Categories: Crime

ಬೃಹತ್ ಇಸ್ಪೀಟ್ ಅಡ್ಡೆ ಭೇದಿಸಿದ ಪೊಲೀಸರು: ₹49.50 ಲಕ್ಷ ನಗದು ವಶಕ್ಕೆ ,19 ಮಂದಿ ಅಂದರ್

ಶಿರಸಿ ಪಟ್ಟಣದ ಹೊರವಲಯದಲ್ಲಿರುವ ಭೈರುಂಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಗಸಾಲ ಗ್ರಾಮದ ವಿ.ಆರ್.ಆರ್ ಹೋಂ ಸ್ಟೇ ಬಳಿ ಅಕ್ರಮವಾಗಿ ನಡೆಯುತ್ತಿದ್ದ ಬೃಹತ್ ಇಸ್ಪೀಟ್ ಅಡ್ಡದ ಮೇಲೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ದಾಳಿ ನಡೆಸಿ, 19 ಜನರನ್ನು ಬಂಧಿಸಿ, 49 ಲಕ್ಷದ 50 ಸಾವಿರ ನಗದು ಸೇರಿದಂತೆ ಲಕ್ಷಂತಾರ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಜುಲೈ 23ರ ರಾತ್ರಿ 8:45ರ ಸುಮಾರಿಗೆ ಅಕ್ರಮವಾಗಿ ಜುಗಾರಿ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಶಿರಸಿ ಗ್ರಾಮೀಣ ಠಾಣಾ ಪೊಲೀಸರು, ರಾತ್ರಿ 9:45ಕ್ಕೆ ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿ 19 ಮಂದಿ ಇಸ್ಪೀಟ್ ಜುಗಾರಾಟದಲ್ಲಿ ತೊಡಗಿದ್ದರು.

ದಾಳಿಯ ವೇಳೆ, ಪೊಲೀಸರು ಇಸ್ಪೀಟ್ ಅಡ್ಡೆಯಿಂದ ₹49,50,436 ನಗದು ಹಣ, ಜಮಖಾನಗಳು, 52 ಇಸ್ಪೀಟ್ ಎಲೆಗಳು, ಲಕ್ಷಾಂತರ ಮೌಲ್ಯದ ನಾಲ್ಕು ಕಾರುಗಳು ಹಾಗೂ 15ಕ್ಕೂ ಹೆಚ್ಚಿನ ಮೊಬೈಲ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

ಬಂಧಿತ ಆಪಾದಿತರನ್ನು ದಾವಣಗೆರೆ, ಹಾವೇರಿ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಸೇರಿದವರಾದ ಅನಿಲಕುಮಾರ್ ಜಿ.ಆರ್ (30), ಭೀರಪ್ಪ (42), ಬೀರೇಶ್ (26), ಶಂಕರಗೌಡ ಪಾಟೀಲ್ (48), ನಾಗರಾಜ (44), ಪ್ರದೀಪ (48), ಪ್ರಶಾಂತ (35), ಜಬಿವುಲ್ಲಾ (38), ರೇವಣಸಿದ್ದಯ್ಯ (45), ಈಶಪ್ಪ (40), ಪ್ರಕಾಶ (44), ಮಲ್ಲಿಕಾರ್ಜುನ (40), ಬಸವರಾಜ ಜಿ.ಆರ್ (41), ಚಮನಸಾಬ್ (39), ಬಸವರಾಜ (35), ಈರಣ್ಣ (38), ಸಂತೋಷ (31), ವೀರಬಸಪ್ಪ (45), ಮತ್ತು ಚೇತನ ಎನ್ (36) ಎಂದು ಗುರುತಿಸಲಾಗಿದೆ.

ಈ ಕುರಿತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ

ಕಾರ್ಯಾಚರಣೆಯನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್. ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ. ಕೃಷ್ಣಮೂರ್ತಿ ಕೆ.ಎಸ್.ಪಿ.ಎಸ್, ಜಗದೀಶ ಎಂ. ಕೆ.ಎಸ್.ಪಿ.ಎಸ್ ಅವರ ಮಾರ್ಗದರ್ಶನದಲ್ಲಿ, ಶಿರಸಿ ಉಪವಿಭಾಗದ ಡಿ.ವೈ.ಎಸ್.ಪಿ ಗೀತಾ ಪಾಟೀಲ್ ಅವರ ನೇತೃತ್ವದಲ್ಲಿ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಪಿ.ಎಸ್.ಐ ಅಶೋಕ ಆರ್ ರಾಠೋಡ ಮತ್ತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂಧಿಗಳಾದ ಎ.ಎಸ್.ಐ ಪ್ರದೀಪ ರೇವಣಕರ, ಸಂತೋಷ ಕಮಟಗೇರಿ, ರಾಘವೇಂದ್ರ ಜಿ, ಗಣಪತಿ ಪಟಗಾರ, ಷಣ್ಮುಖ ಮಿರಾಶಿ, ರವಿ ಉಕ್ಕಡಗಾತ್ರಿ. ಭರತಕುಮಾರ, ಮಾರುತಿ ಗೌಡ ಹಾಗೂ ಮುಂಡಗೋಡ ಪೊಲೀಸ್ ಠಾಣೆಯ ಕೋಟ್ರೇಶ ನಾಗರವಳ್ಳಿ. ಅಣ್ಣಪ್ಪ ಬುಡಗೇರಿ ಹಾಗೂ ಚಾಲಕರಾದ ಕೃಷ್ಣ ರೇವಣಕರ, ಮೌಲಾಲಿ ಮರಗಡಿ ಇವರುಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂಧಿಯವರಿಗೆ ಪೊಲೀಸ್ ಅಧೀಕ್ಷಕರಾದ ದೀಪನ್, ಎಂ.ಎನ್. ಐ.ಪಿ.ಎಸ್ ರವರು ಪ್ರಶಂಸೆ ವ್ಯಕ್ತ ಪಡಿಸಿ ಬಹುಮಾನ ಘೋಷಿಸಿರುತ್ತಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

3 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

14 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

15 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

16 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

18 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

21 hours ago