದ್ಧ ತೊಡೆತಟ್ಟಿದ ಜೆಡಿಎಸ್ -ಬಿಜೆಪಿ ಮೈತ್ರಿಯಲ್ಲಿ ಮತದಾನಕ್ಕೂ ಮುಂಚೆಯೇ ಒಡಕು ಮೂಡಿದ್ದು, ಮತದಾನದ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎಂಬುದನ್ನು ಕಾದು ನೋಡಬೇಕಿದೆ.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

35 minutes ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

2 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

5 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

20 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago