Categories: Crime

ಬೃಹತ್ ಇಸ್ಪೀಟ್ ಅಡ್ಡೆ ಭೇದಿಸಿದ ಪೊಲೀಸರು: ₹49.50 ಲಕ್ಷ ನಗದು ವಶಕ್ಕೆ ,19 ಮಂದಿ ಅಂದರ್

ಶಿರಸಿ ಪಟ್ಟಣದ ಹೊರವಲಯದಲ್ಲಿರುವ ಭೈರುಂಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಗಸಾಲ ಗ್ರಾಮದ ವಿ.ಆರ್.ಆರ್ ಹೋಂ ಸ್ಟೇ ಬಳಿ ಅಕ್ರಮವಾಗಿ ನಡೆಯುತ್ತಿದ್ದ ಬೃಹತ್ ಇಸ್ಪೀಟ್ ಅಡ್ಡದ ಮೇಲೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ದಾಳಿ ನಡೆಸಿ, 19 ಜನರನ್ನು ಬಂಧಿಸಿ, 49 ಲಕ್ಷದ 50 ಸಾವಿರ ನಗದು ಸೇರಿದಂತೆ ಲಕ್ಷಂತಾರ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಜುಲೈ 23ರ ರಾತ್ರಿ 8:45ರ ಸುಮಾರಿಗೆ ಅಕ್ರಮವಾಗಿ ಜುಗಾರಿ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಶಿರಸಿ ಗ್ರಾಮೀಣ ಠಾಣಾ ಪೊಲೀಸರು, ರಾತ್ರಿ 9:45ಕ್ಕೆ ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿ 19 ಮಂದಿ ಇಸ್ಪೀಟ್ ಜುಗಾರಾಟದಲ್ಲಿ ತೊಡಗಿದ್ದರು.

ದಾಳಿಯ ವೇಳೆ, ಪೊಲೀಸರು ಇಸ್ಪೀಟ್ ಅಡ್ಡೆಯಿಂದ ₹49,50,436 ನಗದು ಹಣ, ಜಮಖಾನಗಳು, 52 ಇಸ್ಪೀಟ್ ಎಲೆಗಳು, ಲಕ್ಷಾಂತರ ಮೌಲ್ಯದ ನಾಲ್ಕು ಕಾರುಗಳು ಹಾಗೂ 15ಕ್ಕೂ ಹೆಚ್ಚಿನ ಮೊಬೈಲ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

ಬಂಧಿತ ಆಪಾದಿತರನ್ನು ದಾವಣಗೆರೆ, ಹಾವೇರಿ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಸೇರಿದವರಾದ ಅನಿಲಕುಮಾರ್ ಜಿ.ಆರ್ (30), ಭೀರಪ್ಪ (42), ಬೀರೇಶ್ (26), ಶಂಕರಗೌಡ ಪಾಟೀಲ್ (48), ನಾಗರಾಜ (44), ಪ್ರದೀಪ (48), ಪ್ರಶಾಂತ (35), ಜಬಿವುಲ್ಲಾ (38), ರೇವಣಸಿದ್ದಯ್ಯ (45), ಈಶಪ್ಪ (40), ಪ್ರಕಾಶ (44), ಮಲ್ಲಿಕಾರ್ಜುನ (40), ಬಸವರಾಜ ಜಿ.ಆರ್ (41), ಚಮನಸಾಬ್ (39), ಬಸವರಾಜ (35), ಈರಣ್ಣ (38), ಸಂತೋಷ (31), ವೀರಬಸಪ್ಪ (45), ಮತ್ತು ಚೇತನ ಎನ್ (36) ಎಂದು ಗುರುತಿಸಲಾಗಿದೆ.

ಈ ಕುರಿತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ

ಕಾರ್ಯಾಚರಣೆಯನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್. ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ. ಕೃಷ್ಣಮೂರ್ತಿ ಕೆ.ಎಸ್.ಪಿ.ಎಸ್, ಜಗದೀಶ ಎಂ. ಕೆ.ಎಸ್.ಪಿ.ಎಸ್ ಅವರ ಮಾರ್ಗದರ್ಶನದಲ್ಲಿ, ಶಿರಸಿ ಉಪವಿಭಾಗದ ಡಿ.ವೈ.ಎಸ್.ಪಿ ಗೀತಾ ಪಾಟೀಲ್ ಅವರ ನೇತೃತ್ವದಲ್ಲಿ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಪಿ.ಎಸ್.ಐ ಅಶೋಕ ಆರ್ ರಾಠೋಡ ಮತ್ತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂಧಿಗಳಾದ ಎ.ಎಸ್.ಐ ಪ್ರದೀಪ ರೇವಣಕರ, ಸಂತೋಷ ಕಮಟಗೇರಿ, ರಾಘವೇಂದ್ರ ಜಿ, ಗಣಪತಿ ಪಟಗಾರ, ಷಣ್ಮುಖ ಮಿರಾಶಿ, ರವಿ ಉಕ್ಕಡಗಾತ್ರಿ. ಭರತಕುಮಾರ, ಮಾರುತಿ ಗೌಡ ಹಾಗೂ ಮುಂಡಗೋಡ ಪೊಲೀಸ್ ಠಾಣೆಯ ಕೋಟ್ರೇಶ ನಾಗರವಳ್ಳಿ. ಅಣ್ಣಪ್ಪ ಬುಡಗೇರಿ ಹಾಗೂ ಚಾಲಕರಾದ ಕೃಷ್ಣ ರೇವಣಕರ, ಮೌಲಾಲಿ ಮರಗಡಿ ಇವರುಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂಧಿಯವರಿಗೆ ಪೊಲೀಸ್ ಅಧೀಕ್ಷಕರಾದ ದೀಪನ್, ಎಂ.ಎನ್. ಐ.ಪಿ.ಎಸ್ ರವರು ಪ್ರಶಂಸೆ ವ್ಯಕ್ತ ಪಡಿಸಿ ಬಹುಮಾನ ಘೋಷಿಸಿರುತ್ತಾರೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

11 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

15 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

19 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago