Categories: Crime

ಬೃಹತ್ ಇಸ್ಪೀಟ್ ಅಡ್ಡೆ ಭೇದಿಸಿದ ಪೊಲೀಸರು: ₹49.50 ಲಕ್ಷ ನಗದು ವಶಕ್ಕೆ ,19 ಮಂದಿ ಅಂದರ್

ಶಿರಸಿ ಪಟ್ಟಣದ ಹೊರವಲಯದಲ್ಲಿರುವ ಭೈರುಂಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಗಸಾಲ ಗ್ರಾಮದ ವಿ.ಆರ್.ಆರ್ ಹೋಂ ಸ್ಟೇ ಬಳಿ ಅಕ್ರಮವಾಗಿ ನಡೆಯುತ್ತಿದ್ದ ಬೃಹತ್ ಇಸ್ಪೀಟ್ ಅಡ್ಡದ ಮೇಲೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ದಾಳಿ ನಡೆಸಿ, 19 ಜನರನ್ನು ಬಂಧಿಸಿ, 49 ಲಕ್ಷದ 50 ಸಾವಿರ ನಗದು ಸೇರಿದಂತೆ ಲಕ್ಷಂತಾರ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಜುಲೈ 23ರ ರಾತ್ರಿ 8:45ರ ಸುಮಾರಿಗೆ ಅಕ್ರಮವಾಗಿ ಜುಗಾರಿ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಶಿರಸಿ ಗ್ರಾಮೀಣ ಠಾಣಾ ಪೊಲೀಸರು, ರಾತ್ರಿ 9:45ಕ್ಕೆ ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿ 19 ಮಂದಿ ಇಸ್ಪೀಟ್ ಜುಗಾರಾಟದಲ್ಲಿ ತೊಡಗಿದ್ದರು.

ದಾಳಿಯ ವೇಳೆ, ಪೊಲೀಸರು ಇಸ್ಪೀಟ್ ಅಡ್ಡೆಯಿಂದ ₹49,50,436 ನಗದು ಹಣ, ಜಮಖಾನಗಳು, 52 ಇಸ್ಪೀಟ್ ಎಲೆಗಳು, ಲಕ್ಷಾಂತರ ಮೌಲ್ಯದ ನಾಲ್ಕು ಕಾರುಗಳು ಹಾಗೂ 15ಕ್ಕೂ ಹೆಚ್ಚಿನ ಮೊಬೈಲ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

ಬಂಧಿತ ಆಪಾದಿತರನ್ನು ದಾವಣಗೆರೆ, ಹಾವೇರಿ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಸೇರಿದವರಾದ ಅನಿಲಕುಮಾರ್ ಜಿ.ಆರ್ (30), ಭೀರಪ್ಪ (42), ಬೀರೇಶ್ (26), ಶಂಕರಗೌಡ ಪಾಟೀಲ್ (48), ನಾಗರಾಜ (44), ಪ್ರದೀಪ (48), ಪ್ರಶಾಂತ (35), ಜಬಿವುಲ್ಲಾ (38), ರೇವಣಸಿದ್ದಯ್ಯ (45), ಈಶಪ್ಪ (40), ಪ್ರಕಾಶ (44), ಮಲ್ಲಿಕಾರ್ಜುನ (40), ಬಸವರಾಜ ಜಿ.ಆರ್ (41), ಚಮನಸಾಬ್ (39), ಬಸವರಾಜ (35), ಈರಣ್ಣ (38), ಸಂತೋಷ (31), ವೀರಬಸಪ್ಪ (45), ಮತ್ತು ಚೇತನ ಎನ್ (36) ಎಂದು ಗುರುತಿಸಲಾಗಿದೆ.

ಈ ಕುರಿತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ

ಕಾರ್ಯಾಚರಣೆಯನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್. ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ. ಕೃಷ್ಣಮೂರ್ತಿ ಕೆ.ಎಸ್.ಪಿ.ಎಸ್, ಜಗದೀಶ ಎಂ. ಕೆ.ಎಸ್.ಪಿ.ಎಸ್ ಅವರ ಮಾರ್ಗದರ್ಶನದಲ್ಲಿ, ಶಿರಸಿ ಉಪವಿಭಾಗದ ಡಿ.ವೈ.ಎಸ್.ಪಿ ಗೀತಾ ಪಾಟೀಲ್ ಅವರ ನೇತೃತ್ವದಲ್ಲಿ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಪಿ.ಎಸ್.ಐ ಅಶೋಕ ಆರ್ ರಾಠೋಡ ಮತ್ತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂಧಿಗಳಾದ ಎ.ಎಸ್.ಐ ಪ್ರದೀಪ ರೇವಣಕರ, ಸಂತೋಷ ಕಮಟಗೇರಿ, ರಾಘವೇಂದ್ರ ಜಿ, ಗಣಪತಿ ಪಟಗಾರ, ಷಣ್ಮುಖ ಮಿರಾಶಿ, ರವಿ ಉಕ್ಕಡಗಾತ್ರಿ. ಭರತಕುಮಾರ, ಮಾರುತಿ ಗೌಡ ಹಾಗೂ ಮುಂಡಗೋಡ ಪೊಲೀಸ್ ಠಾಣೆಯ ಕೋಟ್ರೇಶ ನಾಗರವಳ್ಳಿ. ಅಣ್ಣಪ್ಪ ಬುಡಗೇರಿ ಹಾಗೂ ಚಾಲಕರಾದ ಕೃಷ್ಣ ರೇವಣಕರ, ಮೌಲಾಲಿ ಮರಗಡಿ ಇವರುಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂಧಿಯವರಿಗೆ ಪೊಲೀಸ್ ಅಧೀಕ್ಷಕರಾದ ದೀಪನ್, ಎಂ.ಎನ್. ಐ.ಪಿ.ಎಸ್ ರವರು ಪ್ರಶಂಸೆ ವ್ಯಕ್ತ ಪಡಿಸಿ ಬಹುಮಾನ ಘೋಷಿಸಿರುತ್ತಾರೆ.

Ramesh Babu

Journalist

Recent Posts

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

10 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

15 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

17 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

18 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

22 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

1 day ago