ಬೆಂಕಿ ಹಚ್ಚಿಕೊಂಡು ವಿವಾಹಿತ ಮಹಿಳೆ‌ ಮತ್ತು ಪ್ರೇಮಿ ಆತ್ಮಹತ್ಯೆ

ವಿವಾಹಿತ ಮಹಿಳೆ ಮತ್ತು ಆಕೆಯ ಪ್ರೇಮಿಯು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿಗಾಹುತಿಯಾಗಿರುವ ಘಟನೆ ಕೊತ್ತನೂರಿನ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡ ಗುಬ್ಬಿ ನಿವಾಸದ ‌ಡಿ ಮ್ಯಾಕ್ಸ್ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.

ಬಂಗಾಳ ಮೂಲದ ಸೌಮಿನಿ ದಾಸ್ ಮತ್ತು ಕೇರಳ ಮೂಲದ ಅಭಿಲ್ ಅಬ್ರಾಹಂ ಮೃತ ದುರ್ದೈವಿಗಳು.

ಸೌಮಿನಿ ದಾಸ್‌ ಗೆ ಕಳೆದ ಎರಡು‌ ವರ್ಷಗಳ ಹಿಂದೆಯೇ ವಿವಾಹವಾಗಿತ್ತು, ಬೆಂಗಳೂರಿಗೆ ಬಂದು ಎರಡನೇ ವರ್ಷದ ನರ್ಸಿಂಗ್ ಮಾಡುತ್ತಿದ್ದಳು.

ಸೌಮಿನಿ ಅವರಿಗೆ ರಜೆ ಇದ್ದಂತಹ ಸಂದರ್ಭದಲ್ಲಿ ಮತ್ತು ಬಿಡುವಿನಲ್ಲಿ ನರ್ಸಿಂಗ್ ಏಜನ್ಸಿ ನಡೆಸುತ್ತಿದ್ದ ಅಬ್ರಾಹಂ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದರು. ಆಗ ನರ್ಸಿಂಗ್ ಏಜನ್ಸಿ ನಡೆಸುತ್ತಿದ್ದ ಅಬ್ರಾಹಂ ಪರಿಚಯವಾಗಿ ಪರಿಚಯ ಪ್ರೇಮಕ್ಕೆ ತಿರುಗಿತ್ತು.

ಸೌಮಿನಿ ಅವರು ಕೆಲ ದಿನಗಳ ಹಿಂದೆ ಕೊಲ್ಕತ್ತಾಗೆ ಹೋಗಿದ್ದರು. ಕೊಲ್ಕತ್ತಾದಿಂದ ಬೆಂಗಳೂರಿಗೆ ಬಂದಿದ್ದಳು, ಬೆಂಗಳೂರಿಗೆ ಬಂದು 14 ದಿನಕ್ಕೆ ಫ್ಲ್ಯಾಟ್‌ ಬಾಡಿಗೆ ಪಡೆದಿದ್ದರು. ನಂತರ ಸೌಮಿನಿ ತನ್ನ ಪತಿಗೆ ಪ್ರೇಮದ ವಿಚಾರ ತಿಳಿಸಿದಳು. ಈ ವಿಚಾರವಾಗಿ ಗಲಾಟೆಯಾಗಿದೆ ಎನ್ನಾಲಾಗಿದೆ. ಈ ವಿಚಾರಕ್ಕೆ ಗಲಾಟೆಯಾದ ನಂತರ ಇಬ್ಬರು ಸಾಯಲು ತೀರ್ಮಾನ ಮಾಡಿದ್ದಾರೆ.

ಭಾನುವಾರ ಮಧ್ಯಾಹ್ನ ವೇಳೆಗೆ ಬಾಡಿಗೆ ಪಡೆದಿದ್ದ ಅಪಾರ್ಟ್ಮೆಂಟ್ ನಲ್ಲಿ ಇಬ್ಬರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ‌ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಅಧಿಕಾರಕ್ಕೇರುವ ಮುನ್ನವೇ ಟ್ರಬಲ್ ಶೂಟರ್ ಚಾಣಾಕ್ಷ ನಡೆ: ದೇವೇಗೌಡ-ಯಡಿಯೂರಪ್ಪ ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…

45 minutes ago

ಡಿ.ಕೆ.ಶಿವಕುಮಾರ್ ಪದಗ್ರಹಣ: ಡಿಕೆಶಿ ಜೊತೆ ಓರ್ವ ಡಿಸಿಎಂ ಸೇರಿ 12 ಮಂದಿ ಸಚಿವರಾಗಿ ಪ್ರಮಾಣ ವಚನ….

ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…

2 hours ago

ಬಿಜೆಪಿಗೆ ಅಧಿಕಾರ ಸಿಕ್ಕಾಗ ಒಬಿಸಿ, ದಲಿತರ ರಾಜಕೀಯ ಪ್ರಾತಿನಿಧ್ಯ ಏಕೆ ನೆನಪಾಗಲಿಲ್ಲ?- ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…

2 hours ago

ಡಾ.ಜಿ.ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ.?: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ ಸಿದ್ದರಾಮಯ್ಯ ಸುಳಿವು

ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…

3 hours ago

ಪ್ರಮಾಣ ವಚನ ಅಥವಾ ಪ್ರತಿಜ್ಞಾ ವಿಧಿ……. ಇವು ಆತ್ಮಸಾಕ್ಷಿಯ ನುಡಿಗಳೇ – ಸಂವಿಧಾನಾತ್ಮಕ ಕರ್ತವ್ಯವೇ – ಒಂದು ಒಣ ವಿಧಿ ವಿಧಾನವೇ…….

ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…

6 hours ago

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

20 hours ago