Categories: ಕೊಡಗು

ಬೃಹತ್ ನಕಲಿ ಸಿಮ್ ಜಾಲದ ದಂಧೆ ಬೆಳಕಿಗೆ: ಆನ್ ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸರಬರಾಜು: ಪೊಲೀಸರ ಬಲೆಗೆ ಬಿದ್ದ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ ಸಿಮ್ ಗಳನ್ನು ಸರಬರಾಜು ಮಾಡುತ್ತಿದ್ದ ಮಡಿಕೇರಿಯ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್ ಓರ್ವನನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್ ರೋಷನ್ ಬಂಧಿತ ಆರೋಪಿಯಾಗಿದ್ದಾನೆ.

2018ರಿಂದ 2023ರ ವರೆಗೆ ಏರ್ ಟೆಲ್ ಸಿಮ್ ಡಿಸ್ಟ್ರಿಬ್ಯುಟರ್ ಆಗಿದ್ದ ಈತ, ನಂತರ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್ ಆಗಿದ್ದಾನೆ.

ವಂಚನೆ ಬೆಳಕಿಗೆ ಬಂದಿದ್ದು ಹೇಗೆ?

ಇತ್ತೀಚಿಗೆ ಕೇರಳದ ವ್ಯಕ್ತಿಯೊಬ್ಬರು ಆನ್ ಲೈನ್ ವಂಚಕರಿಂದ ಬರೋಬರಿ 1 ಕೋಟಿಗಿಂತಲೂ ಹೆಚ್ಚಿನ ಹಣವನ್ನು ಕಳೆದುಕೊಂಡಿದ್ದರು. ಪ್ರಕರಣ ದಾಖಲಾಗಿ ತನಿಖೆ ಕೈಗೊಂಡಾಗ ಮಡಿಕೇರಿಯ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್ ಅಬ್ದುಲ್ ರೋಷನ್ ಅಲ್ಲಿನ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈತನಿಂದ ಸಾವಿರಾರು ಸಂಖ್ಯೆಯ ಸಿಮ್ ಗಳು ಸೇರಿದಂತೆ 150 ಚೈನಾ ಮೇಡ್ ಮೊಬೈಲ್ ಮತ್ತು ಆರು ಬಯೋಮೆಟ್ರಿಕ್ ಸ್ಕ್ಯಾನರ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈತ ಆನ್ ಲೈನ್ ದಗಾಕೋರರಿಗೆ ಗ್ರಾಹಕರ ಬದಲಿ ಸಿಮ್ ಗಳನ್ನು ಸರಬರಾಜು ಮಾಡುತ್ತಾ ಕೈತುಂಬಾ ದುಡ್ಡು ಎಣಿಸುತ್ತಿದ್ದ. ಇದೀಗ ತಗಲಾಕಿಕೊಂಡು ಕಂಬಿ ಎಣಿಸುತ್ತಿದ್ದಾನೆ.

ಈ ದಂಧೆಯ ಮೂಲಕ ಲಕ್ಷ ಲಕ್ಷ ಹಣ ಸಂಪಾದಿಸುತ್ತಿದ್ದ ಅಬ್ದುಲ್ ರೋಷನ್ ವಿರುದ್ಧ ಈಗಾಗಲೇ ಮಡಿಕೇರಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ.

ನಕಲಿ ಸಿಮ್ ಜಾಲವನ್ನು ಭೇದಿಸಿರುವ ಕೇರಳ ಪೊಲೀಸ್ ಅಧಿಕಾರಿಗಳು, ಇದೀಗ ಮಡಿಕೇರಿಯ ಆರೋಪಿಯನ್ನು ಬಂಧಿಸಿ ಮತ್ತಷ್ಟು ಮಾಹಿತಿಯನ್ನು ಕಲೆ ಹಾಕಿದ್ದಾರೆ. ಈತನಿಗೆ ಸಹಕಾರ ನೀಡಿದ ಇತರರ ಬಗ್ಗೆ ಕೂಡ ಮಾಹಿತಿ ಪಡೆದುಕೊಳ್ಳುತ್ತಿದ್ದು, ಹಲವರು ಬಂಧನ ಆಗುವ ಸಾಧ್ಯತೆ ಇದೆ. ಕೇರಳ ರಾಜ್ಯದಲ್ಲಿ ಇದೊಂದು ದೊಡ್ಡ ಅಕ್ರಮ ದಂದೆಯ ಪ್ರಕರಣವಾಗಿದ್ದು, ಕೇರಳ ಪೊಲೀಸರು ತೀವ್ರ ಸ್ವರೂಪದ ವಿಚಾರಣೆಯನ್ನು ಕೈಗೊಂಡಿದ್ದಾರೆ.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

14 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

18 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

19 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

1 day ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

2 days ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 days ago