Categories: Crime

ಬೃಹತ್ ಇಸ್ಪೀಟ್ ಅಡ್ಡೆ ಭೇದಿಸಿದ ಪೊಲೀಸರು: ₹49.50 ಲಕ್ಷ ನಗದು ವಶಕ್ಕೆ ,19 ಮಂದಿ ಅಂದರ್

ಶಿರಸಿ ಪಟ್ಟಣದ ಹೊರವಲಯದಲ್ಲಿರುವ ಭೈರುಂಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಗಸಾಲ ಗ್ರಾಮದ ವಿ.ಆರ್.ಆರ್ ಹೋಂ ಸ್ಟೇ ಬಳಿ ಅಕ್ರಮವಾಗಿ ನಡೆಯುತ್ತಿದ್ದ ಬೃಹತ್ ಇಸ್ಪೀಟ್ ಅಡ್ಡದ ಮೇಲೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ದಾಳಿ ನಡೆಸಿ, 19 ಜನರನ್ನು ಬಂಧಿಸಿ, 49 ಲಕ್ಷದ 50 ಸಾವಿರ ನಗದು ಸೇರಿದಂತೆ ಲಕ್ಷಂತಾರ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಜುಲೈ 23ರ ರಾತ್ರಿ 8:45ರ ಸುಮಾರಿಗೆ ಅಕ್ರಮವಾಗಿ ಜುಗಾರಿ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಶಿರಸಿ ಗ್ರಾಮೀಣ ಠಾಣಾ ಪೊಲೀಸರು, ರಾತ್ರಿ 9:45ಕ್ಕೆ ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿ 19 ಮಂದಿ ಇಸ್ಪೀಟ್ ಜುಗಾರಾಟದಲ್ಲಿ ತೊಡಗಿದ್ದರು.

ದಾಳಿಯ ವೇಳೆ, ಪೊಲೀಸರು ಇಸ್ಪೀಟ್ ಅಡ್ಡೆಯಿಂದ ₹49,50,436 ನಗದು ಹಣ, ಜಮಖಾನಗಳು, 52 ಇಸ್ಪೀಟ್ ಎಲೆಗಳು, ಲಕ್ಷಾಂತರ ಮೌಲ್ಯದ ನಾಲ್ಕು ಕಾರುಗಳು ಹಾಗೂ 15ಕ್ಕೂ ಹೆಚ್ಚಿನ ಮೊಬೈಲ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ

ಬಂಧಿತ ಆಪಾದಿತರನ್ನು ದಾವಣಗೆರೆ, ಹಾವೇರಿ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಸೇರಿದವರಾದ ಅನಿಲಕುಮಾರ್ ಜಿ.ಆರ್ (30), ಭೀರಪ್ಪ (42), ಬೀರೇಶ್ (26), ಶಂಕರಗೌಡ ಪಾಟೀಲ್ (48), ನಾಗರಾಜ (44), ಪ್ರದೀಪ (48), ಪ್ರಶಾಂತ (35), ಜಬಿವುಲ್ಲಾ (38), ರೇವಣಸಿದ್ದಯ್ಯ (45), ಈಶಪ್ಪ (40), ಪ್ರಕಾಶ (44), ಮಲ್ಲಿಕಾರ್ಜುನ (40), ಬಸವರಾಜ ಜಿ.ಆರ್ (41), ಚಮನಸಾಬ್ (39), ಬಸವರಾಜ (35), ಈರಣ್ಣ (38), ಸಂತೋಷ (31), ವೀರಬಸಪ್ಪ (45), ಮತ್ತು ಚೇತನ ಎನ್ (36) ಎಂದು ಗುರುತಿಸಲಾಗಿದೆ.

ಈ ಕುರಿತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ

ಕಾರ್ಯಾಚರಣೆಯನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್. ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ. ಕೃಷ್ಣಮೂರ್ತಿ ಕೆ.ಎಸ್.ಪಿ.ಎಸ್, ಜಗದೀಶ ಎಂ. ಕೆ.ಎಸ್.ಪಿ.ಎಸ್ ಅವರ ಮಾರ್ಗದರ್ಶನದಲ್ಲಿ, ಶಿರಸಿ ಉಪವಿಭಾಗದ ಡಿ.ವೈ.ಎಸ್.ಪಿ ಗೀತಾ ಪಾಟೀಲ್ ಅವರ ನೇತೃತ್ವದಲ್ಲಿ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಪಿ.ಎಸ್.ಐ ಅಶೋಕ ಆರ್ ರಾಠೋಡ ಮತ್ತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂಧಿಗಳಾದ ಎ.ಎಸ್.ಐ ಪ್ರದೀಪ ರೇವಣಕರ, ಸಂತೋಷ ಕಮಟಗೇರಿ, ರಾಘವೇಂದ್ರ ಜಿ, ಗಣಪತಿ ಪಟಗಾರ, ಷಣ್ಮುಖ ಮಿರಾಶಿ, ರವಿ ಉಕ್ಕಡಗಾತ್ರಿ. ಭರತಕುಮಾರ, ಮಾರುತಿ ಗೌಡ ಹಾಗೂ ಮುಂಡಗೋಡ ಪೊಲೀಸ್ ಠಾಣೆಯ ಕೋಟ್ರೇಶ ನಾಗರವಳ್ಳಿ. ಅಣ್ಣಪ್ಪ ಬುಡಗೇರಿ ಹಾಗೂ ಚಾಲಕರಾದ ಕೃಷ್ಣ ರೇವಣಕರ, ಮೌಲಾಲಿ ಮರಗಡಿ ಇವರುಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂಧಿಯವರಿಗೆ ಪೊಲೀಸ್ ಅಧೀಕ್ಷಕರಾದ ದೀಪನ್, ಎಂ.ಎನ್. ಐ.ಪಿ.ಎಸ್ ರವರು ಪ್ರಶಂಸೆ ವ್ಯಕ್ತ ಪಡಿಸಿ ಬಹುಮಾನ ಘೋಷಿಸಿರುತ್ತಾರೆ.

Ramesh Babu

Journalist

Recent Posts

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

2 hours ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

12 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

23 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

24 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

1 day ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

1 day ago