ಮನೆಯ ಯಜಮಾನ ಗಾರೆ ಕೆಲಸ ಮಾಡುವ ಕೂಲಿ ಕಾರ್ಮಿಕ, ಬರುವ ದಿನಗೂಲಿಯಲ್ಲಿ ನೆಮ್ಮದಿಯ ಜೀವನ ಕಟ್ಟಿಕೊಂಡಿದ್ದರು, ಕಷ್ಟದ ದುಡಿಮೆಯಲ್ಲಿ ಇಬ್ಬರು ಮಕ್ಕಳ ವಿದ್ಯಾಭ್ಯಾಸ ಮಾಡಿಸುತ್ತಾ ಭವಿಷ್ಯದ ಕನಸು ಕಂಡಿದ್ದರು, ರಾತ್ರಿ ನಡೆದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಇಡೀ ಮನೆ ಹೊತ್ತಿ ಉರಿದಿದೆ, ಅಡುಗೆ ಮಾಡಲು ಸಂಗ್ರಹಿಸಿದ ರೇಷನ್, ಧರಿಸಲು ಇಟ್ಟಿದ ಬಟ್ಟೆಗಳ ಜೊತೆ ದಾಖಲೆ ಪತ್ರಗಳು ಸುಟ್ಟು ಭಸ್ಮವಾಗಿದೆ, ಇಡೀ ಕುಟುಂಬ ಊಟಕ್ಕೂ ಹಣವಿಲ್ಲದೆ ಅಕ್ಷರಶಃ ಬೀದಿಗೆ ಬಿದ್ದಿದೆ.
ದೊಡ್ಡಬಳ್ಳಾಪುರ ನಗರದ ರಾಜೀವ್ ಗಾಂಧಿ ಬಡಾವಣೆಯ ಒಂದನೇ ಹಂತದಲ್ಲಿ ಘಟನೆ ನಡೆದಿದೆ. ವಿದ್ಯುತ್ ಅವಘಡದಲ್ಲಿ ಅಂಬಿಕಾ ಮತ್ತು ಸೋಮಶೇಖರ್ ದಂಪತಿ ವಾಸವಾಗಿದ್ದ ಮನೆ ಸಂಪೂರ್ಣವಾಗಿ ಸುಟ್ಟು ಬೂದಿಯಾಗಿದೆ, ಅದೃಷ್ಟವಶಾತ್ ಗಂಡ, ಹೆಂಡತಿ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿ ಅವಘಡದಲ್ಲಿ ಮನೆಯಲ್ಲಿದ್ದ ರೇಷನ್, ಬಟ್ಟೆಗಳು, ದಾಖಲೆಗಳಾದ ಆಧಾರ್ ಕಾರ್ಡ್, ವೋಟರ್ ಐಡಿ, ಬ್ಯಾಂಕ್ ಪಾಸ್ ಸಹ ಬೆಂಕಿಯಲ್ಲಿ ಸುಟ್ಟು ಬೂದಿಯಾಗಿದೆ.
ಮಕ್ಕಳ ಪಠ್ಯ ಪುಸ್ತಕ ಸಹ ಬೆಂಕಿಯ ಜ್ವಾಲೆಯಲ್ಲಿ ಸುಟ್ಟು ಬೂದಿಯಾಗಿದೆ, ಸದ್ಯ ಆ ಕುಟುಂಬದವರಿಗೆ ತಿನ್ನಲು ಒಂದು ಕಾಳು ಅಕ್ಕಿ ಸಹ ಇಲ್ಲದೆ ಭಿಕ್ಷೆ ಬೇಡುವ ಪರಿಸ್ಥಿತಿಯಲ್ಲಿದೆ ಎಂದು ಅಂಬಿಕಾ ತಿಳಿಸಿದ್ದಾರೆ.
ಮನೆಯಲ್ಲಿದ್ದ ಪ್ರತಿಯೊಂದು ವಸ್ತುಗಳನ್ನ ಕಳೆದುಕೊಂಡಿರುವ ಕುಟುಂಬ ಅಕ್ಷರಶಃ ಬೀದಿಗೆ ಬಂದಿದೆ, ದಾನಿಗಳ ಸಹಾಯದ ನಿರೀಕ್ಷೆಯಲ್ಲಿರುವ ಕುಟುಂಬಕ್ಕೆ ನೆರವಿನ ಅಗತ್ಯವಿದೆ.
ಅಂಬಿಕಾ
ಪೋನ್ ಪೇ ನಂಬರ್ – 9591585143
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…