2018ರಿಂದ 2023ರ ವರೆಗೆ ಏರ್ ಟೆಲ್ ಸಿಮ್ ಡಿಸ್ಟ್ರಿಬ್ಯುಟರ್ ಆಗಿದ್ದ ಈತ, ನಂತರ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್ ಆಗಿದ್ದಾನೆ.
ವಂಚನೆ ಬೆಳಕಿಗೆ ಬಂದಿದ್ದು ಹೇಗೆ?
ಇತ್ತೀಚಿಗೆ ಕೇರಳದ ವ್ಯಕ್ತಿಯೊಬ್ಬರು ಆನ್ ಲೈನ್ ವಂಚಕರಿಂದ ಬರೋಬರಿ 1 ಕೋಟಿಗಿಂತಲೂ ಹೆಚ್ಚಿನ ಹಣವನ್ನು ಕಳೆದುಕೊಂಡಿದ್ದರು. ಪ್ರಕರಣ ದಾಖಲಾಗಿ ತನಿಖೆ ಕೈಗೊಂಡಾಗ ಮಡಿಕೇರಿಯ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್ ಅಬ್ದುಲ್ ರೋಷನ್ ಅಲ್ಲಿನ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈತನಿಂದ ಸಾವಿರಾರು ಸಂಖ್ಯೆಯ ಸಿಮ್ ಗಳು ಸೇರಿದಂತೆ 150 ಚೈನಾ ಮೇಡ್ ಮೊಬೈಲ್ ಮತ್ತು ಆರು ಬಯೋಮೆಟ್ರಿಕ್ ಸ್ಕ್ಯಾನರ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈತ ಆನ್ ಲೈನ್ ದಗಾಕೋರರಿಗೆ ಗ್ರಾಹಕರ ಬದಲಿ ಸಿಮ್ ಗಳನ್ನು ಸರಬರಾಜು ಮಾಡುತ್ತಾ ಕೈತುಂಬಾ ದುಡ್ಡು ಎಣಿಸುತ್ತಿದ್ದ. ಇದೀಗ ತಗಲಾಕಿಕೊಂಡು ಕಂಬಿ ಎಣಿಸುತ್ತಿದ್ದಾನೆ.
ಈ ದಂಧೆಯ ಮೂಲಕ ಲಕ್ಷ ಲಕ್ಷ ಹಣ ಸಂಪಾದಿಸುತ್ತಿದ್ದ ಅಬ್ದುಲ್ ರೋಷನ್ ವಿರುದ್ಧ ಈಗಾಗಲೇ ಮಡಿಕೇರಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ.
ನಕಲಿ ಸಿಮ್ ಜಾಲವನ್ನು ಭೇದಿಸಿರುವ ಕೇರಳ ಪೊಲೀಸ್ ಅಧಿಕಾರಿಗಳು, ಇದೀಗ ಮಡಿಕೇರಿಯ ಆರೋಪಿಯನ್ನು ಬಂಧಿಸಿ ಮತ್ತಷ್ಟು ಮಾಹಿತಿಯನ್ನು ಕಲೆ ಹಾಕಿದ್ದಾರೆ. ಈತನಿಗೆ ಸಹಕಾರ ನೀಡಿದ ಇತರರ ಬಗ್ಗೆ ಕೂಡ ಮಾಹಿತಿ ಪಡೆದುಕೊಳ್ಳುತ್ತಿದ್ದು, ಹಲವರು ಬಂಧನ ಆಗುವ ಸಾಧ್ಯತೆ ಇದೆ. ಕೇರಳ ರಾಜ್ಯದಲ್ಲಿ ಇದೊಂದು ದೊಡ್ಡ ಅಕ್ರಮ ದಂದೆಯ ಪ್ರಕರಣವಾಗಿದ್ದು, ಕೇರಳ ಪೊಲೀಸರು ತೀವ್ರ ಸ್ವರೂಪದ ವಿಚಾರಣೆಯನ್ನು ಕೈಗೊಂಡಿದ್ದಾರೆ.
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…