ಮನೆಯ ಯಜಮಾನ ಗಾರೆ ಕೆಲಸ ಮಾಡುವ ಕೂಲಿ ಕಾರ್ಮಿಕ, ಬರುವ ದಿನಗೂಲಿಯಲ್ಲಿ ನೆಮ್ಮದಿಯ ಜೀವನ ಕಟ್ಟಿಕೊಂಡಿದ್ದರು, ಕಷ್ಟದ ದುಡಿಮೆಯಲ್ಲಿ ಇಬ್ಬರು ಮಕ್ಕಳ ವಿದ್ಯಾಭ್ಯಾಸ ಮಾಡಿಸುತ್ತಾ ಭವಿಷ್ಯದ ಕನಸು ಕಂಡಿದ್ದರು, ರಾತ್ರಿ ನಡೆದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಇಡೀ ಮನೆ ಹೊತ್ತಿ ಉರಿದಿದೆ, ಅಡುಗೆ ಮಾಡಲು ಸಂಗ್ರಹಿಸಿದ ರೇಷನ್, ಧರಿಸಲು ಇಟ್ಟಿದ ಬಟ್ಟೆಗಳ ಜೊತೆ ದಾಖಲೆ ಪತ್ರಗಳು ಸುಟ್ಟು ಭಸ್ಮವಾಗಿದೆ, ಇಡೀ ಕುಟುಂಬ ಊಟಕ್ಕೂ ಹಣವಿಲ್ಲದೆ ಅಕ್ಷರಶಃ ಬೀದಿಗೆ ಬಿದ್ದಿದೆ.
ದೊಡ್ಡಬಳ್ಳಾಪುರ ನಗರದ ರಾಜೀವ್ ಗಾಂಧಿ ಬಡಾವಣೆಯ ಒಂದನೇ ಹಂತದಲ್ಲಿ ತಡರಾತ್ರಿ ಸುಮಾರು 1 ಗಂಟೆ ಸಮಯದಲ್ಲಿ ಘಟನೆ ನಡೆದಿದೆ. ವಿದ್ಯುತ್ ಅವಘಡದಲ್ಲಿ ಅಂಬಿಕಾ ಮತ್ತು ಸೋಮಶೇಖರ್ ದಂಪತಿ ವಾಸವಾಗಿದ್ದ ಮನೆ ಸಂಪೂರ್ಣವಾಗಿ ಸುಟ್ಟು ಬೂದಿಯಾಗಿದೆ, ಅದೃಷ್ಟವಶಾತ್ ಗಂಡ, ಹೆಂಡತಿ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿ ಅವಘಡದಲ್ಲಿ ಮನೆಯಲ್ಲಿದ್ದ ರೇಷನ್, ಬಟ್ಟೆಗಳು, ದಾಖಲೆಗಳಾದ ಆಧಾರ್ ಕಾರ್ಡ್, ವೋಟರ್ ಐಡಿ, ಬ್ಯಾಂಕ್ ಪಾಸ್ ಸಹ ಬೆಂಕಿಯಲ್ಲಿ ಸುಟ್ಟು ಬೂದಿಯಾಗಿದೆ.
ಸೋಮಶೇಖರ್ ಕುಟುಂಬ ಸದಸ್ಯರು ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದಾರೆ, ಮುಂಜಾನೆ 1 ಗಂಟೆ ಸಮಯದಲ್ಲಿ ಮನೆಯ ಬಳಿಯ ವಿದ್ಯುತ್ ಕಂಬದಲ್ಲಿ ವಿದ್ಯುತ್ ಕಿಡಿಯ ಶಬ್ಧ ಕೇಳಿ ಬಂದಿದೆ, ಗಂಡ ಹೆಂಡತಿ ಇಬ್ಬರು ಹೊರಗೆ ಬಂದು ನೋಡುವ ಸಮಯದಲ್ಲಿ ಮನೆಯೊಳಗಿದ್ದ ಟಿವಿ ಸ್ಫೋಟಗೊಂಡಿದೆ, ಸ್ಫೋಟದಿಂದ ಉಂಟಾದ ಬೆಂಕಿ ಇಡೀ ಮನೆಯನ್ನ ಅವರಿಸಿದೆ, ಹೊತ್ತಿ ಉರಿಯುತ್ತಿದ್ದ ಮನೆಯೊಳಗಿಂದ ಮಲಗಿದ್ದ ಮಕ್ಕಳನ್ನ ಹೊರಗೆ ಕರೆ ತಂದಿದ್ದಾರೆ, ಒಂದು ಕ್ಷಣ ತಡವಾಗಿದ್ದರು ಮಕ್ಕಳ ಜೀವಕ್ಕೆ ಹಾನಿಯಾಗುವ ಸಾಧ್ಯತೆ ಇತ್ತು, ಅದೃಷ್ಟವಶಾತ್ ಇಡೀ ಕುಟುಂಬ ಬೆಂಕಿ ಅವಘಡದಲ್ಲಿ ಪಾರಾಗಿದೆ ಎಂದು ಸ್ಥಳೀಯ ಜಗನ್ನಾಥ್ ತಿಳಿಸಿದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…