ಬೆಂಗಳೂರನ್ನ ನಿರ್ಮಾಣ ಮಾಡುವ ಜೊತೆಗೆ ಸಮಗ್ರ ಅಭಿವೃದ್ಧಿ ಸಾಕಾರಗೊಳಿಸಿದ ವ್ಯಕ್ತಿ ಕೆಂಪೇಗೌಡ- ಆರ್.ಗೋವಿಂದರಾಜು

ಬೆಂಗಳೂರನ್ನು ನಿಮಾರ್ಣ ಮಾಡುವುದರ ಜೊತೆಗೆ ಸಮಗ್ರ ಅಭಿವೃದ್ದಿಯನ್ನು ಸಾಕಾರಗೊಳಿಸಿದವರು ನಾಡಪ್ರಭು ಕೆಂಪೇಗೌಡ ಎಂದು ಕನ್ನಡ ಸಾಹಿತ್ಯ ಪರಿಷತ್ತು ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು ತಿಳಿಸಿದರು.

ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಗರದ ವಿದ್ಯಾನಿಧಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಅವರ 514 ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕೆಂಪೇಗೌಡ ಅವರ ಸಮರ್ಥ ಆಡಳಿತ ನಡೆಸುವುದರೊಂದಿಗೆ ಬೆಂಗಳೂರನ್ನು ದೂರದೃಷ್ಟಿಯಲ್ಲಿ ಗಮನವಿಸರ್ವರಿಗೂ ಹಿತವಾಗುವಂತೆ ಅಭಿವೃದ್ಧಿಗೊಳಿಸಿದರು. ಕೆರೆಗಳು ನಿಮಾರ್ಣದಿಂದ ಕೃಷಿಗೆ ಸಹಕಾರವಾಯಿತು. ಹಲವು ಪೇಟೆಗಳ ನಿರ್ಮಾಣದಿಂದ ವಾಣಿಜ್ಯ ವ್ಯವಹಾರಗಳಿಗೆ ಪ್ರೋತ್ಸಾಹ ದೊರೆಯಿತು. ದೇವಾಲಯಗಳ ನಿಮಾರ್ಣವು ಸಾಂಸ್ಕೃತಿಕ ಚಟುವಟಿಕೆಗಳಿಗೆ ನೆರವಾದವು ಎಂದರು.

ಕಸಬಾ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಗಿರೀಶ್ ಎನ್ ಬರಗೂರು ಮಾತನಾಡಿ, ವಿಜಯನಗರ ಸಾಮ್ರಾಜ್ಯದ ವೈಭವದ ಮಾದರಿಯಲ್ಲೇ ಬೆಂಗಳೂರನ್ನು ನಿರ್ಮಾಣ ಮಾಡಬೇಕೆಂಬುದು ನಾಡಪ್ರಭು ಕೆಂಪೇಗೌಡ ಅವರ ಕನಸಾಗಿತ್ತು. ಅದನ್ನು ಸಾಕಾರಗೊಳಿಸುವ ಸಲುವಾಗಿ ಬೆಂಗಳೂರನ್ನು ಸಾಂಸ್ಕೃತಿಕವಾಗಿ, ಆರ್ಥಿಕವಾಗಿ ಅಭಿವೃದ್ಧಿಗೊಳಿಸಿದರು. ಸರ್ವ ಸಮುದಾಯಗಳು ಸೌಹಾರ್ದವಾಗಿ ಬದುಕುವಂತೆ ಮಾಡಿದರು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾನಿಧಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್.ಆರ್.ರಂಗನಾಥ ಮಾತನಾಡಿ, ಬೆಂಗಳೂರು ಅಭಿವೃದ್ಧಿಯೊಂದಿಗೆ ಸುತ್ತಮುತ್ತಲಿನ ಪ್ರದೇಶಗಳು ಅಭಿವೃದ್ಧಿಯಾಗಲು ನಾಡಪ್ರಭು ಕೆಂಪೇಗೌಡ ಅವರ ಕೊಡುಗೆ ಅಪಾರವಾಗಿದೆ. ಬೆಂಗಳೂರು ಇಂದು ಜಾಗತಿಕ ಮಟ್ಟದಲ್ಲಿ ಹೆಸರು ಪಡೆಯಲು ಅಂದು ಕೆಂಪೇಗೌಡ ಅವರ ದೂರದೃಷ್ಟಿಯ ಕನಸು ಕಾರಣವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರುಗಳಾದ ಎನ್.ದಿನೇಶ್, ಸಾದತ್ಉಲ್ಲಾಬೇಗ್, ರವಿಕುಮಾರ್, ಬೈರೇಗೌಡ, ಚೇತನಕುಮಾರ್, ಗೌರಿ, ರಂಜಿತ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

Ramesh Babu

Journalist

Recent Posts

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

8 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

11 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

12 hours ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

23 hours ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

1 day ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

2 days ago