2018ರಿಂದ 2023ರ ವರೆಗೆ ಏರ್ ಟೆಲ್ ಸಿಮ್ ಡಿಸ್ಟ್ರಿಬ್ಯುಟರ್ ಆಗಿದ್ದ ಈತ, ನಂತರ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್ ಆಗಿದ್ದಾನೆ.
ವಂಚನೆ ಬೆಳಕಿಗೆ ಬಂದಿದ್ದು ಹೇಗೆ?
ಇತ್ತೀಚಿಗೆ ಕೇರಳದ ವ್ಯಕ್ತಿಯೊಬ್ಬರು ಆನ್ ಲೈನ್ ವಂಚಕರಿಂದ ಬರೋಬರಿ 1 ಕೋಟಿಗಿಂತಲೂ ಹೆಚ್ಚಿನ ಹಣವನ್ನು ಕಳೆದುಕೊಂಡಿದ್ದರು. ಪ್ರಕರಣ ದಾಖಲಾಗಿ ತನಿಖೆ ಕೈಗೊಂಡಾಗ ಮಡಿಕೇರಿಯ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್ ಅಬ್ದುಲ್ ರೋಷನ್ ಅಲ್ಲಿನ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈತನಿಂದ ಸಾವಿರಾರು ಸಂಖ್ಯೆಯ ಸಿಮ್ ಗಳು ಸೇರಿದಂತೆ 150 ಚೈನಾ ಮೇಡ್ ಮೊಬೈಲ್ ಮತ್ತು ಆರು ಬಯೋಮೆಟ್ರಿಕ್ ಸ್ಕ್ಯಾನರ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈತ ಆನ್ ಲೈನ್ ದಗಾಕೋರರಿಗೆ ಗ್ರಾಹಕರ ಬದಲಿ ಸಿಮ್ ಗಳನ್ನು ಸರಬರಾಜು ಮಾಡುತ್ತಾ ಕೈತುಂಬಾ ದುಡ್ಡು ಎಣಿಸುತ್ತಿದ್ದ. ಇದೀಗ ತಗಲಾಕಿಕೊಂಡು ಕಂಬಿ ಎಣಿಸುತ್ತಿದ್ದಾನೆ.
ಈ ದಂಧೆಯ ಮೂಲಕ ಲಕ್ಷ ಲಕ್ಷ ಹಣ ಸಂಪಾದಿಸುತ್ತಿದ್ದ ಅಬ್ದುಲ್ ರೋಷನ್ ವಿರುದ್ಧ ಈಗಾಗಲೇ ಮಡಿಕೇರಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ.
ನಕಲಿ ಸಿಮ್ ಜಾಲವನ್ನು ಭೇದಿಸಿರುವ ಕೇರಳ ಪೊಲೀಸ್ ಅಧಿಕಾರಿಗಳು, ಇದೀಗ ಮಡಿಕೇರಿಯ ಆರೋಪಿಯನ್ನು ಬಂಧಿಸಿ ಮತ್ತಷ್ಟು ಮಾಹಿತಿಯನ್ನು ಕಲೆ ಹಾಕಿದ್ದಾರೆ. ಈತನಿಗೆ ಸಹಕಾರ ನೀಡಿದ ಇತರರ ಬಗ್ಗೆ ಕೂಡ ಮಾಹಿತಿ ಪಡೆದುಕೊಳ್ಳುತ್ತಿದ್ದು, ಹಲವರು ಬಂಧನ ಆಗುವ ಸಾಧ್ಯತೆ ಇದೆ. ಕೇರಳ ರಾಜ್ಯದಲ್ಲಿ ಇದೊಂದು ದೊಡ್ಡ ಅಕ್ರಮ ದಂದೆಯ ಪ್ರಕರಣವಾಗಿದ್ದು, ಕೇರಳ ಪೊಲೀಸರು ತೀವ್ರ ಸ್ವರೂಪದ ವಿಚಾರಣೆಯನ್ನು ಕೈಗೊಂಡಿದ್ದಾರೆ.
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…