ಮನೆಯ ಯಜಮಾನ ಗಾರೆ ಕೆಲಸ ಮಾಡುವ ಕೂಲಿ ಕಾರ್ಮಿಕ, ಬರುವ ದಿನಗೂಲಿಯಲ್ಲಿ ನೆಮ್ಮದಿಯ ಜೀವನ ಕಟ್ಟಿಕೊಂಡಿದ್ದರು, ಕಷ್ಟದ ದುಡಿಮೆಯಲ್ಲಿ ಇಬ್ಬರು ಮಕ್ಕಳ ವಿದ್ಯಾಭ್ಯಾಸ ಮಾಡಿಸುತ್ತಾ ಭವಿಷ್ಯದ ಕನಸು ಕಂಡಿದ್ದರು, ರಾತ್ರಿ ನಡೆದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಇಡೀ ಮನೆ ಹೊತ್ತಿ ಉರಿದಿದೆ, ಅಡುಗೆ ಮಾಡಲು ಸಂಗ್ರಹಿಸಿದ ರೇಷನ್, ಧರಿಸಲು ಇಟ್ಟಿದ ಬಟ್ಟೆಗಳ ಜೊತೆ ದಾಖಲೆ ಪತ್ರಗಳು ಸುಟ್ಟು ಭಸ್ಮವಾಗಿದೆ, ಇಡೀ ಕುಟುಂಬ ಊಟಕ್ಕೂ ಹಣವಿಲ್ಲದೆ ಅಕ್ಷರಶಃ ಬೀದಿಗೆ ಬಿದ್ದಿದೆ.
ದೊಡ್ಡಬಳ್ಳಾಪುರ ನಗರದ ರಾಜೀವ್ ಗಾಂಧಿ ಬಡಾವಣೆಯ ಒಂದನೇ ಹಂತದಲ್ಲಿ ಘಟನೆ ನಡೆದಿದೆ. ವಿದ್ಯುತ್ ಅವಘಡದಲ್ಲಿ ಅಂಬಿಕಾ ಮತ್ತು ಸೋಮಶೇಖರ್ ದಂಪತಿ ವಾಸವಾಗಿದ್ದ ಮನೆ ಸಂಪೂರ್ಣವಾಗಿ ಸುಟ್ಟು ಬೂದಿಯಾಗಿದೆ, ಅದೃಷ್ಟವಶಾತ್ ಗಂಡ, ಹೆಂಡತಿ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿ ಅವಘಡದಲ್ಲಿ ಮನೆಯಲ್ಲಿದ್ದ ರೇಷನ್, ಬಟ್ಟೆಗಳು, ದಾಖಲೆಗಳಾದ ಆಧಾರ್ ಕಾರ್ಡ್, ವೋಟರ್ ಐಡಿ, ಬ್ಯಾಂಕ್ ಪಾಸ್ ಸಹ ಬೆಂಕಿಯಲ್ಲಿ ಸುಟ್ಟು ಬೂದಿಯಾಗಿದೆ.
ಮಕ್ಕಳ ಪಠ್ಯ ಪುಸ್ತಕ ಸಹ ಬೆಂಕಿಯ ಜ್ವಾಲೆಯಲ್ಲಿ ಸುಟ್ಟು ಬೂದಿಯಾಗಿದೆ, ಸದ್ಯ ಆ ಕುಟುಂಬದವರಿಗೆ ತಿನ್ನಲು ಒಂದು ಕಾಳು ಅಕ್ಕಿ ಸಹ ಇಲ್ಲದೆ ಭಿಕ್ಷೆ ಬೇಡುವ ಪರಿಸ್ಥಿತಿಯಲ್ಲಿದೆ ಎಂದು ಅಂಬಿಕಾ ತಿಳಿಸಿದ್ದಾರೆ.
ಮನೆಯಲ್ಲಿದ್ದ ಪ್ರತಿಯೊಂದು ವಸ್ತುಗಳನ್ನ ಕಳೆದುಕೊಂಡಿರುವ ಕುಟುಂಬ ಅಕ್ಷರಶಃ ಬೀದಿಗೆ ಬಂದಿದೆ, ದಾನಿಗಳ ಸಹಾಯದ ನಿರೀಕ್ಷೆಯಲ್ಲಿರುವ ಕುಟುಂಬಕ್ಕೆ ನೆರವಿನ ಅಗತ್ಯವಿದೆ.
ಅಂಬಿಕಾ
ಪೋನ್ ಪೇ ನಂಬರ್ – 9591585143
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…