ವಿವಾಹಿತ ಮಹಿಳೆ ಮತ್ತು ಆಕೆಯ ಪ್ರೇಮಿಯು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿಗಾಹುತಿಯಾಗಿರುವ ಘಟನೆ ಕೊತ್ತನೂರಿನ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡ ಗುಬ್ಬಿ ನಿವಾಸದ ಡಿ ಮ್ಯಾಕ್ಸ್ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.
ಬಂಗಾಳ ಮೂಲದ ಸೌಮಿನಿ ದಾಸ್ ಮತ್ತು ಕೇರಳ ಮೂಲದ ಅಭಿಲ್ ಅಬ್ರಾಹಂ ಮೃತ ದುರ್ದೈವಿಗಳು.
ಸೌಮಿನಿ ದಾಸ್ ಗೆ ಕಳೆದ ಎರಡು ವರ್ಷಗಳ ಹಿಂದೆಯೇ ವಿವಾಹವಾಗಿತ್ತು, ಬೆಂಗಳೂರಿಗೆ ಬಂದು ಎರಡನೇ ವರ್ಷದ ನರ್ಸಿಂಗ್ ಮಾಡುತ್ತಿದ್ದಳು.
ಸೌಮಿನಿ ಅವರಿಗೆ ರಜೆ ಇದ್ದಂತಹ ಸಂದರ್ಭದಲ್ಲಿ ಮತ್ತು ಬಿಡುವಿನಲ್ಲಿ ನರ್ಸಿಂಗ್ ಏಜನ್ಸಿ ನಡೆಸುತ್ತಿದ್ದ ಅಬ್ರಾಹಂ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದರು. ಆಗ ನರ್ಸಿಂಗ್ ಏಜನ್ಸಿ ನಡೆಸುತ್ತಿದ್ದ ಅಬ್ರಾಹಂ ಪರಿಚಯವಾಗಿ ಪರಿಚಯ ಪ್ರೇಮಕ್ಕೆ ತಿರುಗಿತ್ತು.
ಸೌಮಿನಿ ಅವರು ಕೆಲ ದಿನಗಳ ಹಿಂದೆ ಕೊಲ್ಕತ್ತಾಗೆ ಹೋಗಿದ್ದರು. ಕೊಲ್ಕತ್ತಾದಿಂದ ಬೆಂಗಳೂರಿಗೆ ಬಂದಿದ್ದಳು, ಬೆಂಗಳೂರಿಗೆ ಬಂದು 14 ದಿನಕ್ಕೆ ಫ್ಲ್ಯಾಟ್ ಬಾಡಿಗೆ ಪಡೆದಿದ್ದರು. ನಂತರ ಸೌಮಿನಿ ತನ್ನ ಪತಿಗೆ ಪ್ರೇಮದ ವಿಚಾರ ತಿಳಿಸಿದಳು. ಈ ವಿಚಾರವಾಗಿ ಗಲಾಟೆಯಾಗಿದೆ ಎನ್ನಾಲಾಗಿದೆ. ಈ ವಿಚಾರಕ್ಕೆ ಗಲಾಟೆಯಾದ ನಂತರ ಇಬ್ಬರು ಸಾಯಲು ತೀರ್ಮಾನ ಮಾಡಿದ್ದಾರೆ.
ಭಾನುವಾರ ಮಧ್ಯಾಹ್ನ ವೇಳೆಗೆ ಬಾಡಿಗೆ ಪಡೆದಿದ್ದ ಅಪಾರ್ಟ್ಮೆಂಟ್ ನಲ್ಲಿ ಇಬ್ಬರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…