ಬೆಂಕಿ ಅವಘಡದಿಂದ ಮನೆ ಬೆಂಕಿಗಾಹುತಿ;2ನೇ ಹಂತ 1ನೇ ವಾರ್ಡ್ ರಾಜೀವ್ ಗಾಂಧಿ ಬಡಾವಣೆಯಲ್ಲಿ ಘಟನೆ; ಸಾರಥಿ ಸತ್ಯ ಪ್ರಕಾಶ್ ರಿಂದ ಆರ್ಥಿಕ‌ ನೆರವು

ಮನೆಯ ಯಜಮಾನ ಗಾರೆ ಕೆಲಸ ಮಾಡುವ ಕೂಲಿ ಕಾರ್ಮಿಕ, ಬರುವ ದಿನಗೂಲಿಯಲ್ಲಿ ನೆಮ್ಮದಿಯ ಜೀವನ ಕಟ್ಟಿಕೊಂಡಿದ್ದರು, ಕಷ್ಟದ ದುಡಿಮೆಯಲ್ಲಿ ಇಬ್ಬರು ಮಕ್ಕಳ ವಿದ್ಯಾಭ್ಯಾಸ ಮಾಡಿಸುತ್ತಾ ಭವಿಷ್ಯದ ಕನಸು ಕಂಡಿದ್ದರು, ರಾತ್ರಿ ನಡೆದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಇಡೀ ಮನೆ ಹೊತ್ತಿ ಉರಿದಿದೆ, ಅಡುಗೆ ಮಾಡಲು ಸಂಗ್ರಹಿಸಿದ ರೇಷನ್, ಧರಿಸಲು ಇಟ್ಟಿದ ಬಟ್ಟೆಗಳ ಜೊತೆ ದಾಖಲೆ ಪತ್ರಗಳು ಸುಟ್ಟು ಭಸ್ಮವಾಗಿದೆ, ಇಡೀ ಕುಟುಂಬ ಊಟಕ್ಕೂ ಹಣವಿಲ್ಲದೆ ಅಕ್ಷರಶಃ ಬೀದಿಗೆ ಬಿದ್ದಿದೆ.

ದೊಡ್ಡಬಳ್ಳಾಪುರ ನಗರದ ರಾಜೀವ್ ಗಾಂಧಿ ಬಡಾವಣೆಯ ಒಂದನೇ ಹಂತದಲ್ಲಿ ಘಟನೆ ನಡೆದಿದೆ. ವಿದ್ಯುತ್ ಅವಘಡದಲ್ಲಿ ಅಂಬಿಕಾ ಮತ್ತು ಸೋಮಶೇಖರ್ ದಂಪತಿ ವಾಸವಾಗಿದ್ದ ಮನೆ ಸಂಪೂರ್ಣವಾಗಿ ಸುಟ್ಟು ಬೂದಿಯಾಗಿದೆ, ಅದೃಷ್ಟವಶಾತ್ ಗಂಡ, ಹೆಂಡತಿ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿ ಅವಘಡದಲ್ಲಿ ಮನೆಯಲ್ಲಿದ್ದ ರೇಷನ್, ಬಟ್ಟೆಗಳು, ದಾಖಲೆಗಳಾದ ಆಧಾರ್ ಕಾರ್ಡ್, ವೋಟರ್ ಐಡಿ, ಬ್ಯಾಂಕ್ ಪಾಸ್ ಸಹ ಬೆಂಕಿಯಲ್ಲಿ ಸುಟ್ಟು ಬೂದಿಯಾಗಿದೆ.

ಮಕ್ಕಳ ಪಠ್ಯ ಪುಸ್ತಕ ಸಹ ಬೆಂಕಿಯ ಜ್ವಾಲೆಯಲ್ಲಿ ಸುಟ್ಟು ಬೂದಿಯಾಗಿದೆ, ಸದ್ಯ ಆ ಕುಟುಂಬದವರಿಗೆ ತಿನ್ನಲು ಒಂದು ಕಾಳು ಅಕ್ಕಿ ಸಹ ಇಲ್ಲದೆ ಭಿಕ್ಷೆ ಬೇಡುವ ಪರಿಸ್ಥಿತಿಯಲ್ಲಿದೆ ಎಂದು ಅಂಬಿಕಾ ತಿಳಿಸಿದ್ದಾರೆ.

ಮನೆಯಲ್ಲಿದ್ದ ಪ್ರತಿಯೊಂದು ವಸ್ತುಗಳನ್ನ ಕಳೆದುಕೊಂಡಿರುವ ಕುಟುಂಬ ಅಕ್ಷರಶಃ ಬೀದಿಗೆ ಬಂದಿದೆ, ದಾನಿಗಳ ಸಹಾಯದ ನಿರೀಕ್ಷೆಯಲ್ಲಿರುವ ಕುಟುಂಬಕ್ಕೆ ನೆರವಿನ ಅಗತ್ಯವಿದೆ.

ಸ್ಥಳಕ್ಕೆ ಬಿಜೆಪಿ ಮುಖಂಡ ಸಾರಥಿ ಸತ್ಯ ಪ್ರಕಾಶ್ ಭೇಟಿ ನೀಡಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಸಾಂತ್ವನ ಹೇಳಿ, ಆರ್ಥಿಕ ಸಹಾಯ ಮಾಡಿದರು.

ಅಂಬಿಕಾ
ಪೋನ್ ಪೇ ನಂಬರ್ – 9591585143

Leave a Reply

Your email address will not be published. Required fields are marked *