2018ರಿಂದ 2023ರ ವರೆಗೆ ಏರ್ ಟೆಲ್ ಸಿಮ್ ಡಿಸ್ಟ್ರಿಬ್ಯುಟರ್ ಆಗಿದ್ದ ಈತ, ನಂತರ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್ ಆಗಿದ್ದಾನೆ.
ವಂಚನೆ ಬೆಳಕಿಗೆ ಬಂದಿದ್ದು ಹೇಗೆ?
ಇತ್ತೀಚಿಗೆ ಕೇರಳದ ವ್ಯಕ್ತಿಯೊಬ್ಬರು ಆನ್ ಲೈನ್ ವಂಚಕರಿಂದ ಬರೋಬರಿ 1 ಕೋಟಿಗಿಂತಲೂ ಹೆಚ್ಚಿನ ಹಣವನ್ನು ಕಳೆದುಕೊಂಡಿದ್ದರು. ಪ್ರಕರಣ ದಾಖಲಾಗಿ ತನಿಖೆ ಕೈಗೊಂಡಾಗ ಮಡಿಕೇರಿಯ ಜಿಯೋ ಸಿಮ್ ಡಿಸ್ಟ್ರಿಬ್ಯೂಟರ್ ಅಬ್ದುಲ್ ರೋಷನ್ ಅಲ್ಲಿನ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈತನಿಂದ ಸಾವಿರಾರು ಸಂಖ್ಯೆಯ ಸಿಮ್ ಗಳು ಸೇರಿದಂತೆ 150 ಚೈನಾ ಮೇಡ್ ಮೊಬೈಲ್ ಮತ್ತು ಆರು ಬಯೋಮೆಟ್ರಿಕ್ ಸ್ಕ್ಯಾನರ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈತ ಆನ್ ಲೈನ್ ದಗಾಕೋರರಿಗೆ ಗ್ರಾಹಕರ ಬದಲಿ ಸಿಮ್ ಗಳನ್ನು ಸರಬರಾಜು ಮಾಡುತ್ತಾ ಕೈತುಂಬಾ ದುಡ್ಡು ಎಣಿಸುತ್ತಿದ್ದ. ಇದೀಗ ತಗಲಾಕಿಕೊಂಡು ಕಂಬಿ ಎಣಿಸುತ್ತಿದ್ದಾನೆ.
ಈ ದಂಧೆಯ ಮೂಲಕ ಲಕ್ಷ ಲಕ್ಷ ಹಣ ಸಂಪಾದಿಸುತ್ತಿದ್ದ ಅಬ್ದುಲ್ ರೋಷನ್ ವಿರುದ್ಧ ಈಗಾಗಲೇ ಮಡಿಕೇರಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ.
ನಕಲಿ ಸಿಮ್ ಜಾಲವನ್ನು ಭೇದಿಸಿರುವ ಕೇರಳ ಪೊಲೀಸ್ ಅಧಿಕಾರಿಗಳು, ಇದೀಗ ಮಡಿಕೇರಿಯ ಆರೋಪಿಯನ್ನು ಬಂಧಿಸಿ ಮತ್ತಷ್ಟು ಮಾಹಿತಿಯನ್ನು ಕಲೆ ಹಾಕಿದ್ದಾರೆ. ಈತನಿಗೆ ಸಹಕಾರ ನೀಡಿದ ಇತರರ ಬಗ್ಗೆ ಕೂಡ ಮಾಹಿತಿ ಪಡೆದುಕೊಳ್ಳುತ್ತಿದ್ದು, ಹಲವರು ಬಂಧನ ಆಗುವ ಸಾಧ್ಯತೆ ಇದೆ. ಕೇರಳ ರಾಜ್ಯದಲ್ಲಿ ಇದೊಂದು ದೊಡ್ಡ ಅಕ್ರಮ ದಂದೆಯ ಪ್ರಕರಣವಾಗಿದ್ದು, ಕೇರಳ ಪೊಲೀಸರು ತೀವ್ರ ಸ್ವರೂಪದ ವಿಚಾರಣೆಯನ್ನು ಕೈಗೊಂಡಿದ್ದಾರೆ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…