ವಿವಾಹಿತ ಮಹಿಳೆ ಮತ್ತು ಆಕೆಯ ಪ್ರೇಮಿಯು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿಗಾಹುತಿಯಾಗಿರುವ ಘಟನೆ ಕೊತ್ತನೂರಿನ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡ ಗುಬ್ಬಿ ನಿವಾಸದ ಡಿ ಮ್ಯಾಕ್ಸ್ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.
ಬಂಗಾಳ ಮೂಲದ ಸೌಮಿನಿ ದಾಸ್ ಮತ್ತು ಕೇರಳ ಮೂಲದ ಅಭಿಲ್ ಅಬ್ರಾಹಂ ಮೃತ ದುರ್ದೈವಿಗಳು.
ಸೌಮಿನಿ ದಾಸ್ ಗೆ ಕಳೆದ ಎರಡು ವರ್ಷಗಳ ಹಿಂದೆಯೇ ವಿವಾಹವಾಗಿತ್ತು, ಬೆಂಗಳೂರಿಗೆ ಬಂದು ಎರಡನೇ ವರ್ಷದ ನರ್ಸಿಂಗ್ ಮಾಡುತ್ತಿದ್ದಳು.
ಸೌಮಿನಿ ಅವರಿಗೆ ರಜೆ ಇದ್ದಂತಹ ಸಂದರ್ಭದಲ್ಲಿ ಮತ್ತು ಬಿಡುವಿನಲ್ಲಿ ನರ್ಸಿಂಗ್ ಏಜನ್ಸಿ ನಡೆಸುತ್ತಿದ್ದ ಅಬ್ರಾಹಂ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದರು. ಆಗ ನರ್ಸಿಂಗ್ ಏಜನ್ಸಿ ನಡೆಸುತ್ತಿದ್ದ ಅಬ್ರಾಹಂ ಪರಿಚಯವಾಗಿ ಪರಿಚಯ ಪ್ರೇಮಕ್ಕೆ ತಿರುಗಿತ್ತು.
ಸೌಮಿನಿ ಅವರು ಕೆಲ ದಿನಗಳ ಹಿಂದೆ ಕೊಲ್ಕತ್ತಾಗೆ ಹೋಗಿದ್ದರು. ಕೊಲ್ಕತ್ತಾದಿಂದ ಬೆಂಗಳೂರಿಗೆ ಬಂದಿದ್ದಳು, ಬೆಂಗಳೂರಿಗೆ ಬಂದು 14 ದಿನಕ್ಕೆ ಫ್ಲ್ಯಾಟ್ ಬಾಡಿಗೆ ಪಡೆದಿದ್ದರು. ನಂತರ ಸೌಮಿನಿ ತನ್ನ ಪತಿಗೆ ಪ್ರೇಮದ ವಿಚಾರ ತಿಳಿಸಿದಳು. ಈ ವಿಚಾರವಾಗಿ ಗಲಾಟೆಯಾಗಿದೆ ಎನ್ನಾಲಾಗಿದೆ. ಈ ವಿಚಾರಕ್ಕೆ ಗಲಾಟೆಯಾದ ನಂತರ ಇಬ್ಬರು ಸಾಯಲು ತೀರ್ಮಾನ ಮಾಡಿದ್ದಾರೆ.
ಭಾನುವಾರ ಮಧ್ಯಾಹ್ನ ವೇಳೆಗೆ ಬಾಡಿಗೆ ಪಡೆದಿದ್ದ ಅಪಾರ್ಟ್ಮೆಂಟ್ ನಲ್ಲಿ ಇಬ್ಬರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…
ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…
ಹೀಟ್ ಸ್ಟ್ರೋಕ್ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೀದರ್ನ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ... ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್…
ಬಸವ ಜಯಂತಿಯೋ, ಅಕ್ಷಯ ತೃತೀಯವೋ...... ಅದೃಷ್ಟವಂತರಲ್ಲವೇ ನಾವು,..... ನಮ್ಮ ಹಿಂದಿನ ತಲೆಮಾರಿನವರಿಗೆ ಹೋಲಿಸಿಕೊಂಡರೆ ಎಷ್ಟೊಂದು ಅದೃಷ್ಟವಂತರು ನಾವು. ಎಲ್ಲ ವಿಷಯದಲ್ಲೂ…
ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನನ್ನು ಇದೀಗ ಬಂಧನ ಮಾಡಲಾಗಿದೆ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ…