ಬೆಂಗಳೂರನ್ನ ನಿರ್ಮಾಣ ಮಾಡುವ ಜೊತೆಗೆ ಸಮಗ್ರ ಅಭಿವೃದ್ಧಿ ಸಾಕಾರಗೊಳಿಸಿದ ವ್ಯಕ್ತಿ ಕೆಂಪೇಗೌಡ- ಆರ್.ಗೋವಿಂದರಾಜು

ಬೆಂಗಳೂರನ್ನು ನಿಮಾರ್ಣ ಮಾಡುವುದರ ಜೊತೆಗೆ ಸಮಗ್ರ ಅಭಿವೃದ್ದಿಯನ್ನು ಸಾಕಾರಗೊಳಿಸಿದವರು ನಾಡಪ್ರಭು ಕೆಂಪೇಗೌಡ ಎಂದು ಕನ್ನಡ ಸಾಹಿತ್ಯ ಪರಿಷತ್ತು ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು ತಿಳಿಸಿದರು.

ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಗರದ ವಿದ್ಯಾನಿಧಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಅವರ 514 ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕೆಂಪೇಗೌಡ ಅವರ ಸಮರ್ಥ ಆಡಳಿತ ನಡೆಸುವುದರೊಂದಿಗೆ ಬೆಂಗಳೂರನ್ನು ದೂರದೃಷ್ಟಿಯಲ್ಲಿ ಗಮನವಿಸರ್ವರಿಗೂ ಹಿತವಾಗುವಂತೆ ಅಭಿವೃದ್ಧಿಗೊಳಿಸಿದರು. ಕೆರೆಗಳು ನಿಮಾರ್ಣದಿಂದ ಕೃಷಿಗೆ ಸಹಕಾರವಾಯಿತು. ಹಲವು ಪೇಟೆಗಳ ನಿರ್ಮಾಣದಿಂದ ವಾಣಿಜ್ಯ ವ್ಯವಹಾರಗಳಿಗೆ ಪ್ರೋತ್ಸಾಹ ದೊರೆಯಿತು. ದೇವಾಲಯಗಳ ನಿಮಾರ್ಣವು ಸಾಂಸ್ಕೃತಿಕ ಚಟುವಟಿಕೆಗಳಿಗೆ ನೆರವಾದವು ಎಂದರು.

ಕಸಬಾ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಗಿರೀಶ್ ಎನ್ ಬರಗೂರು ಮಾತನಾಡಿ, ವಿಜಯನಗರ ಸಾಮ್ರಾಜ್ಯದ ವೈಭವದ ಮಾದರಿಯಲ್ಲೇ ಬೆಂಗಳೂರನ್ನು ನಿರ್ಮಾಣ ಮಾಡಬೇಕೆಂಬುದು ನಾಡಪ್ರಭು ಕೆಂಪೇಗೌಡ ಅವರ ಕನಸಾಗಿತ್ತು. ಅದನ್ನು ಸಾಕಾರಗೊಳಿಸುವ ಸಲುವಾಗಿ ಬೆಂಗಳೂರನ್ನು ಸಾಂಸ್ಕೃತಿಕವಾಗಿ, ಆರ್ಥಿಕವಾಗಿ ಅಭಿವೃದ್ಧಿಗೊಳಿಸಿದರು. ಸರ್ವ ಸಮುದಾಯಗಳು ಸೌಹಾರ್ದವಾಗಿ ಬದುಕುವಂತೆ ಮಾಡಿದರು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾನಿಧಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್.ಆರ್.ರಂಗನಾಥ ಮಾತನಾಡಿ, ಬೆಂಗಳೂರು ಅಭಿವೃದ್ಧಿಯೊಂದಿಗೆ ಸುತ್ತಮುತ್ತಲಿನ ಪ್ರದೇಶಗಳು ಅಭಿವೃದ್ಧಿಯಾಗಲು ನಾಡಪ್ರಭು ಕೆಂಪೇಗೌಡ ಅವರ ಕೊಡುಗೆ ಅಪಾರವಾಗಿದೆ. ಬೆಂಗಳೂರು ಇಂದು ಜಾಗತಿಕ ಮಟ್ಟದಲ್ಲಿ ಹೆಸರು ಪಡೆಯಲು ಅಂದು ಕೆಂಪೇಗೌಡ ಅವರ ದೂರದೃಷ್ಟಿಯ ಕನಸು ಕಾರಣವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರುಗಳಾದ ಎನ್.ದಿನೇಶ್, ಸಾದತ್ಉಲ್ಲಾಬೇಗ್, ರವಿಕುಮಾರ್, ಬೈರೇಗೌಡ, ಚೇತನಕುಮಾರ್, ಗೌರಿ, ರಂಜಿತ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

8 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

13 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

22 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago