ಮನೆಯ ಯಜಮಾನ ಗಾರೆ ಕೆಲಸ ಮಾಡುವ ಕೂಲಿ ಕಾರ್ಮಿಕ, ಬರುವ ದಿನಗೂಲಿಯಲ್ಲಿ ನೆಮ್ಮದಿಯ ಜೀವನ ಕಟ್ಟಿಕೊಂಡಿದ್ದರು, ಕಷ್ಟದ ದುಡಿಮೆಯಲ್ಲಿ ಇಬ್ಬರು ಮಕ್ಕಳ ವಿದ್ಯಾಭ್ಯಾಸ ಮಾಡಿಸುತ್ತಾ ಭವಿಷ್ಯದ ಕನಸು ಕಂಡಿದ್ದರು, ರಾತ್ರಿ ನಡೆದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಇಡೀ ಮನೆ ಹೊತ್ತಿ ಉರಿದಿದೆ, ಅಡುಗೆ ಮಾಡಲು ಸಂಗ್ರಹಿಸಿದ ರೇಷನ್, ಧರಿಸಲು ಇಟ್ಟಿದ ಬಟ್ಟೆಗಳ ಜೊತೆ ದಾಖಲೆ ಪತ್ರಗಳು ಸುಟ್ಟು ಭಸ್ಮವಾಗಿದೆ, ಇಡೀ ಕುಟುಂಬ ಊಟಕ್ಕೂ ಹಣವಿಲ್ಲದೆ ಅಕ್ಷರಶಃ ಬೀದಿಗೆ ಬಿದ್ದಿದೆ.
ದೊಡ್ಡಬಳ್ಳಾಪುರ ನಗರದ ರಾಜೀವ್ ಗಾಂಧಿ ಬಡಾವಣೆಯ ಒಂದನೇ ಹಂತದಲ್ಲಿ ತಡರಾತ್ರಿ ಸುಮಾರು 1 ಗಂಟೆ ಸಮಯದಲ್ಲಿ ಘಟನೆ ನಡೆದಿದೆ. ವಿದ್ಯುತ್ ಅವಘಡದಲ್ಲಿ ಅಂಬಿಕಾ ಮತ್ತು ಸೋಮಶೇಖರ್ ದಂಪತಿ ವಾಸವಾಗಿದ್ದ ಮನೆ ಸಂಪೂರ್ಣವಾಗಿ ಸುಟ್ಟು ಬೂದಿಯಾಗಿದೆ, ಅದೃಷ್ಟವಶಾತ್ ಗಂಡ, ಹೆಂಡತಿ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿ ಅವಘಡದಲ್ಲಿ ಮನೆಯಲ್ಲಿದ್ದ ರೇಷನ್, ಬಟ್ಟೆಗಳು, ದಾಖಲೆಗಳಾದ ಆಧಾರ್ ಕಾರ್ಡ್, ವೋಟರ್ ಐಡಿ, ಬ್ಯಾಂಕ್ ಪಾಸ್ ಸಹ ಬೆಂಕಿಯಲ್ಲಿ ಸುಟ್ಟು ಬೂದಿಯಾಗಿದೆ.
ಸೋಮಶೇಖರ್ ಕುಟುಂಬ ಸದಸ್ಯರು ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದಾರೆ, ಮುಂಜಾನೆ 1 ಗಂಟೆ ಸಮಯದಲ್ಲಿ ಮನೆಯ ಬಳಿಯ ವಿದ್ಯುತ್ ಕಂಬದಲ್ಲಿ ವಿದ್ಯುತ್ ಕಿಡಿಯ ಶಬ್ಧ ಕೇಳಿ ಬಂದಿದೆ, ಗಂಡ ಹೆಂಡತಿ ಇಬ್ಬರು ಹೊರಗೆ ಬಂದು ನೋಡುವ ಸಮಯದಲ್ಲಿ ಮನೆಯೊಳಗಿದ್ದ ಟಿವಿ ಸ್ಫೋಟಗೊಂಡಿದೆ, ಸ್ಫೋಟದಿಂದ ಉಂಟಾದ ಬೆಂಕಿ ಇಡೀ ಮನೆಯನ್ನ ಅವರಿಸಿದೆ, ಹೊತ್ತಿ ಉರಿಯುತ್ತಿದ್ದ ಮನೆಯೊಳಗಿಂದ ಮಲಗಿದ್ದ ಮಕ್ಕಳನ್ನ ಹೊರಗೆ ಕರೆ ತಂದಿದ್ದಾರೆ, ಒಂದು ಕ್ಷಣ ತಡವಾಗಿದ್ದರು ಮಕ್ಕಳ ಜೀವಕ್ಕೆ ಹಾನಿಯಾಗುವ ಸಾಧ್ಯತೆ ಇತ್ತು, ಅದೃಷ್ಟವಶಾತ್ ಇಡೀ ಕುಟುಂಬ ಬೆಂಕಿ ಅವಘಡದಲ್ಲಿ ಪಾರಾಗಿದೆ ಎಂದು ಸ್ಥಳೀಯ ಜಗನ್ನಾಥ್ ತಿಳಿಸಿದರು.
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…