2018ರಿಂದ 2023ರ ವರೆಗೆ ಏರ್ ಟೆಲ್ ಸಿಮ್ ಡಿಸ್ಟ್ರಿಬ್ಯುಟರ್ ಆಗಿದ್ದ ಈತ, ನಂತರ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್ ಆಗಿದ್ದಾನೆ.
ವಂಚನೆ ಬೆಳಕಿಗೆ ಬಂದಿದ್ದು ಹೇಗೆ?
ಇತ್ತೀಚಿಗೆ ಕೇರಳದ ವ್ಯಕ್ತಿಯೊಬ್ಬರು ಆನ್ ಲೈನ್ ವಂಚಕರಿಂದ ಬರೋಬರಿ 1 ಕೋಟಿಗಿಂತಲೂ ಹೆಚ್ಚಿನ ಹಣವನ್ನು ಕಳೆದುಕೊಂಡಿದ್ದರು. ಪ್ರಕರಣ ದಾಖಲಾಗಿ ತನಿಖೆ ಕೈಗೊಂಡಾಗ ಮಡಿಕೇರಿಯ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್ ಅಬ್ದುಲ್ ರೋಷನ್ ಅಲ್ಲಿನ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈತನಿಂದ ಸಾವಿರಾರು ಸಂಖ್ಯೆಯ ಸಿಮ್ ಗಳು ಸೇರಿದಂತೆ 150 ಚೈನಾ ಮೇಡ್ ಮೊಬೈಲ್ ಮತ್ತು ಆರು ಬಯೋಮೆಟ್ರಿಕ್ ಸ್ಕ್ಯಾನರ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈತ ಆನ್ ಲೈನ್ ದಗಾಕೋರರಿಗೆ ಗ್ರಾಹಕರ ಬದಲಿ ಸಿಮ್ ಗಳನ್ನು ಸರಬರಾಜು ಮಾಡುತ್ತಾ ಕೈತುಂಬಾ ದುಡ್ಡು ಎಣಿಸುತ್ತಿದ್ದ. ಇದೀಗ ತಗಲಾಕಿಕೊಂಡು ಕಂಬಿ ಎಣಿಸುತ್ತಿದ್ದಾನೆ.
ಈ ದಂಧೆಯ ಮೂಲಕ ಲಕ್ಷ ಲಕ್ಷ ಹಣ ಸಂಪಾದಿಸುತ್ತಿದ್ದ ಅಬ್ದುಲ್ ರೋಷನ್ ವಿರುದ್ಧ ಈಗಾಗಲೇ ಮಡಿಕೇರಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ.
ನಕಲಿ ಸಿಮ್ ಜಾಲವನ್ನು ಭೇದಿಸಿರುವ ಕೇರಳ ಪೊಲೀಸ್ ಅಧಿಕಾರಿಗಳು, ಇದೀಗ ಮಡಿಕೇರಿಯ ಆರೋಪಿಯನ್ನು ಬಂಧಿಸಿ ಮತ್ತಷ್ಟು ಮಾಹಿತಿಯನ್ನು ಕಲೆ ಹಾಕಿದ್ದಾರೆ. ಈತನಿಗೆ ಸಹಕಾರ ನೀಡಿದ ಇತರರ ಬಗ್ಗೆ ಕೂಡ ಮಾಹಿತಿ ಪಡೆದುಕೊಳ್ಳುತ್ತಿದ್ದು, ಹಲವರು ಬಂಧನ ಆಗುವ ಸಾಧ್ಯತೆ ಇದೆ. ಕೇರಳ ರಾಜ್ಯದಲ್ಲಿ ಇದೊಂದು ದೊಡ್ಡ ಅಕ್ರಮ ದಂದೆಯ ಪ್ರಕರಣವಾಗಿದ್ದು, ಕೇರಳ ಪೊಲೀಸರು ತೀವ್ರ ಸ್ವರೂಪದ ವಿಚಾರಣೆಯನ್ನು ಕೈಗೊಂಡಿದ್ದಾರೆ.
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…
ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…