ಶಿರಸಿ ಪಟ್ಟಣದ ಹೊರವಲಯದಲ್ಲಿರುವ ಭೈರುಂಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಗಸಾಲ ಗ್ರಾಮದ ವಿ.ಆರ್.ಆರ್ ಹೋಂ ಸ್ಟೇ ಬಳಿ ಅಕ್ರಮವಾಗಿ ನಡೆಯುತ್ತಿದ್ದ ಬೃಹತ್ ಇಸ್ಪೀಟ್ ಅಡ್ಡದ ಮೇಲೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ದಾಳಿ ನಡೆಸಿ, 19 ಜನರನ್ನು ಬಂಧಿಸಿ, 49 ಲಕ್ಷದ 50 ಸಾವಿರ ನಗದು ಸೇರಿದಂತೆ ಲಕ್ಷಂತಾರ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಜುಲೈ 23ರ ರಾತ್ರಿ 8:45ರ ಸುಮಾರಿಗೆ ಅಕ್ರಮವಾಗಿ ಜುಗಾರಿ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಶಿರಸಿ ಗ್ರಾಮೀಣ ಠಾಣಾ ಪೊಲೀಸರು, ರಾತ್ರಿ 9:45ಕ್ಕೆ ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿ 19 ಮಂದಿ ಇಸ್ಪೀಟ್ ಜುಗಾರಾಟದಲ್ಲಿ ತೊಡಗಿದ್ದರು.
ದಾಳಿಯ ವೇಳೆ, ಪೊಲೀಸರು ಇಸ್ಪೀಟ್ ಅಡ್ಡೆಯಿಂದ ₹49,50,436 ನಗದು ಹಣ, ಜಮಖಾನಗಳು, 52 ಇಸ್ಪೀಟ್ ಎಲೆಗಳು, ಲಕ್ಷಾಂತರ ಮೌಲ್ಯದ ನಾಲ್ಕು ಕಾರುಗಳು ಹಾಗೂ 15ಕ್ಕೂ ಹೆಚ್ಚಿನ ಮೊಬೈಲ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ
ಬಂಧಿತ ಆಪಾದಿತರನ್ನು ದಾವಣಗೆರೆ, ಹಾವೇರಿ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಸೇರಿದವರಾದ ಅನಿಲಕುಮಾರ್ ಜಿ.ಆರ್ (30), ಭೀರಪ್ಪ (42), ಬೀರೇಶ್ (26), ಶಂಕರಗೌಡ ಪಾಟೀಲ್ (48), ನಾಗರಾಜ (44), ಪ್ರದೀಪ (48), ಪ್ರಶಾಂತ (35), ಜಬಿವುಲ್ಲಾ (38), ರೇವಣಸಿದ್ದಯ್ಯ (45), ಈಶಪ್ಪ (40), ಪ್ರಕಾಶ (44), ಮಲ್ಲಿಕಾರ್ಜುನ (40), ಬಸವರಾಜ ಜಿ.ಆರ್ (41), ಚಮನಸಾಬ್ (39), ಬಸವರಾಜ (35), ಈರಣ್ಣ (38), ಸಂತೋಷ (31), ವೀರಬಸಪ್ಪ (45), ಮತ್ತು ಚೇತನ ಎನ್ (36) ಎಂದು ಗುರುತಿಸಲಾಗಿದೆ.
ಈ ಕುರಿತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ
ಕಾರ್ಯಾಚರಣೆಯನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್. ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ. ಕೃಷ್ಣಮೂರ್ತಿ ಕೆ.ಎಸ್.ಪಿ.ಎಸ್, ಜಗದೀಶ ಎಂ. ಕೆ.ಎಸ್.ಪಿ.ಎಸ್ ಅವರ ಮಾರ್ಗದರ್ಶನದಲ್ಲಿ, ಶಿರಸಿ ಉಪವಿಭಾಗದ ಡಿ.ವೈ.ಎಸ್.ಪಿ ಗೀತಾ ಪಾಟೀಲ್ ಅವರ ನೇತೃತ್ವದಲ್ಲಿ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಪಿ.ಎಸ್.ಐ ಅಶೋಕ ಆರ್ ರಾಠೋಡ ಮತ್ತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂಧಿಗಳಾದ ಎ.ಎಸ್.ಐ ಪ್ರದೀಪ ರೇವಣಕರ, ಸಂತೋಷ ಕಮಟಗೇರಿ, ರಾಘವೇಂದ್ರ ಜಿ, ಗಣಪತಿ ಪಟಗಾರ, ಷಣ್ಮುಖ ಮಿರಾಶಿ, ರವಿ ಉಕ್ಕಡಗಾತ್ರಿ. ಭರತಕುಮಾರ, ಮಾರುತಿ ಗೌಡ ಹಾಗೂ ಮುಂಡಗೋಡ ಪೊಲೀಸ್ ಠಾಣೆಯ ಕೋಟ್ರೇಶ ನಾಗರವಳ್ಳಿ. ಅಣ್ಣಪ್ಪ ಬುಡಗೇರಿ ಹಾಗೂ ಚಾಲಕರಾದ ಕೃಷ್ಣ ರೇವಣಕರ, ಮೌಲಾಲಿ ಮರಗಡಿ ಇವರುಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂಧಿಯವರಿಗೆ ಪೊಲೀಸ್ ಅಧೀಕ್ಷಕರಾದ ದೀಪನ್, ಎಂ.ಎನ್. ಐ.ಪಿ.ಎಸ್ ರವರು ಪ್ರಶಂಸೆ ವ್ಯಕ್ತ ಪಡಿಸಿ ಬಹುಮಾನ ಘೋಷಿಸಿರುತ್ತಾರೆ.
ದೊಡ್ಡಬಳ್ಳಾಪುರ ತಾಲೂಕಿನ ಮಧುರನಹೊಸಹಳ್ಳಿ ಕಾಲೋನಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಪಟಾಕಿ ಸಿಡಿಸಿ, ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ…
14 ವರ್ಷದ ಮಗಳನ್ನು ಕೊಂದು ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ ಫೀಲ್ಡ್ ಬಳಿಯ ಇಮ್ಮಡಿಹಳ್ಳಿಯಲ್ಲಿ ನಡೆದಿದೆ... ಮಗಳು…
ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆಯಾಗಿರುವ ಘಟನೆ ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ…
ವಿಜಯಪುರದಲ್ಲೋಂದು ವಿಚಿತ್ರ, ಅಮಾನವೀಯ, ಕರಳುಹಿಂಡುವ ಘಟನೆ ನಡೆದಿದೆ. ಇಲ್ಲೊಬ್ಬ ಕಿರಾತಕ ತಂದೆ ಮಗನನ್ನೇ ಕೊಲೆ ಮಾಡಿದ್ದಾನೆ. ಮಗ ನೋಡಲು ತನ್ನಂತೆ…
ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾವಿದ್ಯಾಲಯ ವತಿಯಿಂದ ಸಂವಿಧಾನ ಶಿಲ್ಪಿ,…
ಮನೆಯಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ನಿನ್ನೆ (ಏ.13) ರಾತ್ರಿ ನಡೆದಿದೆ... ವಿನೋದ್ ಕುಮಾರ್(44),…