ಬೃಹತ್ ಸಸಿ ನೆಡುವ ಕಾರ್ಯಕ್ರಮ ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್

ರಾಜ್ಯಾದ್ಯಂತ ಜುಲೈ 01 ರಿಂದ ಜುಲೈ 07 ರವರೆಗೆ ಒಂದು ಕೋಟಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಬೃಹತ್ ಸಸಿ ನೆಡುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿ ಯಶಸ್ವಿಗೊಳಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2023-24 ನೇ ಸಾಲಿನ ಮಳೆಗಾಲದಲ್ಲಿ ಕರ್ನಾಟಕ ರಾಜ್ಯದಲ್ಲಿ ಬೃಹತ್ ಸಸಿ ನೆಡುವ ಕಾರ್ಯಕ್ರಮದ ಅನುಷ್ಠಾನಗೊಳಿಸುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಳೆಗಾಲದಲ್ಲಿ ಒಂದು ಕೋಟಿ ಸಸಿ ನೆಡುವ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಸರ್ಕಾರವು ಜುಲೈ 1ರಿಂದ 7ರವರೆಗೆ ಹಮ್ಮಿಕೊಂಡಿದೆ. ಜಿಲ್ಲೆಯಲ್ಲಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತರಬೇಕು. ಈ ಹಿನ್ನೆಲೆಯಲ್ಲಿ ಎಲ್ಲಾ ಅಧಿಕಾರಿಗಳು ಅರಣ್ಯ ಇಲಾಖೆಯೊಂದಿಗೆ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು ಎಂದರು.

ಜಿಲ್ಲೆಯಾದ್ಯಂತ ಇರುವ ಸರ್ಕಾರಿ ಶಾಲಾ-ಕಾಲೇಜು, ಖಾಸಗಿ ಶಾಲಾ-ಕಾಲೇಜು, ಆರೋಗ್ಯ ಕೇಂದ್ರಗಳು, ಪಶು ಆಸ್ಪತ್ರೆ, ಗೋಶಾಲೆಗಳು, ವಸತಿ ಶಾಲೆಗಳು, ಕೈಗಾರಿಕಾ ಪ್ರದೇಶಗಳು, ರೈತರ ಜಮೀನುಗಳು, ಸರ್ಕಾರಿ ಜಮೀನುಗಳಲ್ಲಿ (ಖರಾಬಿ) ಸಸಿ ನೆಡಲು ಇರುವಂತಹ ಜಾಗಗಳನ್ನು ಗುರ್ತಿಸಿ ಸಂಬಂಧಪಟ್ಟ ಇಲಾಖೆಗಳು, ಅರಣ್ಯ ಇಲಾಖೆಗೆ ವರದಿ ನೀಡಿ ಎಂದು ಹೇಳಿದರಲ್ಲದೇ ಲಭ್ಯವಿರುವ ಸಸಿಗಳ ವಿವರ, ತಯಾರಿ ಸೇರಿದಂತೆ ಕಾರ್ಯಕ್ರಮದ ಅನುಷ್ಠಾನಕ್ಕಾಗಿ ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಶೋಕ್.ಆರ್.ಭಟ್, ಪ್ರಾದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್‌ಕುಮಾರ್ ಸುಭಾಷ್ ರಾವ್ ಪಾಟೀಲ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

6 hours ago

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

14 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

15 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

2 days ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

2 days ago