ವಿವಾಹಿತ ಮಹಿಳೆ ಮತ್ತು ಆಕೆಯ ಪ್ರೇಮಿಯು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿಗಾಹುತಿಯಾಗಿರುವ ಘಟನೆ ಕೊತ್ತನೂರಿನ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡ ಗುಬ್ಬಿ ನಿವಾಸದ ಡಿ ಮ್ಯಾಕ್ಸ್ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.
ಬಂಗಾಳ ಮೂಲದ ಸೌಮಿನಿ ದಾಸ್ ಮತ್ತು ಕೇರಳ ಮೂಲದ ಅಭಿಲ್ ಅಬ್ರಾಹಂ ಮೃತ ದುರ್ದೈವಿಗಳು.
ಸೌಮಿನಿ ದಾಸ್ ಗೆ ಕಳೆದ ಎರಡು ವರ್ಷಗಳ ಹಿಂದೆಯೇ ವಿವಾಹವಾಗಿತ್ತು, ಬೆಂಗಳೂರಿಗೆ ಬಂದು ಎರಡನೇ ವರ್ಷದ ನರ್ಸಿಂಗ್ ಮಾಡುತ್ತಿದ್ದಳು.
ಸೌಮಿನಿ ಅವರಿಗೆ ರಜೆ ಇದ್ದಂತಹ ಸಂದರ್ಭದಲ್ಲಿ ಮತ್ತು ಬಿಡುವಿನಲ್ಲಿ ನರ್ಸಿಂಗ್ ಏಜನ್ಸಿ ನಡೆಸುತ್ತಿದ್ದ ಅಬ್ರಾಹಂ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದರು. ಆಗ ನರ್ಸಿಂಗ್ ಏಜನ್ಸಿ ನಡೆಸುತ್ತಿದ್ದ ಅಬ್ರಾಹಂ ಪರಿಚಯವಾಗಿ ಪರಿಚಯ ಪ್ರೇಮಕ್ಕೆ ತಿರುಗಿತ್ತು.
ಸೌಮಿನಿ ಅವರು ಕೆಲ ದಿನಗಳ ಹಿಂದೆ ಕೊಲ್ಕತ್ತಾಗೆ ಹೋಗಿದ್ದರು. ಕೊಲ್ಕತ್ತಾದಿಂದ ಬೆಂಗಳೂರಿಗೆ ಬಂದಿದ್ದಳು, ಬೆಂಗಳೂರಿಗೆ ಬಂದು 14 ದಿನಕ್ಕೆ ಫ್ಲ್ಯಾಟ್ ಬಾಡಿಗೆ ಪಡೆದಿದ್ದರು. ನಂತರ ಸೌಮಿನಿ ತನ್ನ ಪತಿಗೆ ಪ್ರೇಮದ ವಿಚಾರ ತಿಳಿಸಿದಳು. ಈ ವಿಚಾರವಾಗಿ ಗಲಾಟೆಯಾಗಿದೆ ಎನ್ನಾಲಾಗಿದೆ. ಈ ವಿಚಾರಕ್ಕೆ ಗಲಾಟೆಯಾದ ನಂತರ ಇಬ್ಬರು ಸಾಯಲು ತೀರ್ಮಾನ ಮಾಡಿದ್ದಾರೆ.
ಭಾನುವಾರ ಮಧ್ಯಾಹ್ನ ವೇಳೆಗೆ ಬಾಡಿಗೆ ಪಡೆದಿದ್ದ ಅಪಾರ್ಟ್ಮೆಂಟ್ ನಲ್ಲಿ ಇಬ್ಬರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…