ಬೆಂಗಳೂರನ್ನ ನಿರ್ಮಾಣ ಮಾಡುವ ಜೊತೆಗೆ ಸಮಗ್ರ ಅಭಿವೃದ್ಧಿ ಸಾಕಾರಗೊಳಿಸಿದ ವ್ಯಕ್ತಿ ಕೆಂಪೇಗೌಡ- ಆರ್.ಗೋವಿಂದರಾಜು

ಬೆಂಗಳೂರನ್ನು ನಿಮಾರ್ಣ ಮಾಡುವುದರ ಜೊತೆಗೆ ಸಮಗ್ರ ಅಭಿವೃದ್ದಿಯನ್ನು ಸಾಕಾರಗೊಳಿಸಿದವರು ನಾಡಪ್ರಭು ಕೆಂಪೇಗೌಡ ಎಂದು ಕನ್ನಡ ಸಾಹಿತ್ಯ ಪರಿಷತ್ತು ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು ತಿಳಿಸಿದರು.

ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನಗರದ ವಿದ್ಯಾನಿಧಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಅವರ 514 ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕೆಂಪೇಗೌಡ ಅವರ ಸಮರ್ಥ ಆಡಳಿತ ನಡೆಸುವುದರೊಂದಿಗೆ ಬೆಂಗಳೂರನ್ನು ದೂರದೃಷ್ಟಿಯಲ್ಲಿ ಗಮನವಿಸರ್ವರಿಗೂ ಹಿತವಾಗುವಂತೆ ಅಭಿವೃದ್ಧಿಗೊಳಿಸಿದರು. ಕೆರೆಗಳು ನಿಮಾರ್ಣದಿಂದ ಕೃಷಿಗೆ ಸಹಕಾರವಾಯಿತು. ಹಲವು ಪೇಟೆಗಳ ನಿರ್ಮಾಣದಿಂದ ವಾಣಿಜ್ಯ ವ್ಯವಹಾರಗಳಿಗೆ ಪ್ರೋತ್ಸಾಹ ದೊರೆಯಿತು. ದೇವಾಲಯಗಳ ನಿಮಾರ್ಣವು ಸಾಂಸ್ಕೃತಿಕ ಚಟುವಟಿಕೆಗಳಿಗೆ ನೆರವಾದವು ಎಂದರು.

ಕಸಬಾ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಗಿರೀಶ್ ಎನ್ ಬರಗೂರು ಮಾತನಾಡಿ, ವಿಜಯನಗರ ಸಾಮ್ರಾಜ್ಯದ ವೈಭವದ ಮಾದರಿಯಲ್ಲೇ ಬೆಂಗಳೂರನ್ನು ನಿರ್ಮಾಣ ಮಾಡಬೇಕೆಂಬುದು ನಾಡಪ್ರಭು ಕೆಂಪೇಗೌಡ ಅವರ ಕನಸಾಗಿತ್ತು. ಅದನ್ನು ಸಾಕಾರಗೊಳಿಸುವ ಸಲುವಾಗಿ ಬೆಂಗಳೂರನ್ನು ಸಾಂಸ್ಕೃತಿಕವಾಗಿ, ಆರ್ಥಿಕವಾಗಿ ಅಭಿವೃದ್ಧಿಗೊಳಿಸಿದರು. ಸರ್ವ ಸಮುದಾಯಗಳು ಸೌಹಾರ್ದವಾಗಿ ಬದುಕುವಂತೆ ಮಾಡಿದರು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾನಿಧಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್.ಆರ್.ರಂಗನಾಥ ಮಾತನಾಡಿ, ಬೆಂಗಳೂರು ಅಭಿವೃದ್ಧಿಯೊಂದಿಗೆ ಸುತ್ತಮುತ್ತಲಿನ ಪ್ರದೇಶಗಳು ಅಭಿವೃದ್ಧಿಯಾಗಲು ನಾಡಪ್ರಭು ಕೆಂಪೇಗೌಡ ಅವರ ಕೊಡುಗೆ ಅಪಾರವಾಗಿದೆ. ಬೆಂಗಳೂರು ಇಂದು ಜಾಗತಿಕ ಮಟ್ಟದಲ್ಲಿ ಹೆಸರು ಪಡೆಯಲು ಅಂದು ಕೆಂಪೇಗೌಡ ಅವರ ದೂರದೃಷ್ಟಿಯ ಕನಸು ಕಾರಣವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರುಗಳಾದ ಎನ್.ದಿನೇಶ್, ಸಾದತ್ಉಲ್ಲಾಬೇಗ್, ರವಿಕುಮಾರ್, ಬೈರೇಗೌಡ, ಚೇತನಕುಮಾರ್, ಗೌರಿ, ರಂಜಿತ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

13 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

17 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

24 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 days ago