ಮನೆಯ ಯಜಮಾನ ಗಾರೆ ಕೆಲಸ ಮಾಡುವ ಕೂಲಿ ಕಾರ್ಮಿಕ, ಬರುವ ದಿನಗೂಲಿಯಲ್ಲಿ ನೆಮ್ಮದಿಯ ಜೀವನ ಕಟ್ಟಿಕೊಂಡಿದ್ದರು, ಕಷ್ಟದ ದುಡಿಮೆಯಲ್ಲಿ ಇಬ್ಬರು ಮಕ್ಕಳ ವಿದ್ಯಾಭ್ಯಾಸ ಮಾಡಿಸುತ್ತಾ ಭವಿಷ್ಯದ ಕನಸು ಕಂಡಿದ್ದರು, ರಾತ್ರಿ ನಡೆದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಇಡೀ ಮನೆ ಹೊತ್ತಿ ಉರಿದಿದೆ, ಅಡುಗೆ ಮಾಡಲು ಸಂಗ್ರಹಿಸಿದ ರೇಷನ್, ಧರಿಸಲು ಇಟ್ಟಿದ ಬಟ್ಟೆಗಳ ಜೊತೆ ದಾಖಲೆ ಪತ್ರಗಳು ಸುಟ್ಟು ಭಸ್ಮವಾಗಿದೆ, ಇಡೀ ಕುಟುಂಬ ಊಟಕ್ಕೂ ಹಣವಿಲ್ಲದೆ ಅಕ್ಷರಶಃ ಬೀದಿಗೆ ಬಿದ್ದಿದೆ.
ದೊಡ್ಡಬಳ್ಳಾಪುರ ನಗರದ ರಾಜೀವ್ ಗಾಂಧಿ ಬಡಾವಣೆಯ ಒಂದನೇ ಹಂತದಲ್ಲಿ ಘಟನೆ ನಡೆದಿದೆ. ವಿದ್ಯುತ್ ಅವಘಡದಲ್ಲಿ ಅಂಬಿಕಾ ಮತ್ತು ಸೋಮಶೇಖರ್ ದಂಪತಿ ವಾಸವಾಗಿದ್ದ ಮನೆ ಸಂಪೂರ್ಣವಾಗಿ ಸುಟ್ಟು ಬೂದಿಯಾಗಿದೆ, ಅದೃಷ್ಟವಶಾತ್ ಗಂಡ, ಹೆಂಡತಿ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿ ಅವಘಡದಲ್ಲಿ ಮನೆಯಲ್ಲಿದ್ದ ರೇಷನ್, ಬಟ್ಟೆಗಳು, ದಾಖಲೆಗಳಾದ ಆಧಾರ್ ಕಾರ್ಡ್, ವೋಟರ್ ಐಡಿ, ಬ್ಯಾಂಕ್ ಪಾಸ್ ಸಹ ಬೆಂಕಿಯಲ್ಲಿ ಸುಟ್ಟು ಬೂದಿಯಾಗಿದೆ.
ಮಕ್ಕಳ ಪಠ್ಯ ಪುಸ್ತಕ ಸಹ ಬೆಂಕಿಯ ಜ್ವಾಲೆಯಲ್ಲಿ ಸುಟ್ಟು ಬೂದಿಯಾಗಿದೆ, ಸದ್ಯ ಆ ಕುಟುಂಬದವರಿಗೆ ತಿನ್ನಲು ಒಂದು ಕಾಳು ಅಕ್ಕಿ ಸಹ ಇಲ್ಲದೆ ಭಿಕ್ಷೆ ಬೇಡುವ ಪರಿಸ್ಥಿತಿಯಲ್ಲಿದೆ ಎಂದು ಅಂಬಿಕಾ ತಿಳಿಸಿದ್ದಾರೆ.
ಮನೆಯಲ್ಲಿದ್ದ ಪ್ರತಿಯೊಂದು ವಸ್ತುಗಳನ್ನ ಕಳೆದುಕೊಂಡಿರುವ ಕುಟುಂಬ ಅಕ್ಷರಶಃ ಬೀದಿಗೆ ಬಂದಿದೆ, ದಾನಿಗಳ ಸಹಾಯದ ನಿರೀಕ್ಷೆಯಲ್ಲಿರುವ ಕುಟುಂಬಕ್ಕೆ ನೆರವಿನ ಅಗತ್ಯವಿದೆ.
ಅಂಬಿಕಾ
ಪೋನ್ ಪೇ ನಂಬರ್ – 9591585143
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…