Categories: Crime

ಬೃಹತ್ ಇಸ್ಪೀಟ್ ಅಡ್ಡೆ ಭೇದಿಸಿದ ಪೊಲೀಸರು: ₹49.50 ಲಕ್ಷ ನಗದು ವಶಕ್ಕೆ ,19 ಮಂದಿ ಅಂದರ್

ಶಿರಸಿ ಪಟ್ಟಣದ ಹೊರವಲಯದಲ್ಲಿರುವ ಭೈರುಂಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಗಸಾಲ ಗ್ರಾಮದ ವಿ.ಆರ್.ಆರ್ ಹೋಂ ಸ್ಟೇ ಬಳಿ ಅಕ್ರಮವಾಗಿ ನಡೆಯುತ್ತಿದ್ದ ಬೃಹತ್ ಇಸ್ಪೀಟ್ ಅಡ್ಡದ ಮೇಲೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ದಾಳಿ ನಡೆಸಿ, 19 ಜನರನ್ನು ಬಂಧಿಸಿ, 49 ಲಕ್ಷದ 50 ಸಾವಿರ ನಗದು ಸೇರಿದಂತೆ ಲಕ್ಷಂತಾರ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಜುಲೈ 23ರ ರಾತ್ರಿ 8:45ರ ಸುಮಾರಿಗೆ ಅಕ್ರಮವಾಗಿ ಜುಗಾರಿ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಶಿರಸಿ ಗ್ರಾಮೀಣ ಠಾಣಾ ಪೊಲೀಸರು, ರಾತ್ರಿ 9:45ಕ್ಕೆ ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿ 19 ಮಂದಿ ಇಸ್ಪೀಟ್ ಜುಗಾರಾಟದಲ್ಲಿ ತೊಡಗಿದ್ದರು.

ದಾಳಿಯ ವೇಳೆ, ಪೊಲೀಸರು ಇಸ್ಪೀಟ್ ಅಡ್ಡೆಯಿಂದ ₹49,50,436 ನಗದು ಹಣ, ಜಮಖಾನಗಳು, 52 ಇಸ್ಪೀಟ್ ಎಲೆಗಳು, ಲಕ್ಷಾಂತರ ಮೌಲ್ಯದ ನಾಲ್ಕು ಕಾರುಗಳು ಹಾಗೂ 15ಕ್ಕೂ ಹೆಚ್ಚಿನ ಮೊಬೈಲ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

ಬಂಧಿತ ಆಪಾದಿತರನ್ನು ದಾವಣಗೆರೆ, ಹಾವೇರಿ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಸೇರಿದವರಾದ ಅನಿಲಕುಮಾರ್ ಜಿ.ಆರ್ (30), ಭೀರಪ್ಪ (42), ಬೀರೇಶ್ (26), ಶಂಕರಗೌಡ ಪಾಟೀಲ್ (48), ನಾಗರಾಜ (44), ಪ್ರದೀಪ (48), ಪ್ರಶಾಂತ (35), ಜಬಿವುಲ್ಲಾ (38), ರೇವಣಸಿದ್ದಯ್ಯ (45), ಈಶಪ್ಪ (40), ಪ್ರಕಾಶ (44), ಮಲ್ಲಿಕಾರ್ಜುನ (40), ಬಸವರಾಜ ಜಿ.ಆರ್ (41), ಚಮನಸಾಬ್ (39), ಬಸವರಾಜ (35), ಈರಣ್ಣ (38), ಸಂತೋಷ (31), ವೀರಬಸಪ್ಪ (45), ಮತ್ತು ಚೇತನ ಎನ್ (36) ಎಂದು ಗುರುತಿಸಲಾಗಿದೆ.

ಈ ಕುರಿತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ

ಕಾರ್ಯಾಚರಣೆಯನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್. ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ. ಕೃಷ್ಣಮೂರ್ತಿ ಕೆ.ಎಸ್.ಪಿ.ಎಸ್, ಜಗದೀಶ ಎಂ. ಕೆ.ಎಸ್.ಪಿ.ಎಸ್ ಅವರ ಮಾರ್ಗದರ್ಶನದಲ್ಲಿ, ಶಿರಸಿ ಉಪವಿಭಾಗದ ಡಿ.ವೈ.ಎಸ್.ಪಿ ಗೀತಾ ಪಾಟೀಲ್ ಅವರ ನೇತೃತ್ವದಲ್ಲಿ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಪಿ.ಎಸ್.ಐ ಅಶೋಕ ಆರ್ ರಾಠೋಡ ಮತ್ತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂಧಿಗಳಾದ ಎ.ಎಸ್.ಐ ಪ್ರದೀಪ ರೇವಣಕರ, ಸಂತೋಷ ಕಮಟಗೇರಿ, ರಾಘವೇಂದ್ರ ಜಿ, ಗಣಪತಿ ಪಟಗಾರ, ಷಣ್ಮುಖ ಮಿರಾಶಿ, ರವಿ ಉಕ್ಕಡಗಾತ್ರಿ. ಭರತಕುಮಾರ, ಮಾರುತಿ ಗೌಡ ಹಾಗೂ ಮುಂಡಗೋಡ ಪೊಲೀಸ್ ಠಾಣೆಯ ಕೋಟ್ರೇಶ ನಾಗರವಳ್ಳಿ. ಅಣ್ಣಪ್ಪ ಬುಡಗೇರಿ ಹಾಗೂ ಚಾಲಕರಾದ ಕೃಷ್ಣ ರೇವಣಕರ, ಮೌಲಾಲಿ ಮರಗಡಿ ಇವರುಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂಧಿಯವರಿಗೆ ಪೊಲೀಸ್ ಅಧೀಕ್ಷಕರಾದ ದೀಪನ್, ಎಂ.ಎನ್. ಐ.ಪಿ.ಎಸ್ ರವರು ಪ್ರಶಂಸೆ ವ್ಯಕ್ತ ಪಡಿಸಿ ಬಹುಮಾನ ಘೋಷಿಸಿರುತ್ತಾರೆ.

Ramesh Babu

Journalist

Share
Published by
Ramesh Babu

Recent Posts

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

3 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

6 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

6 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

17 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

18 hours ago

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…

18 hours ago