ಬೆಂಕಿ ಹಚ್ಚಿಕೊಂಡು ವಿವಾಹಿತ ಮಹಿಳೆ‌ ಮತ್ತು ಪ್ರೇಮಿ ಆತ್ಮಹತ್ಯೆ

ವಿವಾಹಿತ ಮಹಿಳೆ ಮತ್ತು ಆಕೆಯ ಪ್ರೇಮಿಯು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿಗಾಹುತಿಯಾಗಿರುವ ಘಟನೆ ಕೊತ್ತನೂರಿನ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡ ಗುಬ್ಬಿ ನಿವಾಸದ ‌ಡಿ ಮ್ಯಾಕ್ಸ್ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.

ಬಂಗಾಳ ಮೂಲದ ಸೌಮಿನಿ ದಾಸ್ ಮತ್ತು ಕೇರಳ ಮೂಲದ ಅಭಿಲ್ ಅಬ್ರಾಹಂ ಮೃತ ದುರ್ದೈವಿಗಳು.

ಸೌಮಿನಿ ದಾಸ್‌ ಗೆ ಕಳೆದ ಎರಡು‌ ವರ್ಷಗಳ ಹಿಂದೆಯೇ ವಿವಾಹವಾಗಿತ್ತು, ಬೆಂಗಳೂರಿಗೆ ಬಂದು ಎರಡನೇ ವರ್ಷದ ನರ್ಸಿಂಗ್ ಮಾಡುತ್ತಿದ್ದಳು.

ಸೌಮಿನಿ ಅವರಿಗೆ ರಜೆ ಇದ್ದಂತಹ ಸಂದರ್ಭದಲ್ಲಿ ಮತ್ತು ಬಿಡುವಿನಲ್ಲಿ ನರ್ಸಿಂಗ್ ಏಜನ್ಸಿ ನಡೆಸುತ್ತಿದ್ದ ಅಬ್ರಾಹಂ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದರು. ಆಗ ನರ್ಸಿಂಗ್ ಏಜನ್ಸಿ ನಡೆಸುತ್ತಿದ್ದ ಅಬ್ರಾಹಂ ಪರಿಚಯವಾಗಿ ಪರಿಚಯ ಪ್ರೇಮಕ್ಕೆ ತಿರುಗಿತ್ತು.

ಸೌಮಿನಿ ಅವರು ಕೆಲ ದಿನಗಳ ಹಿಂದೆ ಕೊಲ್ಕತ್ತಾಗೆ ಹೋಗಿದ್ದರು. ಕೊಲ್ಕತ್ತಾದಿಂದ ಬೆಂಗಳೂರಿಗೆ ಬಂದಿದ್ದಳು, ಬೆಂಗಳೂರಿಗೆ ಬಂದು 14 ದಿನಕ್ಕೆ ಫ್ಲ್ಯಾಟ್‌ ಬಾಡಿಗೆ ಪಡೆದಿದ್ದರು. ನಂತರ ಸೌಮಿನಿ ತನ್ನ ಪತಿಗೆ ಪ್ರೇಮದ ವಿಚಾರ ತಿಳಿಸಿದಳು. ಈ ವಿಚಾರವಾಗಿ ಗಲಾಟೆಯಾಗಿದೆ ಎನ್ನಾಲಾಗಿದೆ. ಈ ವಿಚಾರಕ್ಕೆ ಗಲಾಟೆಯಾದ ನಂತರ ಇಬ್ಬರು ಸಾಯಲು ತೀರ್ಮಾನ ಮಾಡಿದ್ದಾರೆ.

ಭಾನುವಾರ ಮಧ್ಯಾಹ್ನ ವೇಳೆಗೆ ಬಾಡಿಗೆ ಪಡೆದಿದ್ದ ಅಪಾರ್ಟ್ಮೆಂಟ್ ನಲ್ಲಿ ಇಬ್ಬರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ‌ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

58 minutes ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

6 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

19 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

22 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

23 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago