ಮನೆಯ ಯಜಮಾನ ಗಾರೆ ಕೆಲಸ ಮಾಡುವ ಕೂಲಿ ಕಾರ್ಮಿಕ, ಬರುವ ದಿನಗೂಲಿಯಲ್ಲಿ ನೆಮ್ಮದಿಯ ಜೀವನ ಕಟ್ಟಿಕೊಂಡಿದ್ದರು, ಕಷ್ಟದ ದುಡಿಮೆಯಲ್ಲಿ ಇಬ್ಬರು ಮಕ್ಕಳ ವಿದ್ಯಾಭ್ಯಾಸ ಮಾಡಿಸುತ್ತಾ ಭವಿಷ್ಯದ ಕನಸು ಕಂಡಿದ್ದರು, ರಾತ್ರಿ ನಡೆದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಇಡೀ ಮನೆ ಹೊತ್ತಿ ಉರಿದಿದೆ, ಅಡುಗೆ ಮಾಡಲು ಸಂಗ್ರಹಿಸಿದ ರೇಷನ್, ಧರಿಸಲು ಇಟ್ಟಿದ ಬಟ್ಟೆಗಳ ಜೊತೆ ದಾಖಲೆ ಪತ್ರಗಳು ಸುಟ್ಟು ಭಸ್ಮವಾಗಿದೆ, ಇಡೀ ಕುಟುಂಬ ಊಟಕ್ಕೂ ಹಣವಿಲ್ಲದೆ ಅಕ್ಷರಶಃ ಬೀದಿಗೆ ಬಿದ್ದಿದೆ.
ದೊಡ್ಡಬಳ್ಳಾಪುರ ನಗರದ ರಾಜೀವ್ ಗಾಂಧಿ ಬಡಾವಣೆಯ ಒಂದನೇ ಹಂತದಲ್ಲಿ ತಡರಾತ್ರಿ ಸುಮಾರು 1 ಗಂಟೆ ಸಮಯದಲ್ಲಿ ಘಟನೆ ನಡೆದಿದೆ. ವಿದ್ಯುತ್ ಅವಘಡದಲ್ಲಿ ಅಂಬಿಕಾ ಮತ್ತು ಸೋಮಶೇಖರ್ ದಂಪತಿ ವಾಸವಾಗಿದ್ದ ಮನೆ ಸಂಪೂರ್ಣವಾಗಿ ಸುಟ್ಟು ಬೂದಿಯಾಗಿದೆ, ಅದೃಷ್ಟವಶಾತ್ ಗಂಡ, ಹೆಂಡತಿ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿ ಅವಘಡದಲ್ಲಿ ಮನೆಯಲ್ಲಿದ್ದ ರೇಷನ್, ಬಟ್ಟೆಗಳು, ದಾಖಲೆಗಳಾದ ಆಧಾರ್ ಕಾರ್ಡ್, ವೋಟರ್ ಐಡಿ, ಬ್ಯಾಂಕ್ ಪಾಸ್ ಸಹ ಬೆಂಕಿಯಲ್ಲಿ ಸುಟ್ಟು ಬೂದಿಯಾಗಿದೆ.
ಸೋಮಶೇಖರ್ ಕುಟುಂಬ ಸದಸ್ಯರು ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದಾರೆ, ಮುಂಜಾನೆ 1 ಗಂಟೆ ಸಮಯದಲ್ಲಿ ಮನೆಯ ಬಳಿಯ ವಿದ್ಯುತ್ ಕಂಬದಲ್ಲಿ ವಿದ್ಯುತ್ ಕಿಡಿಯ ಶಬ್ಧ ಕೇಳಿ ಬಂದಿದೆ, ಗಂಡ ಹೆಂಡತಿ ಇಬ್ಬರು ಹೊರಗೆ ಬಂದು ನೋಡುವ ಸಮಯದಲ್ಲಿ ಮನೆಯೊಳಗಿದ್ದ ಟಿವಿ ಸ್ಫೋಟಗೊಂಡಿದೆ, ಸ್ಫೋಟದಿಂದ ಉಂಟಾದ ಬೆಂಕಿ ಇಡೀ ಮನೆಯನ್ನ ಅವರಿಸಿದೆ, ಹೊತ್ತಿ ಉರಿಯುತ್ತಿದ್ದ ಮನೆಯೊಳಗಿಂದ ಮಲಗಿದ್ದ ಮಕ್ಕಳನ್ನ ಹೊರಗೆ ಕರೆ ತಂದಿದ್ದಾರೆ, ಒಂದು ಕ್ಷಣ ತಡವಾಗಿದ್ದರು ಮಕ್ಕಳ ಜೀವಕ್ಕೆ ಹಾನಿಯಾಗುವ ಸಾಧ್ಯತೆ ಇತ್ತು, ಅದೃಷ್ಟವಶಾತ್ ಇಡೀ ಕುಟುಂಬ ಬೆಂಕಿ ಅವಘಡದಲ್ಲಿ ಪಾರಾಗಿದೆ ಎಂದು ಸ್ಥಳೀಯ ಜಗನ್ನಾಥ್ ತಿಳಿಸಿದರು.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…