ಬೆಂಕಿ ಅವಘಡದಿಂದ ಮನೆ ಬೆಂಕಿಗಾಹುತಿ; ಮನೆಯಲ್ಲಿದ್ದ ವಸ್ತು, ದಾಖಲೆಗಳು ಸಂಪೂರ್ಣ ಭಸ್ಮ; 2ನೇ ಹಂತ 1ನೇ ವಾರ್ಡ್ ರಾಜೀವ್ ಗಾಂಧಿ ಬಡಾವಣೆಯಲ್ಲಿ ಘಟನೆ

ಮನೆಯ ಯಜಮಾನ ಗಾರೆ ಕೆಲಸ ಮಾಡುವ ಕೂಲಿ ಕಾರ್ಮಿಕ, ಬರುವ ದಿನಗೂಲಿಯಲ್ಲಿ ನೆಮ್ಮದಿಯ ಜೀವನ ಕಟ್ಟಿಕೊಂಡಿದ್ದರು, ಕಷ್ಟದ ದುಡಿಮೆಯಲ್ಲಿ ಇಬ್ಬರು ಮಕ್ಕಳ ವಿದ್ಯಾಭ್ಯಾಸ ಮಾಡಿಸುತ್ತಾ ಭವಿಷ್ಯದ ಕನಸು ಕಂಡಿದ್ದರು, ರಾತ್ರಿ ನಡೆದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಇಡೀ ಮನೆ ಹೊತ್ತಿ ಉರಿದಿದೆ, ಅಡುಗೆ ಮಾಡಲು ಸಂಗ್ರಹಿಸಿದ ರೇಷನ್, ಧರಿಸಲು ಇಟ್ಟಿದ ಬಟ್ಟೆಗಳ ಜೊತೆ ದಾಖಲೆ ಪತ್ರಗಳು ಸುಟ್ಟು ಭಸ್ಮವಾಗಿದೆ, ಇಡೀ ಕುಟುಂಬ ಊಟಕ್ಕೂ ಹಣವಿಲ್ಲದೆ ಅಕ್ಷರಶಃ ಬೀದಿಗೆ ಬಿದ್ದಿದೆ.

ದೊಡ್ಡಬಳ್ಳಾಪುರ ನಗರದ ರಾಜೀವ್ ಗಾಂಧಿ ಬಡಾವಣೆಯ ಒಂದನೇ ಹಂತದಲ್ಲಿ ತಡರಾತ್ರಿ ಸುಮಾರು 1 ಗಂಟೆ ಸಮಯದಲ್ಲಿ ಘಟನೆ ನಡೆದಿದೆ. ವಿದ್ಯುತ್ ಅವಘಡದಲ್ಲಿ ಅಂಬಿಕಾ ಮತ್ತು ಸೋಮಶೇಖರ್ ದಂಪತಿ ವಾಸವಾಗಿದ್ದ ಮನೆ ಸಂಪೂರ್ಣವಾಗಿ ಸುಟ್ಟು ಬೂದಿಯಾಗಿದೆ, ಅದೃಷ್ಟವಶಾತ್ ಗಂಡ, ಹೆಂಡತಿ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿ ಅವಘಡದಲ್ಲಿ ಮನೆಯಲ್ಲಿದ್ದ ರೇಷನ್, ಬಟ್ಟೆಗಳು, ದಾಖಲೆಗಳಾದ ಆಧಾರ್ ಕಾರ್ಡ್, ವೋಟರ್ ಐಡಿ, ಬ್ಯಾಂಕ್ ಪಾಸ್ ಸಹ ಬೆಂಕಿಯಲ್ಲಿ ಸುಟ್ಟು ಬೂದಿಯಾಗಿದೆ.

ಮಕ್ಕಳ ಪಠ್ಯ ಪುಸ್ತಕ ಸಹ ಬೆಂಕಿಯ ಜ್ವಾಲೆಯಲ್ಲಿ ಸುಟ್ಟು ಬೂದಿಯಾಗಿದೆ, ಸದ್ಯ ಆ ಕುಟುಂಬದವರಿಗೆ ತಿನ್ನಲು ಒಂದು ಕಾಳು ಅಕ್ಕಿ ಸಹ ಇಲ್ಲದೆ ಭಿಕ್ಷೆ ಬೇಡುವ ಪರಿಸ್ಥಿತಿಯಲ್ಲಿದೆ ಎಂದು ಮನೆ ಯಜಮಾನಿ ಅಂಬಿಕಾ ತಿಳಿಸಿದ್ದಾರೆ.

ಸೋಮಶೇಖರ್ ಕುಟುಂಬ ಸದಸ್ಯರು ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದಾರೆ, ಮುಂಜಾನೆ 1 ಗಂಟೆ ಸಮಯದಲ್ಲಿ ಮನೆಯ ಬಳಿಯ ವಿದ್ಯುತ್ ಕಂಬದಲ್ಲಿ ವಿದ್ಯುತ್ ಕಿಡಿಯ ಶಬ್ಧ ಕೇಳಿ ಬಂದಿದೆ, ಗಂಡ ಹೆಂಡತಿ ಇಬ್ಬರು ಹೊರಗೆ ಬಂದು ನೋಡುವ ಸಮಯದಲ್ಲಿ ಮನೆಯೊಳಗಿದ್ದ ಟಿವಿ ಸ್ಫೋಟಗೊಂಡಿದೆ, ಸ್ಫೋಟದಿಂದ ಉಂಟಾದ ಬೆಂಕಿ ಇಡೀ ಮನೆಯನ್ನ ಅವರಿಸಿದೆ, ಹೊತ್ತಿ ಉರಿಯುತ್ತಿದ್ದ ಮನೆಯೊಳಗಿಂದ ಮಲಗಿದ್ದ ಮಕ್ಕಳನ್ನ ಹೊರಗೆ ಕರೆ ತಂದಿದ್ದಾರೆ, ಒಂದು ಕ್ಷಣ ತಡವಾಗಿದ್ದರು ಮಕ್ಕಳ ಜೀವಕ್ಕೆ ಹಾನಿಯಾಗುವ ಸಾಧ್ಯತೆ ಇತ್ತು, ಅದೃಷ್ಟವಶಾತ್ ಇಡೀ ಕುಟುಂಬ ಬೆಂಕಿ ಅವಘಡದಲ್ಲಿ ಪಾರಾಗಿದೆ ಎಂದು ಸ್ಥಳೀಯ ಜಗನ್ನಾಥ್ ತಿಳಿಸಿದರು.

ಮನೆಯಲ್ಲಿದ್ದ ಪ್ರತಿಯೊಂದು ವಸ್ತುಗಳನ್ನ ಕಳೆದುಕೊಂಡಿರುವ ಕುಟುಂಬ ಅಕ್ಷರಶಃ ಬೀದಿಗೆ ಬಂದಿದೆ, ದಾನಿಗಳ ಸಹಾಯದ ನಿರೀಕ್ಷೆಯಲ್ಲಿರುವ ಕುಟುಂಬಕ್ಕೆ ನೆರವಿನ ಅಗತ್ಯವಿದೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

14 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

16 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

16 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

22 hours ago