Categories: ಕೊಡಗು

ಬೃಹತ್ ನಕಲಿ ಸಿಮ್ ಜಾಲದ ದಂಧೆ ಬೆಳಕಿಗೆ: ಆನ್ ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸರಬರಾಜು: ಪೊಲೀಸರ ಬಲೆಗೆ ಬಿದ್ದ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ ಸಿಮ್ ಗಳನ್ನು ಸರಬರಾಜು ಮಾಡುತ್ತಿದ್ದ ಮಡಿಕೇರಿಯ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್ ಓರ್ವನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ರೋಷನ್ ಬಂಧಿತ ಆರೋಪಿಯಾಗಿದ್ದಾನೆ.

2018ರಿಂದ 2023ರ ವರೆಗೆ ಏರ್ ಟೆಲ್ ಸಿಮ್ ಡಿಸ್ಟ್ರಿಬ್ಯುಟರ್ ಆಗಿದ್ದ ಈತ, ನಂತರ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್ ಆಗಿದ್ದಾನೆ.

ವಂಚನೆ ಬೆಳಕಿಗೆ ಬಂದಿದ್ದು ಹೇಗೆ?

ಇತ್ತೀಚಿಗೆ ಕೇರಳದ ವ್ಯಕ್ತಿಯೊಬ್ಬರು ಆನ್ ಲೈನ್ ವಂಚಕರಿಂದ ಬರೋಬರಿ 1 ಕೋಟಿಗಿಂತಲೂ ಹೆಚ್ಚಿನ ಹಣವನ್ನು ಕಳೆದುಕೊಂಡಿದ್ದರು. ಪ್ರಕರಣ ದಾಖಲಾಗಿ ತನಿಖೆ ಕೈಗೊಂಡಾಗ ಮಡಿಕೇರಿಯ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್ ಅಬ್ದುಲ್ ರೋಷನ್ ಅಲ್ಲಿನ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈತನಿಂದ ಸಾವಿರಾರು ಸಂಖ್ಯೆಯ ಸಿಮ್ ಗಳು ಸೇರಿದಂತೆ 150 ಚೈನಾ ಮೇಡ್ ಮೊಬೈಲ್ ಮತ್ತು ಆರು ಬಯೋಮೆಟ್ರಿಕ್ ಸ್ಕ್ಯಾನರ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈತ ಆನ್ ಲೈನ್ ದಗಾಕೋರರಿಗೆ ಗ್ರಾಹಕರ ಬದಲಿ ಸಿಮ್ ಗಳನ್ನು ಸರಬರಾಜು ಮಾಡುತ್ತಾ ಕೈತುಂಬಾ ದುಡ್ಡು ಎಣಿಸುತ್ತಿದ್ದ. ಇದೀಗ ತಗಲಾಕಿಕೊಂಡು ಕಂಬಿ ಎಣಿಸುತ್ತಿದ್ದಾನೆ.

ಈ ದಂಧೆಯ ಮೂಲಕ ಲಕ್ಷ ಲಕ್ಷ ಹಣ ಸಂಪಾದಿಸುತ್ತಿದ್ದ ಅಬ್ದುಲ್ ರೋಷನ್ ವಿರುದ್ಧ ಈಗಾಗಲೇ ಮಡಿಕೇರಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ.

ನಕಲಿ ಸಿಮ್ ಜಾಲವನ್ನು ಭೇದಿಸಿರುವ ಕೇರಳ ಪೊಲೀಸ್ ಅಧಿಕಾರಿಗಳು, ಇದೀಗ ಮಡಿಕೇರಿಯ ಆರೋಪಿಯನ್ನು ಬಂಧಿಸಿ ಮತ್ತಷ್ಟು ಮಾಹಿತಿಯನ್ನು ಕಲೆ ಹಾಕಿದ್ದಾರೆ. ಈತನಿಗೆ ಸಹಕಾರ ನೀಡಿದ ಇತರರ ಬಗ್ಗೆ ಕೂಡ ಮಾಹಿತಿ ಪಡೆದುಕೊಳ್ಳುತ್ತಿದ್ದು, ಹಲವರು ಬಂಧನ ಆಗುವ ಸಾಧ್ಯತೆ ಇದೆ. ಕೇರಳ ರಾಜ್ಯದಲ್ಲಿ ಇದೊಂದು ದೊಡ್ಡ ಅಕ್ರಮ ದಂದೆಯ ಪ್ರಕರಣವಾಗಿದ್ದು, ಕೇರಳ ಪೊಲೀಸರು ತೀವ್ರ ಸ್ವರೂಪದ ವಿಚಾರಣೆಯನ್ನು ಕೈಗೊಂಡಿದ್ದಾರೆ.

Ramesh Babu

Journalist

Recent Posts

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

7 hours ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

10 hours ago

Instant Play Casino

Instant play casinos allow you to play casino games online without installing any software. These…

1 day ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

1 day ago

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

1 day ago

Facharbeit Schreiben_ Ein Leitfaden für Schüler und Studenten(2)

Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…

1 day ago