2018ರಿಂದ 2023ರ ವರೆಗೆ ಏರ್ ಟೆಲ್ ಸಿಮ್ ಡಿಸ್ಟ್ರಿಬ್ಯುಟರ್ ಆಗಿದ್ದ ಈತ, ನಂತರ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್ ಆಗಿದ್ದಾನೆ.
ವಂಚನೆ ಬೆಳಕಿಗೆ ಬಂದಿದ್ದು ಹೇಗೆ?
ಇತ್ತೀಚಿಗೆ ಕೇರಳದ ವ್ಯಕ್ತಿಯೊಬ್ಬರು ಆನ್ ಲೈನ್ ವಂಚಕರಿಂದ ಬರೋಬರಿ 1 ಕೋಟಿಗಿಂತಲೂ ಹೆಚ್ಚಿನ ಹಣವನ್ನು ಕಳೆದುಕೊಂಡಿದ್ದರು. ಪ್ರಕರಣ ದಾಖಲಾಗಿ ತನಿಖೆ ಕೈಗೊಂಡಾಗ ಮಡಿಕೇರಿಯ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್ ಅಬ್ದುಲ್ ರೋಷನ್ ಅಲ್ಲಿನ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈತನಿಂದ ಸಾವಿರಾರು ಸಂಖ್ಯೆಯ ಸಿಮ್ ಗಳು ಸೇರಿದಂತೆ 150 ಚೈನಾ ಮೇಡ್ ಮೊಬೈಲ್ ಮತ್ತು ಆರು ಬಯೋಮೆಟ್ರಿಕ್ ಸ್ಕ್ಯಾನರ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈತ ಆನ್ ಲೈನ್ ದಗಾಕೋರರಿಗೆ ಗ್ರಾಹಕರ ಬದಲಿ ಸಿಮ್ ಗಳನ್ನು ಸರಬರಾಜು ಮಾಡುತ್ತಾ ಕೈತುಂಬಾ ದುಡ್ಡು ಎಣಿಸುತ್ತಿದ್ದ. ಇದೀಗ ತಗಲಾಕಿಕೊಂಡು ಕಂಬಿ ಎಣಿಸುತ್ತಿದ್ದಾನೆ.
ಈ ದಂಧೆಯ ಮೂಲಕ ಲಕ್ಷ ಲಕ್ಷ ಹಣ ಸಂಪಾದಿಸುತ್ತಿದ್ದ ಅಬ್ದುಲ್ ರೋಷನ್ ವಿರುದ್ಧ ಈಗಾಗಲೇ ಮಡಿಕೇರಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ.
ನಕಲಿ ಸಿಮ್ ಜಾಲವನ್ನು ಭೇದಿಸಿರುವ ಕೇರಳ ಪೊಲೀಸ್ ಅಧಿಕಾರಿಗಳು, ಇದೀಗ ಮಡಿಕೇರಿಯ ಆರೋಪಿಯನ್ನು ಬಂಧಿಸಿ ಮತ್ತಷ್ಟು ಮಾಹಿತಿಯನ್ನು ಕಲೆ ಹಾಕಿದ್ದಾರೆ. ಈತನಿಗೆ ಸಹಕಾರ ನೀಡಿದ ಇತರರ ಬಗ್ಗೆ ಕೂಡ ಮಾಹಿತಿ ಪಡೆದುಕೊಳ್ಳುತ್ತಿದ್ದು, ಹಲವರು ಬಂಧನ ಆಗುವ ಸಾಧ್ಯತೆ ಇದೆ. ಕೇರಳ ರಾಜ್ಯದಲ್ಲಿ ಇದೊಂದು ದೊಡ್ಡ ಅಕ್ರಮ ದಂದೆಯ ಪ್ರಕರಣವಾಗಿದ್ದು, ಕೇರಳ ಪೊಲೀಸರು ತೀವ್ರ ಸ್ವರೂಪದ ವಿಚಾರಣೆಯನ್ನು ಕೈಗೊಂಡಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…
ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…