ಮನೆಯ ಯಜಮಾನ ಗಾರೆ ಕೆಲಸ ಮಾಡುವ ಕೂಲಿ ಕಾರ್ಮಿಕ, ಬರುವ ದಿನಗೂಲಿಯಲ್ಲಿ ನೆಮ್ಮದಿಯ ಜೀವನ ಕಟ್ಟಿಕೊಂಡಿದ್ದರು, ಕಷ್ಟದ ದುಡಿಮೆಯಲ್ಲಿ ಇಬ್ಬರು ಮಕ್ಕಳ ವಿದ್ಯಾಭ್ಯಾಸ ಮಾಡಿಸುತ್ತಾ ಭವಿಷ್ಯದ ಕನಸು ಕಂಡಿದ್ದರು, ರಾತ್ರಿ ನಡೆದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಇಡೀ ಮನೆ ಹೊತ್ತಿ ಉರಿದಿದೆ, ಅಡುಗೆ ಮಾಡಲು ಸಂಗ್ರಹಿಸಿದ ರೇಷನ್, ಧರಿಸಲು ಇಟ್ಟಿದ ಬಟ್ಟೆಗಳ ಜೊತೆ ದಾಖಲೆ ಪತ್ರಗಳು ಸುಟ್ಟು ಭಸ್ಮವಾಗಿದೆ, ಇಡೀ ಕುಟುಂಬ ಊಟಕ್ಕೂ ಹಣವಿಲ್ಲದೆ ಅಕ್ಷರಶಃ ಬೀದಿಗೆ ಬಿದ್ದಿದೆ.
ದೊಡ್ಡಬಳ್ಳಾಪುರ ನಗರದ ರಾಜೀವ್ ಗಾಂಧಿ ಬಡಾವಣೆಯ ಒಂದನೇ ಹಂತದಲ್ಲಿ ತಡರಾತ್ರಿ ಸುಮಾರು 1 ಗಂಟೆ ಸಮಯದಲ್ಲಿ ಘಟನೆ ನಡೆದಿದೆ. ವಿದ್ಯುತ್ ಅವಘಡದಲ್ಲಿ ಅಂಬಿಕಾ ಮತ್ತು ಸೋಮಶೇಖರ್ ದಂಪತಿ ವಾಸವಾಗಿದ್ದ ಮನೆ ಸಂಪೂರ್ಣವಾಗಿ ಸುಟ್ಟು ಬೂದಿಯಾಗಿದೆ, ಅದೃಷ್ಟವಶಾತ್ ಗಂಡ, ಹೆಂಡತಿ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿ ಅವಘಡದಲ್ಲಿ ಮನೆಯಲ್ಲಿದ್ದ ರೇಷನ್, ಬಟ್ಟೆಗಳು, ದಾಖಲೆಗಳಾದ ಆಧಾರ್ ಕಾರ್ಡ್, ವೋಟರ್ ಐಡಿ, ಬ್ಯಾಂಕ್ ಪಾಸ್ ಸಹ ಬೆಂಕಿಯಲ್ಲಿ ಸುಟ್ಟು ಬೂದಿಯಾಗಿದೆ.
ಸೋಮಶೇಖರ್ ಕುಟುಂಬ ಸದಸ್ಯರು ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದಾರೆ, ಮುಂಜಾನೆ 1 ಗಂಟೆ ಸಮಯದಲ್ಲಿ ಮನೆಯ ಬಳಿಯ ವಿದ್ಯುತ್ ಕಂಬದಲ್ಲಿ ವಿದ್ಯುತ್ ಕಿಡಿಯ ಶಬ್ಧ ಕೇಳಿ ಬಂದಿದೆ, ಗಂಡ ಹೆಂಡತಿ ಇಬ್ಬರು ಹೊರಗೆ ಬಂದು ನೋಡುವ ಸಮಯದಲ್ಲಿ ಮನೆಯೊಳಗಿದ್ದ ಟಿವಿ ಸ್ಫೋಟಗೊಂಡಿದೆ, ಸ್ಫೋಟದಿಂದ ಉಂಟಾದ ಬೆಂಕಿ ಇಡೀ ಮನೆಯನ್ನ ಅವರಿಸಿದೆ, ಹೊತ್ತಿ ಉರಿಯುತ್ತಿದ್ದ ಮನೆಯೊಳಗಿಂದ ಮಲಗಿದ್ದ ಮಕ್ಕಳನ್ನ ಹೊರಗೆ ಕರೆ ತಂದಿದ್ದಾರೆ, ಒಂದು ಕ್ಷಣ ತಡವಾಗಿದ್ದರು ಮಕ್ಕಳ ಜೀವಕ್ಕೆ ಹಾನಿಯಾಗುವ ಸಾಧ್ಯತೆ ಇತ್ತು, ಅದೃಷ್ಟವಶಾತ್ ಇಡೀ ಕುಟುಂಬ ಬೆಂಕಿ ಅವಘಡದಲ್ಲಿ ಪಾರಾಗಿದೆ ಎಂದು ಸ್ಥಳೀಯ ಜಗನ್ನಾಥ್ ತಿಳಿಸಿದರು.
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…
ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…