ವಿವಾಹಿತ ಮಹಿಳೆ ಮತ್ತು ಆಕೆಯ ಪ್ರೇಮಿಯು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿಗಾಹುತಿಯಾಗಿರುವ ಘಟನೆ ಕೊತ್ತನೂರಿನ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡ ಗುಬ್ಬಿ ನಿವಾಸದ ಡಿ ಮ್ಯಾಕ್ಸ್ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.
ಬಂಗಾಳ ಮೂಲದ ಸೌಮಿನಿ ದಾಸ್ ಮತ್ತು ಕೇರಳ ಮೂಲದ ಅಭಿಲ್ ಅಬ್ರಾಹಂ ಮೃತ ದುರ್ದೈವಿಗಳು.
ಸೌಮಿನಿ ದಾಸ್ ಗೆ ಕಳೆದ ಎರಡು ವರ್ಷಗಳ ಹಿಂದೆಯೇ ವಿವಾಹವಾಗಿತ್ತು, ಬೆಂಗಳೂರಿಗೆ ಬಂದು ಎರಡನೇ ವರ್ಷದ ನರ್ಸಿಂಗ್ ಮಾಡುತ್ತಿದ್ದಳು.
ಸೌಮಿನಿ ಅವರಿಗೆ ರಜೆ ಇದ್ದಂತಹ ಸಂದರ್ಭದಲ್ಲಿ ಮತ್ತು ಬಿಡುವಿನಲ್ಲಿ ನರ್ಸಿಂಗ್ ಏಜನ್ಸಿ ನಡೆಸುತ್ತಿದ್ದ ಅಬ್ರಾಹಂ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದರು. ಆಗ ನರ್ಸಿಂಗ್ ಏಜನ್ಸಿ ನಡೆಸುತ್ತಿದ್ದ ಅಬ್ರಾಹಂ ಪರಿಚಯವಾಗಿ ಪರಿಚಯ ಪ್ರೇಮಕ್ಕೆ ತಿರುಗಿತ್ತು.
ಸೌಮಿನಿ ಅವರು ಕೆಲ ದಿನಗಳ ಹಿಂದೆ ಕೊಲ್ಕತ್ತಾಗೆ ಹೋಗಿದ್ದರು. ಕೊಲ್ಕತ್ತಾದಿಂದ ಬೆಂಗಳೂರಿಗೆ ಬಂದಿದ್ದಳು, ಬೆಂಗಳೂರಿಗೆ ಬಂದು 14 ದಿನಕ್ಕೆ ಫ್ಲ್ಯಾಟ್ ಬಾಡಿಗೆ ಪಡೆದಿದ್ದರು. ನಂತರ ಸೌಮಿನಿ ತನ್ನ ಪತಿಗೆ ಪ್ರೇಮದ ವಿಚಾರ ತಿಳಿಸಿದಳು. ಈ ವಿಚಾರವಾಗಿ ಗಲಾಟೆಯಾಗಿದೆ ಎನ್ನಾಲಾಗಿದೆ. ಈ ವಿಚಾರಕ್ಕೆ ಗಲಾಟೆಯಾದ ನಂತರ ಇಬ್ಬರು ಸಾಯಲು ತೀರ್ಮಾನ ಮಾಡಿದ್ದಾರೆ.
ಭಾನುವಾರ ಮಧ್ಯಾಹ್ನ ವೇಳೆಗೆ ಬಾಡಿಗೆ ಪಡೆದಿದ್ದ ಅಪಾರ್ಟ್ಮೆಂಟ್ ನಲ್ಲಿ ಇಬ್ಬರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…
ನಟಿ ತ್ರಿಷಾ ಜತೆ ಅಫೇರ್ ಆರೋಪ, ಹೆಂಡ್ತಿ ಡಿವೋರ್ಸ್ ಗೆ ಅರ್ಜಿ ವಿಚಾರ, ವಿಪಕ್ಷಗಳ ಟೀಕಾ ಪ್ರಹಾರ, ಸೋಷಿಯಲ್ ಮೀಡಿಯಾದಲ್ಲಿ…